AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಶಾಸಕರಿಂದ ಪೊಲೀಸರ ಪ್ಯಾಂಟ್ ಒದ್ದೆಯಾಗಬಹುದು ಎಂದ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್ ಜಾರಿ

ಇತ್ತೀಚೆಗೆ ಸುಲ್ತಾನ್‌ಪುರ್ ಲೋಧಿಯಲ್ಲಿ ನಡೆದ ರ್ಯಾಲಿಯಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರನ್ನು ಹೊಗಳಿದ್ದ ನವಜೋತ್ ಸಿಂಗ್ ಸಿಧು, ನವತೇಜ್ ಸಿಂಗ್ ಚೀಮಾ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು.

ಕಾಂಗ್ರೆಸ್​ ಶಾಸಕರಿಂದ ಪೊಲೀಸರ ಪ್ಯಾಂಟ್ ಒದ್ದೆಯಾಗಬಹುದು ಎಂದ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್ ಜಾರಿ
ನವಜೋತ್​ ಸಿಂಗ್ ಸಿಧು
TV9 Web
| Edited By: |

Updated on: Dec 28, 2021 | 4:36 PM

Share

ಚಂಡೀಗಢ: ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳುವ ಮೂಲಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. ತಮ್ಮ ಪಕ್ಷದ ಸದಸ್ಯರನ್ನು ಹೊಗಳುವ ನವಜೋತ್ ಸಿಂಗ್ ಸಿಧು ಅವರ ಭಾಷಣದ ವಿಡಿಯೋ ವೈರಲ್ ಆಗಿದ್ದು, ಪಂಜಾಬ್ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ನವಜೋತ್ ಸಿಂಗ್ ಸಿಧು ಅವರ ಈ ಅವಹೇಳನಕಾರಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಸಿಧುಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ.

“ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ನವಜೋತ್ ಸಿಂಗ್ ಸಿಧು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ” ಎಂದು ಚಂಡೀಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಹೇಳಿದ್ದಾರೆ.

ಈ ಹೇಳಿಕೆಯನ್ನು ಖಂಡಿಸಿ ಸಬ್ ಇನ್ಸ್‌ಪೆಕ್ಟರ್ ಕೂಡ ವಿಡಿಯೋ ಸಂದೇಶವನ್ನು ನೀಡಿದ್ದಾರೆ. ಲುಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಪೊಲೀಸರನ್ನು ಬೆಂಬಲಿಸಿದ್ದಾರೆ ಮತ್ತು ಕೋವಿಡ್-19 ಸಮಯದಲ್ಲಿ ಪೊಲೀಸರ ಪಾತ್ರಕ್ಕಾಗಿ ಅವರನ್ನು ಹೊಗಳಿದ್ದಾರೆ.

ಇತ್ತೀಚೆಗೆ ಸುಲ್ತಾನ್‌ಪುರ್ ಲೋಧಿಯಲ್ಲಿ ನಡೆದ ರ್ಯಾಲಿಯಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರನ್ನು ಹೊಗಳಿದ್ದ ನವಜೋತ್ ಸಿಂಗ್ ಸಿಧು, ನವತೇಜ್ ಸಿಂಗ್ ಚೀಮಾ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಅದಾದ ಮೇಲೂ ಮತ್ತೆ ಅವಹೇಳನಕಾರಿ ಹೇಳಿಕೆಯನ್ನು ಮುಂದುವರೆಸಿದ್ದ ನವಜೋತ್ ಸಿಂಗ್ ಸಿಧು ಭಾನುವಾರ ಬಟಾಲಾದಲ್ಲಿ ನಡೆದ ರ್ಯಾಲಿಯಲ್ಲಿ ಅವರು ತಮ್ಮ ಪಕ್ಕದಲ್ಲಿ ನಿಂತಿದ್ದ ಸ್ಥಳೀಯ ನಾಯಕ ಅಶ್ವನಿ ಸೆಖ್ರಿಯನ್ನು ಹೊಗಳುತ್ತಾ ಇದೇ ಹೇಳಿಕೆ ನೀಡಿದ್ದರು.

ನವಜೋತ್ ಸಿಂಗ್ ಸಿಧು ಅವರ ಹೇಳಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ನನ್ನ ಹೇಳಿಕೆಯನ್ನು ಯಥಾರ್ಥವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದರು. ನಾನು ಕಾಂಗ್ರೆಸ್ ನಾಯಕರಿಗೆ ಅಂತಹ ಅಧಿಕಾರವಿದೆ ಎಂದು ಹೇಳಿದ್ದಷ್ಟೆ ಎಂದು ಹೇಳಿದ್ದರು.

ನವಜೋತ್ ಸಿಂಗ್ ಸಿಧು ಹೇಳಿಕೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಗ್ರಂಥಗಳನ್ನು ಅಪವಿತ್ರಗೊಳಿಸಿದ ಅಪರಾಧಿಗಳನ್ನು ಗಲ್ಲಿಗೇರಿಸಿ: ನವಜೋತ್ ಸಿಂಗ್ ಸಿಧು

ಅಮರಿಂದರ್ ಸಿಂಗ್ ದುರಹಂಕಾರಿ ರಾಜ; ಪಂಜಾಬ್ ಲೋಕ ಕಾಂಗ್ರೆಸ್-ಬಿಜೆಪಿ ಮೈತ್ರಿ ಬಗ್ಗೆ ನವಜೋತ್ ಸಿಂಗ್ ಸಿಧು ವಾಗ್ದಾಳಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ