AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ; ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡ ಪಂಜಾಬ್ ಸಿಎಂ

ಸರ್ಕಾರಿ ನೌಕರರನ್ನು ತಲುಪಲು ವಿಶೇಷ ಪ್ರಯತ್ನಗಳನ್ನು ಮಾಡಲಾಯಿತು. ಅಷ್ಟಾದರೂ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿಸಿಕೊಂಡ ಸರ್ಕಾರಿ ನೌಕರರಿಗೆ ಈಗ ಮೊದಲ ಡೋಸ್ ಕೊರೊನಾ ಲಸಿಕೆ ಸಿಗುವವರೆಗೂ ಕಡ್ಡಾಯ ರಜೆ ಮೇಲೆ ಹೋಗುವಂತೆ ಕೇಳಲಾಗುತ್ತದೆ ಎಂದು ಪಂಜಾಬ್​ ರಾಜ್ಯದ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ; ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡ ಪಂಜಾಬ್ ಸಿಎಂ
ಕೊರೊನಾ ವ್ಯಾಕ್ಸಿನ್
TV9 Web
| Updated By: Skanda|

Updated on: Sep 10, 2021 | 5:52 PM

Share

ಚಂಡೀಗಡ: ಪಂಜಾಬ್​ನಲ್ಲಿ ಕೊರೊನಾ ಲಸಿಕೆ ವಿತರಣೆಯನ್ನು ತ್ವರಿತಗೊಳಿಸುವ ಸಲುವಾಗಿ ಹೊಸ ಆದೇಶವನ್ನು ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್, ಲಸಿಕೆ ತೆಗೆದುಕೊಳ್ಳದ ರಾಜ್ಯ ಸರ್ಕಾರದ ಉದ್ಯೋಗಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಇಂದು (ಶುಕ್ರವಾರ) ಮಾಹಿರಿ ನೀಡಿರುವ ಅವರು, ಕೊರೊನಾ ವೈರಾಣುವನ್ನು ಮಣಿಸಲು ಲಸಿಕೆ ಅಗತ್ಯವಾಗಿದ್ದು ಲಸಿಕೆಯ ಮೊದಲ ಡೋಸ್​ ತೆಗೆದುಕೊಳ್ಳಲು ವಿಫಲರಾದ ಸರ್ಕಾರಿ ನೌಕರರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದಿದ್ದಾರೆ.

ಹಬ್ಬದ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕೊವಿಡ್ ನಿರ್ಬಂಧಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಆದೇಶಿಸಿದ್ದು, ಲಸಿಕೆ ಎಷ್ಟು ಪರಿಣಾಮಕಾರಿ ಎಂದು ಎತ್ತಿ ತೋರಿಸುವ ಸಲುವಾಗಿ ಉನ್ನತ ಮಟ್ಟದ ಕೊವಿಡ್ ಪರಿಶೀಲನಾ ಸಭೆಯಲ್ಲಿ ಲಸಿಕೆ ವಿತರಣೆ ಹಾಗೂ ಸೋಂಕಿನ ಪ್ರಮಾಣದ ಅಂಕಿ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಸರ್ಕಾರಿ ನೌಕರರನ್ನು ತಲುಪಲು ವಿಶೇಷ ಪ್ರಯತ್ನಗಳನ್ನು ಮಾಡಲಾಯಿತು. ಅಷ್ಟಾದರೂ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿಸಿಕೊಂಡ ಸರ್ಕಾರಿ ನೌಕರರಿಗೆ ಈಗ ಮೊದಲ ಡೋಸ್ ಕೊರೊನಾ ಲಸಿಕೆ ಸಿಗುವವರೆಗೂ ಕಡ್ಡಾಯ ರಜೆ ಮೇಲೆ ಹೋಗುವಂತೆ ಕೇಳಲಾಗುತ್ತದೆ ಎಂದು ಪಂಜಾಬ್​ ರಾಜ್ಯದ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ಬೋಧಕ ಮತ್ತು ಬೋಧಕೇತರ ಶಾಲಾ ಸಿಬ್ಬಂದಿ ಪ್ರತಿ ವಾರ ಕೊರೊನಾ ನೆಗೆಟಿವ್ ಆರ್‌ಟಿಪಿಸಿಆರ್ ವರದಿಗಳನ್ನು ಸಲ್ಲಿಸಿದ ನಂತರ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಅನುಮತಿಸಲಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಆದೇಶ ಮಾಡಲಾಗಿತ್ತು. ಇದೀಗ ನೂತನ ನಿರ್ಧಾರದ ಪ್ರಕಾರ, ಬೇರೆ ಬೇರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಶಾಲಾ ಸಿಬ್ಬಂದಿ ಸಂಪೂರ್ಣ ಎರಡು ಡೋಸ್ ಲಸಿಕೆ ಪಡೆದ ನಂತರ ಮಾತ್ರ ಶಾಲೆಗೆ ಬರಬಹುದು ಎಂದು ತಿಳಿಸಲಾಗಿದೆ.

ಪಂಜಾಬ್‌ನಲ್ಲಿ ಕೊರೊನಾ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚೆಚ್ಚು ವರದಿಯಾಗುತ್ತಿದೆ. ಶಾಲೆಗಳನ್ನು ಪುನಃ ತೆರೆಯುವುದು ಕಳವಳವನ್ನುಂಟು ಮಾಡಿದೆಯಾದರೂ ಕಟ್ಟುನಿಟ್ಟಾದ ಕ್ರಮಗಳೊಂದಿಗೆ ಪರಿಸ್ಥಿತಿಯನ್ನು ಹತೋಟಿಯಲ್ಲಿಡುತ್ತಿರುವುದು ಆಶಾದಾಯಕವಾಗಿದೆ ಎಂದು ಅವರು ಸಮಾಧಾನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

(Punjab Government employees who do not take corona vaccine are imposed with compulsory leave)

ಇದನ್ನೂ ಓದಿ: ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ 

Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!