AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಯಲಾಗಿದೆ. ಜೊತೆಗೆ, ಪಂಜಾಬ್​ನಿಂದ ಇನ್ನೂ 1500 ವಾಹನಗಳು ದೆಹಲಿ ಚಲೋ ಸೇಲು ಹೊರಟಿವೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..
ಪಂಜಾಬ್​ ರೈತರ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
|

Updated on:Dec 12, 2020 | 11:26 AM

Share

ದೆಹಲಿ: ಪಂಜಾಬ್​ನ 7 ಜಿಲ್ಲೆಗಳಿಂದ 1300 ಟ್ರ್ಯಾಕ್ಟರ್​ಗಳೂ ಸೇರಿ, 1500 ವಾಹನಗಳು ದೆಹಲಿ ಚಲೋ ಸೇರಲು ಹೊರಟಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮೀತಿ ತಿಳಿಸಿದೆ. ಈ ವಾರಾಂತ್ಯದಲ್ಲಿ ಈ ವಾಹನಗಳು ದೆಹಲಿ ಸೇರುವ ಸಾಧ್ಯತೆಯಿದೆ.

ವಿಭಿನ್ನ ಸ್ವರೂಪ ಪಡೆಯುತ್ತಿದೆ ದೆಹಲಿ ಚಲೋ ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ಪ್ರತಿಭಟನಾ ನಿರತರು ಇಂದು ಟೋಲ್ ಪ್ಲಾಜಾ​​ಗಳನ್ನು ಮುಕ್ತಗೊಳಿಸಿದ್ದಾರೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಗಟ್ಟಿದ್ದಾರೆ ಎಂದು ಟೋಲ್ ನಿರ್ವಾಹಕರು ತಿಳಿಸಿದ್ದಾರೆ. ಇಂದು ರಾತ್ರಿ 12ರವರೆಗೂ ಟೋಲ್​ನಲ್ಲಿ ಹಣ ತೆಗೆದುಕೊಳ್ಳದಂತೆ ಎಚ್ಚರಿಕೆ ವಿಧಿಸಲಾಗಿದೆ.

ಅರ್ಧ ತಿಂಗಳಿಂದ ಪ್ರತಿಭಟನೆಯಲ್ಲಿ ಭಾಗಿಯಾದ ಹಿರಿಯ ರೈತರಿಗೆಂದು ಖಾಲ್ಸಾ ಏಡ್ ಸಂಸ್ಥೆ 25 ಫೂಟ್ ಮಸಾಜ್ ಕೇಂದ್ರಗಳನ್ನು ಆರಂಭಿಸಿದೆ. ವೃದ್ಧ ರೈತರ ಕಾಲುಗಳಿಗೆ ಉಚಿತವಾಗಿ ಮಸಾಜ್ ಮಾಡಿಕೊಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ.

ಫೂಟ್ ಮಸಾಜ್ ಕೇಂದ್ರದಲ್ಲಿ ರೈತರು

ರೈತರ ಸಹನೆ ಪರೀಕ್ಷಿಸಬೇಡಿ ಎಂದ ಶರದ್ ಪವಾರ್ ಇತ್ತ ಎನ್​ಸಿಪಿ ನಾಯಕ ಶರದ್ ಪವಾರ್ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ರೈತರ ಸಹನೆ ಪರೀಕ್ಷಿಸಬೇಡಿ ಎಂದಿರುವ ಅವರು, ಪ್ರತಿಭಟನೆ ದೇಶಾದ್ಯಂತ ವ್ಯಾಪಿಸುವ ಮುನ್ನವೇ ರೈತರ ಬೇಡಿಕೆಗೆ ಮಣಿಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತ ಬಿಜೆಪಿ, ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಮೊದಲಿನಂತೆಯೇ, ಕೃಷಿ ಮಂಡಿಗಳು ಮುಂದುವರೆಯಲಿವೆ. ವಿಪಕ್ಷಗಳು ರೈತರ ದಾರಿ ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಆರೋಪಿಸಿದೆ.

ಎಂ.ಎಸ್. ಶ್ರೀರಾಮ್ ಸಂದರ್ಶನ| ಕೃಷಿ ಕಾಯ್ದೆಗಳ ಉಪಯುಕ್ತತೆ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ

Published On - 11:23 am, Sat, 12 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!