ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ರಾಜೀನಾಮೆ ಅಂಗೀಕರಿಸಿದ ಪಂಜಾಬ್ ಸಿಎಂ ಚರಣ್​​ಜಿತ್ ಚನ್ನಿ

Punjab Politics ಮುಖ್ಯಮಂತ್ರಿ  ಚರಣ್​​ಜಿತ್ ಸಿಂಗ್ ಚನ್ನಿಮಂಗಳವಾರ ರಾಜ್ಯ ಸಚಿವ ಸಂಪುಟವು ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಹೇಳಿದ್ದಾರೆ.

ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ರಾಜೀನಾಮೆ ಅಂಗೀಕರಿಸಿದ ಪಂಜಾಬ್ ಸಿಎಂ ಚರಣ್​​ಜಿತ್ ಚನ್ನಿ
ಚರಣ್​​ಜಿತ್ ಸಿಂಗ್ ಚನ್ನಿ
Edited By: ರಶ್ಮಿ ಕಲ್ಲಕಟ್ಟ

Updated on: Nov 09, 2021 | 6:26 PM

ಚಂಡೀಗಡ: ನವಜೋತ್ ಸಿಂಗ್ ಸಿಧು (Navjot Singh Sidhu )ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆಯನ್ನು ಹಿಂಪಡೆದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ  ಚರಣ್​​ಜಿತ್ ಸಿಂಗ್ ಚನ್ನಿ(Charanjit Singh Channi) ಮಂಗಳವಾರ ರಾಜ್ಯ ಸಚಿವ ಸಂಪುಟವು ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್  (Advocate General APS Deol) ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ ಸಿಧು ಪಂಜಾಬ್ ಕಾಂಗ್ರೆಸ್ (Punjab Congress) ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆಯನ್ನು ವಾಪಸ್ ಪಡೆದ ನಂತರ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರವು ಡಿಜಿಪಿ ಐ ಪಿ ಎಸ್ ಸಹೋಟಾ ಮತ್ತು ಅಡ್ವೊಕೇಟ್ ಜನರಲ್ ಎ ಪಿ ಎಸ್ ಡಿಯೋಲ್ ಅವರನ್ನು ಬದಲಾಯಿಸಿದ ನಂತರವೇ ಅವರು ಅಧಿಕಾರವನ್ನು ಪುನರಾರಂಭಿಸುವುದಾಗಿ ಪಟ್ಟು ಹಿಡಿದಿದ್ದರು. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಈ ಸೈನಿಕನು ತನ್ನ ರಾಜೀನಾಮೆಯನ್ನು ಹಿಂಪಡೆದಿದ್ದಾನೆ. ಆದರೆ ಆ ದಿನ ನಾವು ಹೊಸ ಎಜಿ ಮತ್ತು ಡಿಜಿಪಿಯನ್ನು ಪಡೆಯುತ್ತೇವೆ, ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ, ”ನೀವು ಸತ್ಯದ ಹಾದಿಯಲ್ಲಿರುವಾಗ, ಹುದ್ದೆಗಳು ಮುಖ್ಯವಲ್ಲ” ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದರು.

ನವೆಂಬರ್ 1 ರಂದು ಡಿಯೋಲ್ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಎಜಿ ಅವರ ರಾಜೀನಾಮೆಯನ್ನು ಸ್ವೀಕರಿಸುವುದನ್ನು ಸರ್ಕಾರ ಖಚಿತಪಡಿಸಿದ್ದರೂ ಈ ವಿಷಯವನ್ನು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದರು. ತಮ್ಮ ಕಚೇರಿಯಲ್ಲಿ ಮುಂದುವರಿಯಲು ಸಾಧ್ಯವಾಗದಿರುವುದಕ್ಕೆ ಎಜಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಆದರೆ, ಸಿಧು  ವಾಗ್ದಾಳಿ ನಡೆಸಿದ ನಂತರ ಸಿಎಂ ರಾಜೀನಾಮೆಯನ್ನು ತಡೆಹಿಡಿದಿದ್ದರು.

ಕಳೆದ ಶುಕ್ರವಾರ ಸಿಧು ಅವರ ಪತ್ರಿಕಾಗೋಷ್ಠಿಯ ನಂತರ 2015 ರ ಕೊಟ್ಕಾಪುರ ಪೊಲೀಸ್ ಫೈರಿಂಗ್ ಘಟನೆಯ ತನಿಖೆಯ ಸ್ಥಿತಿಯ ಬಗ್ಗೆ ರಾಜ್ಯದಲ್ಲಿ ತಮ್ಮ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದರು. ಅದೇ ವೇಳೆ ಎಜಿ ಆಗಿ ಎಪಿಎಸ್ ಡಿಯೋಲ್ ಮತ್ತು ಡಿಜಿಪಿ ಆಗಿ ಇಕ್ಬಾಲ್ ಪ್ರೀತ್ ಸಿಂಗ್ ಸಹೋಟಾ ಅವರನ್ನು ನೇಮಕ ಮಾಡಿದ ವಿಷಯವನ್ನು ಸಿಧು ಪ್ರಶ್ನಿಸಿದ್ದರು. ಎಐಸಿಸಿ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ಚೌಧರಿ ಸೋಮವಾರ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಸಿಧು ಅವರೊಂದಿಗೆ ಸಭೆ ನಡೆಸಿದ್ದರು.

ಇದನ್ನೂ ಓದಿ: ನ್ಯಾಯ ಕುರುಡಾಗಿರಬಹುದು, ಪಂಜಾಬ್‌ನ ಜನರು ಅಲ್ಲ: ನವಜೋತ್ ಸಿಂಗ್ ಸಿಧು

Published On - 6:07 pm, Tue, 9 November 21

Web contact

TV9 Kannada

Read More
Follow Us