AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಬೆಂಬಲ ಸೂಚಿಸಿ ರಾಜೀನಾಮೆ ಸಲ್ಲಿಸಿದ ಪಂಜಾಬ್ ಡಿಐಜಿ ಲಕ್ಷ್ಮೀಂದರ್ ಸಿಂಗ್ ಜಖರ್

ಇಲ್ಲಿದ್ದುಕೊಂಡು ನನಗೆ ರೈತರಿಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮೊದಲು ನನ್ನ ಕೆಲಸವನ್ನು ತ್ಯಜಿಸುವುದಾಗಿ ಲಕ್ಷ್ಮೀಂದರ್ ಸಿಂಗ್ ಜಖರ್ ಹೇಳಿದ್ದಾರೆ.

ರೈತರಿಗೆ ಬೆಂಬಲ ಸೂಚಿಸಿ ರಾಜೀನಾಮೆ ಸಲ್ಲಿಸಿದ ಪಂಜಾಬ್ ಡಿಐಜಿ ಲಕ್ಷ್ಮೀಂದರ್ ಸಿಂಗ್ ಜಖರ್
ಪಂಜಾಬ್ ರೈತರ ಪ್ರತಿಭಟನೆ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 13, 2020 | 7:45 PM

ಚಂಡೀಗಢ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಹೋರಾಡುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ಪಂಜಾಬ್ ಪೊಲೀಸ್ ಇಲಾಖೆಯ ಉಪನಿರ್ದೇಶಕ ಲಕ್ಷ್ಮೀಂದರ್ ಸಿಂಗ್ ಜಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಸರ್ಕಾರ ಇನ್ನೂ ಅಂಗೀಕರಿಸಿಲ್ಲ. ಈ ಕುರಿತು ಪ್ರತಿಕ್ರಿಯೆಯನ್ನೂ ನೀಡಿಲ್ಲ.

ಕೃಷಿ ಕಾಯ್ದೆಗಳ ವಿರುದ್ಧ ನನ್ನ ರೈತ ಸೋದರರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಅವರ ಸಂಕಷ್ಟವನ್ನು ಯಾರೂ ಕೇಳುತ್ತಿಲ್ಲ. ನಾನು ಒಂದು ಶಿಸ್ತುಬದ್ಧ ಪಡೆಯಲ್ಲಿ ಇದ್ದವನು. ಇಲ್ಲಿದ್ದುಕೊಂಡು ನನಗೆ ರೈತರಿಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮೊದಲು ನನ್ನ ಕೆಲಸವನ್ನು ತ್ಯಜಿಸುವುದಾಗಿ ತಿಳಿಸಿದ್ದಾರೆಂದು ಎಎನ್​ಐ ವರದಿ ಮಾಡಿದೆ.

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್, ಹರಿಯಾಣ ಮತ್ತು ಇತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನಿಂದಾಗಿ ಕನಿಷ್ಠ ಬೆಂಬಲ ಬೆಲೆ ಇಲ್ಲದಾಗುತ್ತದೆ. ಕಾರ್ಪೊರೇಟ್ ಕಂಪನಿಗಳ ಮುಂದೆ ಕೈಚಾಚ ಬೇಕಾಗುತ್ತದೆ ಎಂಬ ಆತಂಕ ರೈತರಿಗಿದೆ.

ಇದನ್ನೂ ಓದಿ:  Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?

ಈ ಹಿಂದೆ, ಅಕಾಲಿದಳದ ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು. ಶಿರೋಮಣಿ ಅಕಾಲಿ ದಳ (ಡೆಮಾಕ್ರಸಿ) ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಲು ಪದ್ಮಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು.

ರೈತರ ಆಂದೋಲನಕ್ಕೆ ಪಂಜಾಬ್​ನ ಹಲವು ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ. ಖ್ಯಾತ ಪಂಜಾಬಿ ಕವಿ ಸುರ್ಜಿತ್ ಪಾತರ್ ಕೂಡಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ತಿಳಿಸಿದ್ದಾರೆ.

Dilli Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ