AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on: Jan 06, 2022 | 1:20 PM

Share

ಪ್ರಧಾನಿ ಮೋದಿಯವರ ಭದ್ರತಾ ಲೋಪಕ್ಕೆ(PM security breach) ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ನಿನ್ನೆ ಫಿರೋಜ್​ಪುರಕ್ಕೆ ಭೇಟಿ ನೀಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭದ್ರತೆ ಲೋಪ ಕಾರಣದಿಂದ ದೆಹಲಿಗೆ ವಾಪಸ್ ಆಗಿದ್ದರು. ನಿನ್ನೆ ಪ್ರಧಾನಿ ಮೋದಿ ಭದ್ರತೆ ಲೋಪವಾಗುತ್ತಿದ್ದಂತೆ ದೇಶದೆಲ್ಲೆಡೆಯಿಂದ ಪಂಜಾಬ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಪಂಜಾಬ್ ಮುಖ್ಯಮಂತ್ರಿ ಛನ್ನಿಯವರು, ಇದರಲ್ಲಿ ನಮ್ಮದೇನೂ ತಪ್ಪಿಲ್ಲ. ಪ್ರಧಾನಿ ಮೋದಿ ಕೊನೇ ಕ್ಷಣದಲ್ಲಿ ಮಾರ್ಗಬದಲಾವಣೆ ಮಾಡುವ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ ಕೇಂದ್ರ ಗೃಹ ಇಲಾಖೆ ಪಂಜಾಬ್​ ಸರ್ಕಾರದಿಂದ ವರದಿ ಕೇಳಿದೆ. ಹೀಗಾಗಿ ಕೂಲಂಕಷವಾಗಿ ತನಿಖೆ ನಡೆಸಲು ಪಂಜಾಬ್ ಸರ್ಕಾ, ನಿವೃತ್ತ ನ್ಯಾಯಾಧೀಶ  ಮೆಹ್ತಾಬ್​ ಸಿಂಗ್​ ಗಿಲ್​ ಮತ್ತು ಗೃಹ ಇಲಾಖೆ ಪ್ರಧಾನಕಾರ್ಯದರ್ಶಿ  ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. 

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು. ಸುಮಾರು 20 ನಿಮಿಷ ಕಾದ ಬಳಿಕ ಪ್ರಧಾನಿ ಮೋದಿ ವಾಪಸ್ ಆಗಿದ್ದರು. ಅವರು ನಿಜಕ್ಕೂ ಕೋಪಗೊಂಡಿದ್ದರು. ದೆಹಲಿಗೆ ಹೊರಡುವುದಕ್ಕೂ ಮೊದಲು, ಭಟಿಂಡಾ ಏರ್​ಪೋರ್ಟ್​​ನಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳೊಟ್ಟಿಗೆ ಮಾತನಾಡಿ, ನಾನು ಭಟಿಂಡಾವರೆಗೆ ಜೀವಂತವಾಗಿಯಾದರೂ ಬಂದೆನಲ್ಲ, ನಿಮ್ಮ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾಗಿ ತಿಳಿಸಿ ಎಂದಿದ್ದರು.

ಆದರೆ ಪಂಜಾಬ್​ ಸಿಎಂ ಮಾತ್ರ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ನಾವು ಪ್ರಧಾನಿಯವರು ಭೇಟಿ ಕೊಡಲಿರುವ ಮುನ್ನಾದಿನ ರೈತರ ಬಳಿ ಮಾತನಾಡಿದೆವು. ಅವರೂ ಸಹ ಪ್ರತಿಭಟನೆ ಹಿಂಪಡೆಯಲು ಒಪ್ಪಿಕೊಂಡರು. ಆದರೆ ಮರುದಿನ ಫಿರೋಜ್​ಪುರ ಬಳಿ ಮತ್ತೆ ಪ್ರತಿಭಟನೆ ಶುರು ಮಾಡಿದರು. ಪ್ರಧಾನಿಯವರೂ ಕೂಡ ಭಟಿಂಡಾದಿಂದ ಹೆಲಿಕಾಪ್ಟರ್​ ಮೂಲಕ ಬರುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಗಿತ್ತು. ಅವರ ಮಾರ್ಗ ಬದಲಾವಣೆಯಾಗಿದ್ದು ನಮಗೆ ಗೊತ್ತಾಗಲಿಲ್ಲ ಎಂದೇ ಹೇಳುತ್ತಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ಹೂಡಿಕೆ ಹಿಂಪಡೆಯುವಿಕೆ ವಿರುದ್ಧ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​

Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!