AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಯಲಾಗಿದೆ. ಜೊತೆಗೆ, ಪಂಜಾಬ್​ನಿಂದ ಇನ್ನೂ 1500 ವಾಹನಗಳು ದೆಹಲಿ ಚಲೋ ಸೇಲು ಹೊರಟಿವೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..
ಪಂಜಾಬ್​ ರೈತರ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
|

Updated on:Dec 12, 2020 | 11:26 AM

Share

ದೆಹಲಿ: ಪಂಜಾಬ್​ನ 7 ಜಿಲ್ಲೆಗಳಿಂದ 1300 ಟ್ರ್ಯಾಕ್ಟರ್​ಗಳೂ ಸೇರಿ, 1500 ವಾಹನಗಳು ದೆಹಲಿ ಚಲೋ ಸೇರಲು ಹೊರಟಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮೀತಿ ತಿಳಿಸಿದೆ. ಈ ವಾರಾಂತ್ಯದಲ್ಲಿ ಈ ವಾಹನಗಳು ದೆಹಲಿ ಸೇರುವ ಸಾಧ್ಯತೆಯಿದೆ.

ವಿಭಿನ್ನ ಸ್ವರೂಪ ಪಡೆಯುತ್ತಿದೆ ದೆಹಲಿ ಚಲೋ ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ಪ್ರತಿಭಟನಾ ನಿರತರು ಇಂದು ಟೋಲ್ ಪ್ಲಾಜಾ​​ಗಳನ್ನು ಮುಕ್ತಗೊಳಿಸಿದ್ದಾರೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಗಟ್ಟಿದ್ದಾರೆ ಎಂದು ಟೋಲ್ ನಿರ್ವಾಹಕರು ತಿಳಿಸಿದ್ದಾರೆ. ಇಂದು ರಾತ್ರಿ 12ರವರೆಗೂ ಟೋಲ್​ನಲ್ಲಿ ಹಣ ತೆಗೆದುಕೊಳ್ಳದಂತೆ ಎಚ್ಚರಿಕೆ ವಿಧಿಸಲಾಗಿದೆ.

ಅರ್ಧ ತಿಂಗಳಿಂದ ಪ್ರತಿಭಟನೆಯಲ್ಲಿ ಭಾಗಿಯಾದ ಹಿರಿಯ ರೈತರಿಗೆಂದು ಖಾಲ್ಸಾ ಏಡ್ ಸಂಸ್ಥೆ 25 ಫೂಟ್ ಮಸಾಜ್ ಕೇಂದ್ರಗಳನ್ನು ಆರಂಭಿಸಿದೆ. ವೃದ್ಧ ರೈತರ ಕಾಲುಗಳಿಗೆ ಉಚಿತವಾಗಿ ಮಸಾಜ್ ಮಾಡಿಕೊಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ.

ಫೂಟ್ ಮಸಾಜ್ ಕೇಂದ್ರದಲ್ಲಿ ರೈತರು

ರೈತರ ಸಹನೆ ಪರೀಕ್ಷಿಸಬೇಡಿ ಎಂದ ಶರದ್ ಪವಾರ್ ಇತ್ತ ಎನ್​ಸಿಪಿ ನಾಯಕ ಶರದ್ ಪವಾರ್ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ರೈತರ ಸಹನೆ ಪರೀಕ್ಷಿಸಬೇಡಿ ಎಂದಿರುವ ಅವರು, ಪ್ರತಿಭಟನೆ ದೇಶಾದ್ಯಂತ ವ್ಯಾಪಿಸುವ ಮುನ್ನವೇ ರೈತರ ಬೇಡಿಕೆಗೆ ಮಣಿಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತ ಬಿಜೆಪಿ, ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಮೊದಲಿನಂತೆಯೇ, ಕೃಷಿ ಮಂಡಿಗಳು ಮುಂದುವರೆಯಲಿವೆ. ವಿಪಕ್ಷಗಳು ರೈತರ ದಾರಿ ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಆರೋಪಿಸಿದೆ.

ಎಂ.ಎಸ್. ಶ್ರೀರಾಮ್ ಸಂದರ್ಶನ| ಕೃಷಿ ಕಾಯ್ದೆಗಳ ಉಪಯುಕ್ತತೆ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ

Published On - 11:23 am, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!