AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಶಾಸಕರಿಂದ ಪೊಲೀಸರ ಪ್ಯಾಂಟ್ ಒದ್ದೆಯಾಗಬಹುದು ಎಂದ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್ ಜಾರಿ

ಇತ್ತೀಚೆಗೆ ಸುಲ್ತಾನ್‌ಪುರ್ ಲೋಧಿಯಲ್ಲಿ ನಡೆದ ರ್ಯಾಲಿಯಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರನ್ನು ಹೊಗಳಿದ್ದ ನವಜೋತ್ ಸಿಂಗ್ ಸಿಧು, ನವತೇಜ್ ಸಿಂಗ್ ಚೀಮಾ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು.

ಕಾಂಗ್ರೆಸ್​ ಶಾಸಕರಿಂದ ಪೊಲೀಸರ ಪ್ಯಾಂಟ್ ಒದ್ದೆಯಾಗಬಹುದು ಎಂದ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್ ಜಾರಿ
ನವಜೋತ್​ ಸಿಂಗ್ ಸಿಧು
TV9 Web
| Edited By: |

Updated on: Dec 28, 2021 | 4:36 PM

Share

ಚಂಡೀಗಢ: ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳುವ ಮೂಲಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. ತಮ್ಮ ಪಕ್ಷದ ಸದಸ್ಯರನ್ನು ಹೊಗಳುವ ನವಜೋತ್ ಸಿಂಗ್ ಸಿಧು ಅವರ ಭಾಷಣದ ವಿಡಿಯೋ ವೈರಲ್ ಆಗಿದ್ದು, ಪಂಜಾಬ್ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ನವಜೋತ್ ಸಿಂಗ್ ಸಿಧು ಅವರ ಈ ಅವಹೇಳನಕಾರಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಸಿಧುಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ.

“ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ನವಜೋತ್ ಸಿಂಗ್ ಸಿಧು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ” ಎಂದು ಚಂಡೀಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಹೇಳಿದ್ದಾರೆ.

ಈ ಹೇಳಿಕೆಯನ್ನು ಖಂಡಿಸಿ ಸಬ್ ಇನ್ಸ್‌ಪೆಕ್ಟರ್ ಕೂಡ ವಿಡಿಯೋ ಸಂದೇಶವನ್ನು ನೀಡಿದ್ದಾರೆ. ಲುಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಪೊಲೀಸರನ್ನು ಬೆಂಬಲಿಸಿದ್ದಾರೆ ಮತ್ತು ಕೋವಿಡ್-19 ಸಮಯದಲ್ಲಿ ಪೊಲೀಸರ ಪಾತ್ರಕ್ಕಾಗಿ ಅವರನ್ನು ಹೊಗಳಿದ್ದಾರೆ.

ಇತ್ತೀಚೆಗೆ ಸುಲ್ತಾನ್‌ಪುರ್ ಲೋಧಿಯಲ್ಲಿ ನಡೆದ ರ್ಯಾಲಿಯಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರನ್ನು ಹೊಗಳಿದ್ದ ನವಜೋತ್ ಸಿಂಗ್ ಸಿಧು, ನವತೇಜ್ ಸಿಂಗ್ ಚೀಮಾ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಅದಾದ ಮೇಲೂ ಮತ್ತೆ ಅವಹೇಳನಕಾರಿ ಹೇಳಿಕೆಯನ್ನು ಮುಂದುವರೆಸಿದ್ದ ನವಜೋತ್ ಸಿಂಗ್ ಸಿಧು ಭಾನುವಾರ ಬಟಾಲಾದಲ್ಲಿ ನಡೆದ ರ್ಯಾಲಿಯಲ್ಲಿ ಅವರು ತಮ್ಮ ಪಕ್ಕದಲ್ಲಿ ನಿಂತಿದ್ದ ಸ್ಥಳೀಯ ನಾಯಕ ಅಶ್ವನಿ ಸೆಖ್ರಿಯನ್ನು ಹೊಗಳುತ್ತಾ ಇದೇ ಹೇಳಿಕೆ ನೀಡಿದ್ದರು.

ನವಜೋತ್ ಸಿಂಗ್ ಸಿಧು ಅವರ ಹೇಳಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ನನ್ನ ಹೇಳಿಕೆಯನ್ನು ಯಥಾರ್ಥವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದರು. ನಾನು ಕಾಂಗ್ರೆಸ್ ನಾಯಕರಿಗೆ ಅಂತಹ ಅಧಿಕಾರವಿದೆ ಎಂದು ಹೇಳಿದ್ದಷ್ಟೆ ಎಂದು ಹೇಳಿದ್ದರು.

ನವಜೋತ್ ಸಿಂಗ್ ಸಿಧು ಹೇಳಿಕೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಗ್ರಂಥಗಳನ್ನು ಅಪವಿತ್ರಗೊಳಿಸಿದ ಅಪರಾಧಿಗಳನ್ನು ಗಲ್ಲಿಗೇರಿಸಿ: ನವಜೋತ್ ಸಿಂಗ್ ಸಿಧು

ಅಮರಿಂದರ್ ಸಿಂಗ್ ದುರಹಂಕಾರಿ ರಾಜ; ಪಂಜಾಬ್ ಲೋಕ ಕಾಂಗ್ರೆಸ್-ಬಿಜೆಪಿ ಮೈತ್ರಿ ಬಗ್ಗೆ ನವಜೋತ್ ಸಿಂಗ್ ಸಿಧು ವಾಗ್ದಾಳಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ