AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಫ್ಲೈಓವರ್​​ ಮೇಲೆ ಪ್ರಧಾನಿ ಮೋದಿ ಕಾಯುತ್ತಿದ್ದರೆ, ಇತ್ತ ಪಂಜಾಬ್ ಪೊಲೀಸರು ಪ್ರತಿಭಟನಾಕಾರರೊಂದಿಗೆ ಟೀ ಕುಡಿಯುತ್ತಿದ್ದರು !

ಸ್ಥಳದಲ್ಲಿ ನಿನ್ನೆ ನಡೆದ ಘಟನೆಯನ್ನು ಸ್ಥಳೀಯರು ಹಲವರು ವಿಡಿಯೋ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಹಾಗೇ, ಪಂಜಾಬ್​ ಪೊಲೀಸರು ಚಹಾ ಕುಡಿಯುತ್ತಿರುವ ವಿಡಿಯೋಗಳೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Video: ಫ್ಲೈಓವರ್​​ ಮೇಲೆ ಪ್ರಧಾನಿ ಮೋದಿ ಕಾಯುತ್ತಿದ್ದರೆ, ಇತ್ತ ಪಂಜಾಬ್ ಪೊಲೀಸರು ಪ್ರತಿಭಟನಾಕಾರರೊಂದಿಗೆ ಟೀ ಕುಡಿಯುತ್ತಿದ್ದರು !
ಟೀ ಕುಡಿಯುತ್ತಿರುವ ಪೊಲೀಸರು
TV9 Web
| Edited By: |

Updated on:Jan 06, 2022 | 10:42 AM

Share

ಕಾಂಗ್ರೆಸ್ ಆಡಳಿತವಿರುವ ಪಂಜಾಬ್​ನಲ್ಲಿ ನಿನ್ನೆ ಪ್ರಧಾನಿ (Prime Minister Security Breach) ಭದ್ರತೆಗೆ ಬಹುದೊಡ್ಡ ಮಟ್ಟದಲ್ಲಿ ಲೋಪವಾಗಿದೆ. ಇದರ ವಿರುದ್ಧ ಬಿಜೆಪಿ, ದೇಶದ ಅನೇಕ ನಾಗರಿಕರು, ಅಷ್ಟೇ ಅಲ್ಲ ಕಾಂಗ್ರೆಸ್​, ಶಿವಸೇನೆ ಇನ್ನಿತರ ಪ್ರತಿಪಕ್ಷಗಳ ಮುಖಂಡರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹವಾಮಾನ ಕೆಟ್ಟದಾಗಿದ್ದರಿಂದ ಅವರು ರಸ್ತೆ ಮಾರ್ಗದ ಮೂಲಕ ಫಿರೋಜ್​ಪುರಕ್ಕೆ ಹೊರಟಿದ್ದರು. ಅಲ್ಲಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಅಷ್ಟೇ ಅಲ್ಲ, ರ್ಯಾಲಿಯೂ ಇತ್ತು. ಆದರೆ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರು ಫ್ಲೈಓವರ್​ ಮೇಲೆ 20 ನಿಮಿಷ ಕಾಯುವಂತಾಯ್ತು. ಅಷ್ಟಾದರೂ ಮುಂದೆ ಹೋಗಲು ಸಾಧ್ಯವಾಗದೆ ದೆಹಲಿಗೆ ವಾಪಸ್ ಆಗಿದ್ದಾರೆ. ಇಷ್ಟಾದರೂ ಪಂಜಾಬ್ ಸರ್ಕಾರ ಮಾತ್ರ, ಪ್ರಧಾನಿ ಮೋದಿ ಭದ್ರತೆಯಲ್ಲಿ ಯಾವುದೇ ಲೋಪವಾಗಲಿಲ್ಲ ಎಂದೇ ಹೇಳುತ್ತಿದೆ. ಇದೆಲ್ಲದರ ಮಧ್ಯೆ ವಿಡಿಯೋವೊಂದು ವೈರಲ್ ಆಗಿದ್ದು, ಹುಬ್ಬೇರುವಂತೆ ಮಾಡಿದೆ. ಅತ್ತ ಫ್ಲೈಓವರ್​ ಮೇಲೆ ಪ್ರಧಾನಿ ಮೋದಿ ವಾಹನ ಮತ್ತು ಬೆಂಗಾವಲು ಪಡೆಗಳೆಲ್ಲ ಕಾಯುತ್ತ ನಿಂತಿದ್ದರೆ, ಇತ್ತ ಪಂಜಾಬ್​ ಪೊಲೀಸರು ಪ್ರತಿಭಟನಾಕಾರರೊಟ್ಟಿಗೆ ಚಹಾ ಕುಡಿಯುತ್ತಿರುವ ವಿಡಿಯೋ ಇದು. ಇದೀಗ ವ್ಯಾಪಕವಾಗಿ ವೈರಲ್ ಆಗುತ್ತಿದೆ.  

ಸ್ಥಳದಲ್ಲಿ ನಿನ್ನೆ ನಡೆದ ಘಟನೆಯನ್ನು ಸ್ಥಳೀಯರು ಹಲವರು ವಿಡಿಯೋ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಹಾಗೇ, ಪಂಜಾಬ್​ ಪೊಲೀಸರು ಚಹಾ ಕುಡಿಯುತ್ತಿರುವ ವಿಡಿಯೋಗಳೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಟಿಂಡಾ ವಿಮಾನ ನಿಲ್ದಾಣದಲ್ಲಿ ಇಳಿದಾಗ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿಯಾಗಲೀ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿ ಅಥವಾ ಪಂಜಾಬ್​ ಡಿಜಿಪಿಯಾಗಲೀ ಅಲ್ಲಿಗೆ ಹೋಗಿಲ್ಲ. ಈ ಬಗ್ಗೆಯೂ ಪ್ರಶ್ನೆ ಎತ್ತಲಾಗಿದೆ. ಆದರೆ ಛನ್ನಿ, ತಮ್ಮ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿದೆ. ಈ ಕಾರಣಕ್ಕೆ ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಹೋಗಲಿಲ್ಲ ಎಂದಿದ್ದಾರೆ.

ಇದೊಂದು ಪಿತೂರಿ? ಹೀಗೊಂದು ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿಯಂತೂ ಇದೊಂದು ಪಕ್ಕಾ ಪೂರ್ವನಿರ್ಧರಿತ ಪಿತೂರಿ ಎಂದೇ ಪ್ರತಿಪಾದಿಸುತ್ತಿದೆ. ನಿನ್ನೆ ಮುಂಜಾನೆ 7.40ರ ಹೊತ್ತಿಗೆ ಅಂದರೆ ಪಂಜಾಬ್​ಗೆ ಪ್ರಧಾನಿ ಮೋದಿ ತಲುಪುವುದಕ್ಕೂ ಮೊದಲು, ಕಾಂಗ್ರೆಸ್​ ತನ್ನ ಟ್ವಿಟರ್​ ಅಕೌಂಟ್​​ನಲ್ಲಿ ಒಂದು ಪೋಸ್ಟ್ ಹಾಕಿತ್ತು. ಅದು ಐಎನ್​ಸಿಯ ಟೆಲಿವಿಷನ್​ನ ಟ್ವಿಟರ್ ಅಕೌಂಟ್​. ಅದರಲ್ಲಿ, ಪಂಜಾಬ್​ನಲ್ಲಿ ಪ್ರಧಾನಿ ಮೋದಿ ಭೇಟಿಗೆ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್​ ಅಭಿಯಾನ ಶುರುವಾಗಿದೆ ಎಂದು ಹೇಳಿತ್ತು. ಹಾಗೇ, ಗೋ ಬ್ಯಾಕ್​ ಮೋದಿ (ಮೋದಿ ಹಿಂತಿರುಗಿ) ಎಂಬ ಫೋಟೋಗಳನ್ನು ಹಂಚಿಕೊಂಡಿದ್ದ ರೈತ ಸಂಘಟನೆಗಳ ಫೋಟೋವನ್ನೂ ಹಂಚಿಕೊಂಡಿತ್ತು. ಅದಕ್ಕೆ ತಕ್ಕಂತೆ ಪ್ರಧಾನಿ ಮೋದಿ ಅರ್ಧಧಾರಿಗೆ ಬಂದು ಹಿಂದಿರುಗಿದರು. ಹಾಗಾಗಿ ಇದೊಂದು ಪಕ್ಕಾ ಪ್ಲ್ಯಾನ್​ ಎಂದು ಬಿಜೆಪಿ ಪ್ರತಿಪಾದಿಸಿದೆ. ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಪಂಜಾಬ್ ಸರ್ಕಾರದಿಂದ ವರದಿಯನ್ನೂ ಕೇಳಿದೆ.

ಇದನ್ನೂ ಓದಿ: ಭಾರತದಲ್ಲಿ 24ಗಂಟೆಯಲ್ಲಿ 90,928 ಕೊರೊನಾ ಕೇಸ್​ಗಳು ದಾಖಲು, ನಿನ್ನೆಗಿಂತಲೂ ಶೇ.56ರಷ್ಟು ಹೆಚ್ಚು; 325 ಮಂದಿ ಸಾವು

Published On - 9:09 am, Thu, 6 January 22

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!