AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಬೆಂಬಲ ಸೂಚಿಸಿ ರಾಜೀನಾಮೆ ಸಲ್ಲಿಸಿದ ಪಂಜಾಬ್ ಡಿಐಜಿ ಲಕ್ಷ್ಮೀಂದರ್ ಸಿಂಗ್ ಜಖರ್

ಇಲ್ಲಿದ್ದುಕೊಂಡು ನನಗೆ ರೈತರಿಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮೊದಲು ನನ್ನ ಕೆಲಸವನ್ನು ತ್ಯಜಿಸುವುದಾಗಿ ಲಕ್ಷ್ಮೀಂದರ್ ಸಿಂಗ್ ಜಖರ್ ಹೇಳಿದ್ದಾರೆ.

ರೈತರಿಗೆ ಬೆಂಬಲ ಸೂಚಿಸಿ ರಾಜೀನಾಮೆ ಸಲ್ಲಿಸಿದ ಪಂಜಾಬ್ ಡಿಐಜಿ ಲಕ್ಷ್ಮೀಂದರ್ ಸಿಂಗ್ ಜಖರ್
ಪಂಜಾಬ್ ರೈತರ ಪ್ರತಿಭಟನೆ
shruti hegde
| Edited By: |

Updated on: Dec 13, 2020 | 7:45 PM

Share

ಚಂಡೀಗಢ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಹೋರಾಡುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ಪಂಜಾಬ್ ಪೊಲೀಸ್ ಇಲಾಖೆಯ ಉಪನಿರ್ದೇಶಕ ಲಕ್ಷ್ಮೀಂದರ್ ಸಿಂಗ್ ಜಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಸರ್ಕಾರ ಇನ್ನೂ ಅಂಗೀಕರಿಸಿಲ್ಲ. ಈ ಕುರಿತು ಪ್ರತಿಕ್ರಿಯೆಯನ್ನೂ ನೀಡಿಲ್ಲ.

ಕೃಷಿ ಕಾಯ್ದೆಗಳ ವಿರುದ್ಧ ನನ್ನ ರೈತ ಸೋದರರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಅವರ ಸಂಕಷ್ಟವನ್ನು ಯಾರೂ ಕೇಳುತ್ತಿಲ್ಲ. ನಾನು ಒಂದು ಶಿಸ್ತುಬದ್ಧ ಪಡೆಯಲ್ಲಿ ಇದ್ದವನು. ಇಲ್ಲಿದ್ದುಕೊಂಡು ನನಗೆ ರೈತರಿಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮೊದಲು ನನ್ನ ಕೆಲಸವನ್ನು ತ್ಯಜಿಸುವುದಾಗಿ ತಿಳಿಸಿದ್ದಾರೆಂದು ಎಎನ್​ಐ ವರದಿ ಮಾಡಿದೆ.

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್, ಹರಿಯಾಣ ಮತ್ತು ಇತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನಿಂದಾಗಿ ಕನಿಷ್ಠ ಬೆಂಬಲ ಬೆಲೆ ಇಲ್ಲದಾಗುತ್ತದೆ. ಕಾರ್ಪೊರೇಟ್ ಕಂಪನಿಗಳ ಮುಂದೆ ಕೈಚಾಚ ಬೇಕಾಗುತ್ತದೆ ಎಂಬ ಆತಂಕ ರೈತರಿಗಿದೆ.

ಇದನ್ನೂ ಓದಿ:  Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?

ಈ ಹಿಂದೆ, ಅಕಾಲಿದಳದ ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು. ಶಿರೋಮಣಿ ಅಕಾಲಿ ದಳ (ಡೆಮಾಕ್ರಸಿ) ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಲು ಪದ್ಮಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು.

ರೈತರ ಆಂದೋಲನಕ್ಕೆ ಪಂಜಾಬ್​ನ ಹಲವು ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ. ಖ್ಯಾತ ಪಂಜಾಬಿ ಕವಿ ಸುರ್ಜಿತ್ ಪಾತರ್ ಕೂಡಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ತಿಳಿಸಿದ್ದಾರೆ.

Dilli Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ