AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪ್ರಕರಣದಲ್ಲಿ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂಯೆ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್​ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಶೀಘ್ರದಲ್ಲೇ ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಭುಲಾತ್‌ನ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೇಹ್ರಾ ಅವರನ್ನು ಜಲಾಲಾಬಾದ್ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.

ಡ್ರಗ್ಸ್​ ಪ್ರಕರಣದಲ್ಲಿ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ
ಸುಖ್​ಪಾಲ್ ಸಿಂಗ್Image Credit source: Amarujala.com
ನಯನಾ ರಾಜೀವ್
|

Updated on:Sep 28, 2023 | 8:31 AM

Share

ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂಯೆ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್​ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಶೀಘ್ರದಲ್ಲೇ ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಭುಲಾತ್‌ನ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಜಲಾಲಾಬಾದ್ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.

ಜಲಾಲಾಬಾದ್ ಪೊಲೀಸರು ಚಂಡೀಗಢದಲ್ಲಿರುವ ಖೈರಾ ಅವರ ನಿವಾಸವನ್ನು ತಲುಪಿದ್ದಾರೆ. ಅವರ ವಿರುದ್ಧ ಹಳೆಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣವಿದ್ದು, ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಲಾಲಾಬಾದ್ ಪೊಲೀಸರು ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ತಮ್ಮ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಪೊಲೀಸರು 10 ಗಂಟೆಯ ಸುಮಾರಿಗೆ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಪೊಲೀಸರು ಅವರ ಮನೆಗೆ ಬಂದಿದ್ದಾಗ, ಖೈರಾ ಫೇಸ್​ಬುಕ್ ಲೈವ್ ಬಂದಿದ್ದರು. ಅದರಲ್ಲಿ ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿದ್ದರು. ವೀಡಿಯೋದಲ್ಲಿ ಅವರು ವಾರೆಂಟ್ ಕೇಳುವುದು ಮತ್ತು ಬಂಧನಕ್ಕೆ ಕಾರಣವೇನು ಎಂದು ಕೇಳುವುದನ್ನು ಕೇಳಬಹುದು.

ಮತ್ತಷ್ಟು ಓದಿ: ಉದ್ಯಮಿ ಕುಟುಂಬದ ಭೀಕರ ಆತ್ಮಹತ್ಯೆ ಪ್ರಕರಣ; ತೆಲಂಗಾಣ ಆಡಳಿತ ಪಕ್ಷ ಟಿಆರ್​ಎಸ್ ಶಾಸಕನ ಪುತ್ರ ವನಮಾ ರಾಘವೇಂದ್ರ ರಾವ್​ ಬಂಧನ

ಡಿಎಸ್​ಪಿ  ಜಲಾಲಾಬಾದ್ ಅಚ್ಚ್ರು ರಾಮ್ ಶರ್ಮಾ ಅವರು ಮಾತನಾಡಿ, ಖೈರಾರನ್ನು ಹಳೆಯ NDPS ಪ್ರಕರಣಕ್ಕಾಗಿ ಬಂಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ ಮತ್ತು ಬಂಧನವನ್ನು ವಿರೋಧಿಸುತ್ತದೆ ಎಂದು ಖೈರಾ ಹೇಳಿಕೊಂಡಿದ್ದಾರೆ. ಈ ನಡೆ ರಾಜಕೀಯ ಪ್ರೇರಿತ ಎಂದು ಅವರು ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ಅವರನ್ನು ಜಲಾಲಾಬಾದ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Thu, 28 September 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ