Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಖಪಾಲ್ ಖೈರಾ ಬಂಧನ: ಸ್ಥಿತಿಗತಿ ವರದಿ ಕೇಳಿದ ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್

ಸುಖಪಾಲ್ ಖೈರಾ ಬಂಧನದ ನಂತರ, ಮಾದಕವಸ್ತು ಕಳ್ಳಸಾಗಣೆಯೊಂದಿಗೆ ಅವರ ಸಂಪರ್ಕವನ್ನು ತನಿಖೆ ಮಾಡಲು ಸರ್ಕಾರವು ಎಸ್‌ಐಟಿಯನ್ನು ರಚಿಸಿದೆ. ಖೈರಾ ಬಂಧನದ ವಿರುದ್ಧ ಪಂಜಾಬ್ ಕಾಂಗ್ರೆಸ್‌ನ ಹಿರಿಯ ನಾಯಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಖೈರಾ ಬಂಧನವನ್ನು ರಾಜಕೀಯ ದ್ವೇಷ ಎಂದು ಕರೆದಿದೆ.

ಸುಖಪಾಲ್ ಖೈರಾ ಬಂಧನ: ಸ್ಥಿತಿಗತಿ ವರದಿ ಕೇಳಿದ ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್
ಸುಖಪಾಲ್ ಖೈರಾ
Follow us
ರಶ್ಮಿ ಕಲ್ಲಕಟ್ಟ
|

Updated on:Oct 02, 2023 | 1:51 PM

ಚಂಡೀಗಢ ಅಕ್ಚೋಬರ್ 02: ಕಾಂಗ್ರೆಸ್ (Congress) ಶಾಸಕ ಸುಖಪಾಲ್ ಸಿಂಗ್ ಖೈರಾ (Sukhpal khaira) ಬಂಧನ ಪಂಜಾಬ್ (Punjab) ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯುಂಟು ಮಾಡಿದೆ. ಆದಾಗ್ಯೂ, ಈ ಕುರಿತು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರು ಡಿಜಿಪಿ ಗೌರವ್ ಯಾದವ್ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ರಾಜ್ಯಪಾಲರು ಪತ್ರ ಬರೆದು ಡಿಜಿಪಿ ಅವರಿಂದ ಉತ್ತರ ಕೇಳಿದ್ದಾರೆ. ಅದೇ ಸಮಯದಲ್ಲಿ, ಇಡೀ ಪ್ರಕರಣದ ಸ್ಥಿತಿ ವರದಿಯನ್ನು ಸಹ ಎಸ್‌ಐಟಿಯಿಂದ ಕೇಳಲಾಗಿದೆ.

ಸುಖಪಾಲ್ ಖೈರಾ ಬಂಧನದ ನಂತರ, ಮಾದಕವಸ್ತು ಕಳ್ಳಸಾಗಣೆಯೊಂದಿಗೆ ಅವರ ಸಂಪರ್ಕವನ್ನು ತನಿಖೆ ಮಾಡಲು ಸರ್ಕಾರವು ಎಸ್‌ಐಟಿಯನ್ನು ರಚಿಸಿದೆ. ಖೈರಾ ಬಂಧನದ ವಿರುದ್ಧ ಪಂಜಾಬ್ ಕಾಂಗ್ರೆಸ್‌ನ ಹಿರಿಯ ನಾಯಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಖೈರಾ ಬಂಧನವನ್ನು ರಾಜಕೀಯ ದ್ವೇಷ ಎಂದು ಕರೆದಿದೆ. ಕಾಂಗ್ರೆಸ್, ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದು ಪೊಲೀಸರ ವಿರುದ್ಧವೂ ಪ್ರತಿಭಟನೆ ನಡೆಸುತ್ತಿದೆ.

ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಾಕ್ಸಮರ

ಬಹಳ ಸಮಯದಿಂದ ಪಂಜಾಬ್ ಸರ್ಕಾರ ಮತ್ತು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರು ಅನೇಕ ವಿಷಯಗಳಲ್ಲಿ ಪರಸ್ಪರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರ್ಕಾರದ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರು ನಿರಾಕರಿಸಿ, ಇಡೀ ಅಧಿವೇಶನವನ್ನು ಕಾನೂನುಬಾಹಿರವೆಂದು ಘೋಷಿಸಿದಾಗ ವಿಷಯ ಹದಗೆಟ್ಟಿತು. ಇದೀಗ ಮತ್ತೊಮ್ಮೆ ಸುಖಪಾಲ್ ಖೈರಾ ಬಂಧನಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಂಘರ್ಷ ಹೆಚ್ಚಾಗುವ ಭೀತಿ ಎದುರಾಗಿದೆ.

ರಾಜಕೀಯ ಜಟಾಪಟಿಗೆ ಕಾರಣವಾದ ಖೈರಾ ಬಂಧನ

ಸೆಪ್ಟೆಂಬರ್ 28 ರಂದು, ಪಂಜಾಬ್ ಪೊಲೀಸರು ಖೈರಾ ಅವರ ಚಂಡೀಗಢ ನಿವಾಸದ ಮೇಲೆ ಬೆಳಿಗ್ಗೆ 5 ಗಂಟೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದರು. 2015ರ ಎನ್‌ಡಿಪಿಎಸ್ ಪ್ರಕರಣದಲ್ಲಿ ಖೈರಾ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅದೇ ದಿನ ಖೈರಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ರಿಮಾಂಡ್ ನೀಡಲಾಗಿದೆ. ಈ ರಿಮಾಂಡ್ ಮುಗಿದ ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: 5 ವರ್ಷಗಳಲ್ಲಿ ಕಾಂಗ್ರೆಸ್ ರಾಜಸ್ಥಾನದ ಗುರುತನ್ನು ನಾಶಪಡಿಸಿದೆ: ಪ್ರಧಾನಿ ನರೇಂದ್ರ ಮೋದಿ 

ಏನಿದು ಪ್ರಕರಣ?

2015 ರಲ್ಲಿ, ಜಲಾಲಾಬಾದ್ ಪೊಲೀಸರು ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ದಿಲ್ವಾನ್ ಗುರುದೇವ್ ಸಿಂಗ್ ಸೇರಿದಂತೆ 9 ಜನರನ್ನು ಬಂಧಿಸಿದ್ದರು. ಇವರಿಂದ 2 ಕೆಜಿ ಹೆರಾಯಿನ್, 24 ಚಿನ್ನದ ಬಿಸ್ಕತ್‌ಗಳು, ಒಂದು ದೇಶ ನಿರ್ಮಿತ .315 ಬೋರ್ ಪಿಸ್ತೂಲ್, ಎರಡು ಪಾಕಿಸ್ತಾನಿ ಸಿಮ್ ಕಾರ್ಡ್‌ಗಳು ಮತ್ತು ಟಾಟಾ ಸಫಾರಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ, ಖೈರಾ ಅವರ ಹೆಸರು ಮುಂಚೂಣಿಗೆ ಬಂದಿದ್ದು, ಅವರು ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಗುರುದೇವ್ ಸಿಂಗ್ ಅವರೊಂದಿಗೆ ಸಂಬಂಧ ಹೊಂದಿದ್ದರು.

ಖೈರಾ ಅವರೊಂದಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಜೋಗಾ ಸಿಂಗ್, ವೈಯಕ್ತಿಕ ಸಹಾಯಕ ಮನೀಶ್, ಬಾತ್ (ಜಲಂಧರ್) ಗ್ರಾಮದ ವ್ಯಕ್ತಿ, ಎನ್‌ಆರ್‌ಐ ಯುಕೆ ನಿವಾಸಿ ಚರಂಜಿತ್ ಕೌರ್ ಮತ್ತು ಬಜ್ವಾ ಕಲಾನ್ ಗ್ರಾಮದ (ಜಲಂಧರ್) ಮೇಜರ್ ಸಿಂಗ್ ಬಜ್ವಾ ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Mon, 2 October 23

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್