AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Edited By: |

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!