Sign In

By signing in or creating an account, you agree with Associated Broadcasting Company's Terms & Conditions and Privacy Policy.

Navjot Singh Sidhu ಪಂಜಾಬ್​​ನ 13 ಸಮಸ್ಯೆಗಳ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದ ನವಜೋತ್ ಸಿಂಗ್ ಸಿಧು

Punjab Politics ರಾಹುಲ್ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಧು "ನನ್ನಲ್ಲಿರುವ ಬೇಗುದಿಯನ್ನು ರಾಹುಲ್ ಜಿ ಜೊತೆ ಹಂಚಿಕೊಂಡೆ. ಆ ಎಲ್ಲಾ ಬೇಗುದಿಗಳನ್ನು ಬಗೆಹರಿಸಲಾಗಿದೆ ಎಂದಿದ್ದಾರೆ. ಆದಾಗ್ಯೂ ಸಿಧು ತಮ್ಮ ರಾಜೀನಾಮೆ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.

Navjot Singh Sidhu ಪಂಜಾಬ್​​ನ 13 ಸಮಸ್ಯೆಗಳ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 17, 2021 | 2:25 PM

ದೆಹಲಿ: ಪಂಜಾಬ್ ಕಾಂಗ್ರೆಸ್ (Punjab Congress) ನಾಯಕ ನವಜೋತ್ ಸಿಂಗ್ ಸಿಧು (Navjot Singh Sidhu)ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಪತ್ರ ಬರೆದಿದ್ದು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಪಕ್ಷದ ಪ್ರಚಾರಕ್ಕಾಗಿ 13 ಅಂಶಗಳ ಕಾರ್ಯಸೂಚಿಯನ್ನು ಮಂಡಿಸಲು ಸಭೆಯನ್ನು ಕೋರಿದರು. ಇದು “ಪುನರುತ್ಥಾನ ಮತ್ತು ಉದ್ಧಾರಕ್ಕಾಗಿ ಪಂಜಾಬ್‌ನ ಕೊನೆಯ ಅವಕಾಶ” ಎಂದು ಹೇಳಿದ ಸಿಧು ಸೋನಿಯಾ ಗಾಂಧಿಯವರೊಂದಿಗೆ ವೈಯಕ್ತಿಕ ಭೇಟಿಗೆ ಮನವಿ ಮಾಡಿದ್ದಾರೆ. ಪವಿತ್ರ ಗ್ರಂಥ ಅಪವಿತ್ರಗೊಳಿಸಿದ ಪ್ರಕರಣಗಳಲ್ಲಿ ನ್ಯಾಯ, ಪಂಜಾಬ್‌ನ ಮಾದಕ ದ್ರವ್ಯಗಳ ಕಾಟ, ಕೃಷಿ ಸಮಸ್ಯೆಗಳು, ಉದ್ಯೋಗಾವಕಾಶಗಳು, ಮರಳು ಗಣಿಗಾರಿಕೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮೊದಲಾದ ಸಮಸ್ಯೆಗಳನ್ನು ಪತ್ರದಲ್ಲಿ ಸಿಧು ಹೈಲೈಟ್ ಮಾಡಿದ್ದಾರೆ. ಅಕ್ಟೋಬರ್ 15 ರಂದು ಬರೆದ ಪತ್ರವನ್ನು ಸಿಧು ಭಾನುವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಿಧು ಸೆಪ್ಟೆಂಬರ್ 28 ರಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದಿದ್ದು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಈ ವಾರದ ಆರಂಭದಲ್ಲಿ ಸಿಧು ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಾವತ್ ಅವರನ್ನು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಭೇಟಿಯಾದ ಒಂದು ದಿನದ ನಂತರ ಗಾಂಧಿ ಅವರನ್ನು ಸಿಧು ಭೇಟಿ ಆಗಿದ್ದರು. ರಾಹುಲ್- ಸಿಧು ಭೇಟಿಯ ಸಮಯದಲ್ಲಿ ರಾವತ್ ಕೂಡ ಹಾಜರಿದ್ದರು. ಈ ಭೇಟಿ ಒಂದೂವರೆ ಗಂಟೆಗಳ ಕಾಲ ನಡೆಯಿತು.

ಸಿಧು ಅವರ ಬೇಗುದಿ ಪರಿಹರಿಸಲಾಗುವುದು ಮತ್ತು ಅವರು ಶೀಘ್ರದಲ್ಲೇ ರಾಜ್ಯ ಮುಖ್ಯಸ್ಥರಾಗಿ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುತ್ತಾರೆ ಎಂದು ರಾವತ್ ಶುಕ್ರವಾರ ಹೇಳಿದ್ದಾರೆ.

ರಾಹುಲ್ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಧು “ನನ್ನಲ್ಲಿರುವ ಬೇಗುದಿಯನ್ನು ರಾಹುಲ್ ಜಿ ಜೊತೆ ಹಂಚಿಕೊಂಡೆ. ಆ ಎಲ್ಲಾ ಬೇಗುದಿಗಳನ್ನು ಬಗೆಹರಿಸಲಾಗಿದೆ ಎಂದಿದ್ದಾರೆ. ಆದಾಗ್ಯೂ ಸಿಧು ತಮ್ಮ ರಾಜೀನಾಮೆ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.

ವೇಣುಗೋಪಾಲ್ ಮತ್ತು ರಾವತ್ ಅವರೊಂದಿಗಿನ ಭೇಟಿಯಲ್ಲಿ, ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಸರ್ಕಾರವು ಕೈಗೊಂಡ 18 ಅಂಶಗಳ ಕಾರ್ಯಸೂಚಿಯ ಬಗ್ಗೆ ಸಿಧು ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಇವುಗಳಲ್ಲಿ ಸರ್ಕಾರದ ಸಮಸ್ಯೆ ಮತ್ತು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಘಟಕದಲ್ಲಿ ದೀರ್ಘಕಾಲದ ಒಳಜಗಳದ ನಂತರ, ಅಮರಿಂದರ್ ಸಿಂಗ್ ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡಿದ್ದರು ಮತ್ತು ಚರಣ್​​ಜಿತ್ ಸಿಂಗ್ ಚನ್ನಿ ಹೊಸ ನಾಯಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಜುಲೈ 19 ರಂದು ಪಿಪಿಸಿಸಿ ಮುಖ್ಯಸ್ಥರಾಗಿ ನೇಮಕಗೊಂಡ ಸಿಧು,  ಚರಣ್​​ಜಿತ್  ಸಿಂಗ್ ಚನ್ನಿ ನೇತೃತ್ವದ ಹೊಸ ಸರ್ಕಾರದಲ್ಲಿ ಸಚಿವರಿಗೆ ಖಾತೆಗಳನ್ನು ಹಂಚಿದ ಕೆಲವೇ ನಿಮಿಷಗಳಲ್ಲಿ ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡಿದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಕೆಲವು ನಿರ್ಣಾಯಕ ನಿರ್ಧಾರಗಳಲ್ಲಿ ಸಿಧು ತಮ್ಮ ಅಭಿಪ್ರಾಯವನ್ನು ಹೇಳಿದ್ದರೂ, ಕೆಲವರ ನೇಮಕಾತಿಯಲ್ಲಿ ಅವರ ಸಲಹೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಕೋಪಗೊಂಡರು ಎಂದು ಪಂಜಾಬ್‌ನ ಬೆಳವಣಿಗೆಗಳ ಬಗ್ಗೆ ತಿಳಿದಿರುವ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ನಾಯಕರ ನಿರ್ಧಾರಕ್ಕೆ ಬದ್ಧ ರಾಜೀನಾಮೆ ಹಿಂಪಡೆಯುವ ಸುಳಿವು ನೀಡಿದ ನವಜೋತ್ ಸಿಂಗ್ ಸಿಧು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ