AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಲ್ಲಿ ಅಂತ್ಯವಾಯಿತಾ ಸೊಸೆ-ಮಾವ ಅಕ್ರಮ ಸಂಬಂಧ? ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು

Punjab Ex-Minister's Son Murder: ಪಂಜಾಬ್​ನ ಮಾಜಿ ಸಚಿವೆ ರಜಿಯಾ ಸುಲ್ತಾನ ಹಾಗೂ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಾಫ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. 33 ವರ್ಷದ ವಕೀಲ ಅಖಿಲ್ ಅಖ್ತರ್ ಅವರನ್ನು ಕುಟುಂಬ ಸದಸ್ಯರೇ ಕೊಲೆ ಮಾಡಿದ್ದಾರೆ ಎಂದು ದೂರೊಂದು ದಾಖಲಾಗಿದೆ. ತನ್ನ ಹೆಂಡತಿ ಮತ್ತು ತನ್ನ ಅಪ್ಪ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅಖ್ತರ್ ವಿಡಿಯೋ ರೆಕಾರ್ಡಿಂಗ್​ವೊಂದರಲ್ಲಿ ಹೇಳಿದ್ದರೆನ್ನಲಾಗಿದೆ.

ಕೊಲೆಯಲ್ಲಿ ಅಂತ್ಯವಾಯಿತಾ ಸೊಸೆ-ಮಾವ ಅಕ್ರಮ ಸಂಬಂಧ? ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು
ರಜಿಯಾ ಸುಲ್ತಾನ, ಮೊಹಮ್ಮದ್ ಮುಸ್ತಾಫ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 21, 2025 | 6:03 PM

Share

ನವದೆಹಲಿ, ಅಕ್ಟೋಬರ್ 21: ಪಂಜಾಬ್​ನ ರಾಜಕೀಯ ಮತ್ತು ಪೊಲೀಸ್ ಕ್ಷೇತ್ರಗಳು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ತಮ್ಮ ಸ್ವಂತ ಮಗನನ್ನು ಕೊಂದ ಆರೋಪದ ಮೇಲೆ ಮಾಜಿ ಸಚಿವೆ, ಮಾಜಿ ಪಂಜಾಬ್ ಕಾಂಗ್ರೆಸ್ ನಾಯಕಿ ರಜಿಯಾ ಸುಲ್ತಾನಾ (Razia Sultana) ಮತ್ತು ಪಂಜಾಬ್​ನ ಮಾಜಿ ಪೊಲೀಸ್ ಮಹಾನಿರ್ದೇಶಕ ಮೊಹಮ್ಮದ್ ಮುಸ್ತಾಫ (Mohammad Mustafa) ಅವರ ವಿರುದ್ಧ ಹರ್ಯಾಣದ ಪಂಚಕುಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 33 ವರ್ಷದ ಯುವಕ ಅಖಿಲ್ ಅಖ್ತರ್ (Akhil Akhtar) ಅವರ ಕೊಲೆಯಾದ ಪ್ರಕರಣ ಸಂಬಂಧ ಈ ಬೆಳವಣಿಗೆ ಆಗಿದೆ.

ಪಂಜಾಬ್ ಕೋರ್ಟ್​ನಲ್ಲಿ ವಕೀಲರಾಗಿದ್ದ ಅಖಿಲ್ ಅಖ್ತರ್ ಕಳೆದ ಗುರುವಾರ (ಅ. 16) ತನ್ನ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುತ್ತಾನೆ. ಕುಟುಂಬದವರು ಆತನನ್ನು ಸಮೀಪದ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿರುತ್ತದೆ. ಡ್ರಗ್ ಓವರ್​ಡೋಸ್​ನಿಂದ ಆತ ಸಾವನ್ನಪ್ಪಿರಬಹುದು ಎಂದು ಕುಟುಂಬದವರು ಹೇಳುತ್ತಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲೂ ಅನುಮಾನ ಬರುವಂಥದ್ದೂ ಇರುವುದಿಲ್ಲ.

ಇದನ್ನೂ ಓದಿ: ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ

ಸ್ನೇಹಿತರೊಬ್ಬರಿಂದ ದೂರು; ಕಥೆಗೆ ಟ್ವಿಸ್ಟ್…

ಅಖಿಲ್ ಕುಟುಂಬದ ಸ್ನೇಹಿತರೆನ್ನಲಾದ ಶಂಸುದ್ದೀನ್ ಚೌಧರಿ ಎನ್ನುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತಾರೆ. ಅಖಿಲ್ ಅಖ್ತರ್ ರೆಕಾರ್ಡ್ ಮಾಡಿದ ವಿಡಿಯೋ ಹಾಗೂ ಆತನ ಸೋಷಿಯಲ್ ಮೀಡಿಯಾ ಪೋಸ್ಟ್​ಗಳನ್ನು ಸಾಕ್ಷ್ಯವಾಗಿ ಪೊಲೀಸರಿಗೆ ನೀಡುತ್ತಾರೆ. ಅಖಿಲ್ ಪ್ರಾಣಭಯದಲ್ಲಿ ಇದ್ದ. ಆತ ಮಾನಸಿಕ ಒತ್ತಡದಲ್ಲಿ ಇದ್ದ. ಆತನ ಸಾವು ಡ್ರಗ್ಸ್ ಓವರ್​ಡೋಸ್​ನಿಂದ ಅಲ್ಲ, ಆತನ ಕೊಲೆಯಾಗಿರಬಹುದು ಎಂದು ಶಂಕಿಸಿ ದೂರು ಕೊಡಲಾಗಿರುತ್ತದೆ.

ಅಪ್ಪನ ಜೊತೆ ಹೆಂಡತಿ ರಾಸಲೀಲೆ, ಅಖಿಲ್ ಕೊಲೆಗೆ ಕಾರಣ?

ಶಂಸುದ್ದೀನ್ ದಾಖಲಿಸಿರುವ ಎಫ್​ಐಆರ್​ ಪ್ರಕಾರ, 33 ವರ್ಷದ ಅಖಿಲ್ ಅಖ್ತರ್ ಅವರ ಕೊಲೆಗೆ ಇಡೀ ಕುಟುಂಬವೇ ಸಂಚು ರೂಪಿಸಿದೆ. ಅಖಿಲ್ ಪತ್ನಿ ಜೊತೆ ಆತನ ಅಪ್ಪ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಾಫ್ ಅವರಿಗೆ ಅಫೇರ್ ನಡೆಯುತ್ತಿರುತ್ತದೆ. ಇದು ಗೊತ್ತಾದ ಬಳಿಕ ಇಡೀ ಕುಟುಂಬವೇ ಅಖಿಲ್ ಅವರನ್ನು ಕೊಲ್ಲಲು ಪಿತೂರಿ ರೂಪಿಸುತ್ತದೆ. ತನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲಾಗುತ್ತದೆ, ತನ್ನ ಜೀವ ಅಪಾಯದಲ್ಲಿದೆ ಎಂದು ಅಖಿಲ್ ಹೇಳಿಕೊಂಡಿದ್ದಕ್ಕೆ ವಿಡಿಯೋ ದಾಖಲೆ ಕೂಡ ಇದೆ.

ಇದನ್ನೂ ಓದಿ: ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

‘ನನ್ನ ತಂದೆಯ ಜೊತೆ ತನ್ನ ಹೆಂಡತಿ ಸಂಬಂಧ ಹೊಂದಿರುವುದನ್ನು ಕಂಡುಹಿಡಿದೆ. ನಾವು ಮಾನಸಿಕವಾಗಿ ಘಾಸಿಗೊಂಡಿದ್ದೇನೆ. ಏನು ಮಾಡಬೇಕೆಂದು ತಿಳಿಯುತ್ತಿಲ್ಲ’ ಎಂದು ಆಗಸ್ಟ್​ನಲ್ಲಿ ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಅಖಿಲ್ ಅಖ್ತರ್ ಹೇಳಿರುವುದು ಕಂಡು ಬರುತ್ತದೆ.

ಅಖಿಲ್ ತಂದೆ ಮೊಹಮ್ಮದ್ ಮುಸ್ತಾಫ, ತಾಯಿ ರಜಿಯಾ ಸುಲ್ತಾನಾ ಸೇರಿದಂತೆ ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಅಖಿಲ್ ಅಖ್ತರ್​ನ ಮೊಬೈಲ್ ಹಾಗೂ ಸೋಷಿಯಲ್ ಮೀಡಿಯಾ ವಿಡಿಯೋಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲಾ ಕೋನಗಳಲ್ಲೂ ತನಿಖೆ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ಧಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ