AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಲೀಟರ್‌ಗೆ ₹10, ಡೀಸೆಲ್ ಬೆಲೆ ₹5 ಕಡಿಮೆ ಮಾಡಿದ ಪಂಜಾಬ್ ಸರ್ಕಾರ

Punjab ಪಂಜಾಬ್ ಕ್ಯಾಬಿನೆಟ್ ಸಭೆಯ ನಂತರ ಚನ್ನಿ ಈ ಕ್ರಮವನ್ನು ಘೋಷಿಸಿದರು, ಇದು ರಾಜ್ಯದ ಬೊಕ್ಕಸಕ್ಕೆ ವಾರ್ಷಿಕವಾಗಿ 1000 ಕೋಟಿ ವೆಚ್ಚವಾಗಲಿದೆ. 70 ವರ್ಷಗಳಲ್ಲಿ ಇಂತಹ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ ಚನ್ನಿ, ಪಂಜಾಬ್‌ನಲ್ಲಿ ಪೆಟ್ರೋಲ್ ಈ ಪ್ರದೇಶದಲ್ಲಿ ಅಗ್ಗವಾಗಿದೆ ಎಂದು ಹೇಳಿದರು.

ಪೆಟ್ರೋಲ್ ಬೆಲೆ ಲೀಟರ್‌ಗೆ ₹10, ಡೀಸೆಲ್ ಬೆಲೆ ₹5 ಕಡಿಮೆ ಮಾಡಿದ ಪಂಜಾಬ್ ಸರ್ಕಾರ
ಚರಣ್​ಜಿತ್ ಸಿಂಗ್ ಚನ್ನಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 07, 2021 | 5:06 PM

Share

ಚಂಡೀಗಡ: ಪಂಜಾಬ್ ಸರ್ಕಾರವು 2022 ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ರೂ 10 ಮತ್ತು ರೂ 5 ರಷ್ಟು ಕಡಿಮೆ ಮಾಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರು ಡೀಸೆಲ್ ಮೇಲೆ ವಿಧಿಸಲಾದ ಮೌಲ್ಯವರ್ಧಿತ ತೆರಿಗೆಯಲ್ಲಿನ (value added tax) ಇಳಿಕೆಯಿಂದಾಗಿ ಬೆಲೆಗಳನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಪರಿಷ್ಕೃತ ದರ ಸೋಮವಾರದಿಂದ ಜಾರಿಗೆ ಬರಲಿದೆ.

ಪಂಜಾಬ್ ಕ್ಯಾಬಿನೆಟ್ ಸಭೆಯ ನಂತರ ಚನ್ನಿ ಈ ಕ್ರಮವನ್ನು ಘೋಷಿಸಿದರು, ಇದು ರಾಜ್ಯದ ಬೊಕ್ಕಸಕ್ಕೆ ವಾರ್ಷಿಕವಾಗಿ 1000 ಕೋಟಿ ವೆಚ್ಚವಾಗಲಿದೆ. 70 ವರ್ಷಗಳಲ್ಲಿ ಇಂತಹ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ ಚನ್ನಿ, ಪಂಜಾಬ್‌ನಲ್ಲಿ ಪೆಟ್ರೋಲ್ ಈ ಪ್ರದೇಶದಲ್ಲಿ ಅಗ್ಗವಾಗಿದೆ ಎಂದು ಹೇಳಿದರು. “ದೆಹಲಿಗೆ ಹೋಲಿಸಿದರೆ, ಪಂಜಾಬ್‌ನಲ್ಲಿ ಪೆಟ್ರೋಲ್ ಈಗ 9 ರೂಪಾಯಿ ಕಡಿಮೆಯಾಗಿದೆ” ಎಂದು ಅವರು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮೂಲ ತೈಲ ಬೆಲೆ, ಮೌಲ್ಯವರ್ಧಿತ ತೆರಿಗೆ, ಕೇಂದ್ರೀಯ ಅಬಕಾರಿ ಮತ್ತು ಡೀಲರ್‌ಗಳಿಗೆ ಕಮಿಷನ್ ಅನ್ನು ಒಳಗೊಂಡಿರುತ್ತದೆ. ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು, ಕೇಂದ್ರ ಸರ್ಕಾರ ಕಳೆದ ವಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್‌ಗೆ 10 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದೆ.  ಪ್ರಸ್ತುತ, ಪಂಜಾಬ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕ್ರಮವಾಗಿ ಲೀಟರ್‌ಗೆ 106.20 ಮತ್ತು 89.83 ರೂ ಆಗಿದೆ.

ಶಿರೋಮಣಿ ಅಕಾಲಿದಳ, ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷವು ಗ್ರಾಹಕರಿಗೆ ಪರಿಹಾರ ನೀಡಲು ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದವು.

ಇದನ್ನೂ ಓದಿ:ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Published On - 5:05 pm, Sun, 7 November 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್