AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ದಾಳಿಯ ನಂತರ ಡಿಯೋಲ್ ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಿದ್ದರು. ಹತ್ಯೆ ಮತ್ತು ಪೊಲೀಸ್ ಫೈರಿಂಗ್ ಪ್ರಕರಣದಲ್ಲಿ ಇಬ್ಬರು ಆರೋಪಿ ಪೊಲೀಸರನ್ನು ಪ್ರತಿನಿಧಿಸಿದ್ದಕ್ಕಾಗಿ ಅವರನ್ನು ತೆಗೆದುಹಾಕಬೇಕೆಂದು ಸಿಧು ಬಯಸಿದ್ದರು

ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 02, 2021 | 1:19 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ (Charanjit Singh Channi) ಅವರು ರಾಜ್ಯದ ಅಡ್ವೊಕೇಟ್ ಜನರಲ್ ಹುದ್ದೆಗೆ ಎಪಿಎಸ್ ಡಿಯೋಲ್ (APS Deol) ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ದಾಳಿಯ ನಂತರ ಡಿಯೋಲ್ ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಿದ್ದರು. ಹತ್ಯೆ ಮತ್ತು ಪೊಲೀಸ್ ಫೈರಿಂಗ್ ಪ್ರಕರಣದಲ್ಲಿ ಇಬ್ಬರು ಆರೋಪಿ ಪೊಲೀಸರನ್ನು ಪ್ರತಿನಿಧಿಸಿದ್ದಕ್ಕಾಗಿ ಅವರನ್ನು ತೆಗೆದುಹಾಕಬೇಕೆಂದು ಸಿಧು ಬಯಸಿದ್ದರು. ಈ ಬೆಳವಣಿಗೆಯನ್ನು ರಾಜ್ಯ ಸರ್ಕಾರದ ಮೇಲೆ ಸಿಧು ಅವರ ಸಾರ್ವಜನಿಕ ದಾಳಿಗೆ ಪ್ರತಿಕ್ರಿಯೆಯಾಗಿ ನೋಡಲಾಗುತ್ತದೆ. ಸೋಮವಾರ ಸಿಧು ಅವರು ವಿದ್ಯುತ್ ದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದ ನಂತರ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

“ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಧು ಅವರ ಭಾಷಣವೇ ಡಿಯೋಲ್ ರಾಜೀನಾಮೆ ತಿರಸ್ಕೃತವಾಗಲು ಕಾರಣ ಎಂದು ಹೇಳಲಾಗಿದೆ” ಎಂದು ಮೂಲಗಳು ತಿಳಿಸಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

“ಅವರು (ರಾಜಕಾರಣಿಗಳು) ಲಾಲಿಪಾಪ್‌ಗಳನ್ನು ನೀಡುತ್ತಾರೆ ಇದು ಉಚಿತ, ಅದು ಉಚಿತ, ಇದು ಕಳೆದ ಎರಡು ತಿಂಗಳಲ್ಲಿ (ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ) ಸಂಭವಿಸಿದೆ” ಎಂದು ಸಿಧು ಹೇಳಿದ್ದು ಪಂಜಾಬ್‌ನ ಕಲ್ಯಾಣಕ್ಕಾಗಿ ಮಾತ್ರ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಹಿರಿಯ ವಕೀಲರಾದ ಡಿಯೋಲ್ ಸೆಪ್ಟೆಂಬರ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಅವರು ಅನೌಪಚಾರಿಕವಾಗಿ ನಿರ್ಗಮಿಸಿದ ಬಳಿಕ ಅತುಲ್ ನಂದಾ ಅವರು ಅಡ್ವೊಕೇಟ್-ಜನರಲ್‌ಗೆ ರಾಜೀನಾಮೆ ನೀಡಿದ ನಂತರ ಈ ಹುದ್ದೆಗೆ ನೇಮಕಗೊಂಡಿದ್ದರು. ಡಿಯೋಲ್ ಅವರ ನೇಮಕವು ಪಕ್ಷದೊಳಗೆ ಚರ್ಚೆಯನ್ನು ಹುಟ್ಟುಹಾಕಿತು ಮತ್ತು ಅವರು 2015 ರಲ್ಲಿ ಕೊಟ್ಕಾಪುರ ಮತ್ತು ಬೆಹಬಲ್ ಕಲಾನ್‌ನಲ್ಲಿ ನಡೆದ ಹತ್ಯೆ ಮತ್ತು ನಂತರದ ಪೊಲೀಸ್ ಫೈರಿಂಗ್ ಘಟನೆಗಳಿಗೆ ಸಂಬಂಧಿಸಿದಂತೆ ಮಾಜಿ ಉನ್ನತ ಪೊಲೀಸ್ ಅಧಿಕಾರಿ ಸುಮೇಧ್ ಸಿಂಗ್ ಸೈನಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮರನಂಗಲ್ ಅವರನ್ನು ಪ್ರತಿನಿಧಿಸಿದ್ದರು.

ಸೋಮವಾರ ಡಿಯೋಲ್ ಅವರು ಹುದ್ದೆ ತ್ಯಜಿಸುವ ನಿರ್ಧಾರವನ್ನು ಸಿಧು ಅವರ ಪತ್ನಿ ಸ್ವಾಗತಿಸಿದ್ದರು.

“ಅಟಾರ್ನಿ ಜನರಲ್ (ಎಪಿಎಸ್ ಡಿಯೋಲ್) ಮಾಜಿ ಡಿಜಿಪಿ ಸುಮೇಧ್ ಸಿಂಗ್ ಸೈನಿ ಪರವಾಗಿ ಹಾಜರಾಗಿದ್ದರು. ಅವರು (2015 ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಪ್ರತಿನಿಧಿಸಿದ್ದರು) ನಮ್ಮನ್ನು ಪ್ರತಿನಿಧಿಸಲು ಸಾಧ್ಯವಿಲ್ಲ. ಅಟಾರ್ನಿ ಜನರಲ್ ಅವರನ್ನು ಬದಲಾಯಿಸಬೇಕಾಗಿತ್ತು” ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ನವಜೋತ್ ಕೌರ್ ಸಿಧು ಹೇಳಿದ್ದರು.

ಇದನ್ನೂ ಓದಿ: ಅಮರಿಂದರ್ ಸಿಂಗ್ ಕೃಷಿ ಕಾನೂನುಗಳ ವಾಸ್ತುಶಿಲ್ಪಿ ಎಂದ ಸಿಧು; ಕೃಷಿ ಕಾನೂನುಗಳ ವಿರುದ್ಧ ಹೋರಾಡುವೆ ಎಂದ ಕ್ಯಾಪ್ಟನ್

Published On - 1:18 pm, Tue, 2 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ