AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Candidate List Punjab: ಪಂಜಾಬ್​ನಲ್ಲಿ ಕಾಂಗ್ರೆಸ್​ನಿಂದ ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್​ನಿಂದ ಸ್ಪರ್ಧೆಗಿಳಿಯಲಿದ್ದಾರೆ.

Congress Candidate List Punjab: ಪಂಜಾಬ್​ನಲ್ಲಿ ಕಾಂಗ್ರೆಸ್​ನಿಂದ ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವಜೋತ್​ ಸಿಂಗ್ ಸಿಧು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 15, 2022 | 3:22 PM

ಪಂಜಾಬ್: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 86 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್​ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಅವರು ಡೇರಾ ಬಾಬಾ ನಾನಕ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ರಾಜ್ಯ ಸಾರಿಗೆ ಸಚಿವ ರಾಜಾ ಅಮರಿಂದರ್ ವಾರಿಂಗ್ ಅವರು ಗಿಡ್ದರ್‌ಬಾಹಾದಿಂದ ಸ್ಪರ್ಧಿಸಲಿದ್ದಾರೆ.

ಮೊಗಾ ಕ್ಷೇತ್ರದಿಂದ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರಿಗೆ ಟಿಕೆಟ್ ನೀಡಲಾಗಿದೆ. ಪಂಜಾಬಿ ಗಾಯಕ ಸಿಧು ಮುಸೇವಾಲಾ ಅವರನ್ನು ಮಾನ್ಸಾದಿಂದ ಕಣಕ್ಕಿಳಿಸಲಾಗಿದೆ. ಮಜಿತಾ – ಜಗವಿಂದರ್ ಪಾಲ್ ಸಿಂಗ್ (ಜಗ್ಗ ಮಜಿತಾ), ಅಮೃತಸರ ಪಶ್ಚಿಮ – ರಾಜ್ ಕುಮಾರ್ ವೆರ್ಕಾ, ಫತೇಘರ್ ಸಾಹಿಬ್ – ಕುಲ್ಜೀತ್ ನಗ್ರಾ, ಭಟಿಂಡಾ ಅರ್ಬನ್ – ಮನ್‌ಪ್ರೀತ್ ಸಿಂಗ್ ಬಾದಲ್, ಸಂಗ್ರೂರ್ – ವಿಜಯ್ ಇಂದರ್ ಸಿಂಗ್ಲಾ, ಫತೇಘರ್ ಚುರಿಯನ್ – ಟ್ರಿಪ್ಟ್ ರಾಜಿಂದರ್ ಸಿಂಗ್ ಬಾಜ್ವಾ ಸ್ಪರ್ಧಿಸಲಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಜಿ ರಾಜ್ಯ ಘಟಕ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಸುನೀಲ್ ಜಾಖರ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆದರೆ ಅವರ ಬದಲಿಗೆ ಅವರ ಸೋದರಳಿಯ ಸಂದೀಪ್ ಜಾಖರ್ ಅಬೋಹರ್ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ.

ಪಂಜಾಬ್‌ನಲ್ಲಿ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: BSP Candidate List UP: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ; ಬಿಎಸ್​ಪಿಯಿಂದ 53 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಪಂಜಾಬ್​ನಲ್ಲಿ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ; 2 ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಅದೃಷ್ಟ ಪರೀಕ್ಷೆ

ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ