AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on: Jan 06, 2022 | 1:20 PM

Share

ಪ್ರಧಾನಿ ಮೋದಿಯವರ ಭದ್ರತಾ ಲೋಪಕ್ಕೆ(PM security breach) ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ನಿನ್ನೆ ಫಿರೋಜ್​ಪುರಕ್ಕೆ ಭೇಟಿ ನೀಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭದ್ರತೆ ಲೋಪ ಕಾರಣದಿಂದ ದೆಹಲಿಗೆ ವಾಪಸ್ ಆಗಿದ್ದರು. ನಿನ್ನೆ ಪ್ರಧಾನಿ ಮೋದಿ ಭದ್ರತೆ ಲೋಪವಾಗುತ್ತಿದ್ದಂತೆ ದೇಶದೆಲ್ಲೆಡೆಯಿಂದ ಪಂಜಾಬ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಪಂಜಾಬ್ ಮುಖ್ಯಮಂತ್ರಿ ಛನ್ನಿಯವರು, ಇದರಲ್ಲಿ ನಮ್ಮದೇನೂ ತಪ್ಪಿಲ್ಲ. ಪ್ರಧಾನಿ ಮೋದಿ ಕೊನೇ ಕ್ಷಣದಲ್ಲಿ ಮಾರ್ಗಬದಲಾವಣೆ ಮಾಡುವ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ ಕೇಂದ್ರ ಗೃಹ ಇಲಾಖೆ ಪಂಜಾಬ್​ ಸರ್ಕಾರದಿಂದ ವರದಿ ಕೇಳಿದೆ. ಹೀಗಾಗಿ ಕೂಲಂಕಷವಾಗಿ ತನಿಖೆ ನಡೆಸಲು ಪಂಜಾಬ್ ಸರ್ಕಾ, ನಿವೃತ್ತ ನ್ಯಾಯಾಧೀಶ  ಮೆಹ್ತಾಬ್​ ಸಿಂಗ್​ ಗಿಲ್​ ಮತ್ತು ಗೃಹ ಇಲಾಖೆ ಪ್ರಧಾನಕಾರ್ಯದರ್ಶಿ  ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. 

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು. ಸುಮಾರು 20 ನಿಮಿಷ ಕಾದ ಬಳಿಕ ಪ್ರಧಾನಿ ಮೋದಿ ವಾಪಸ್ ಆಗಿದ್ದರು. ಅವರು ನಿಜಕ್ಕೂ ಕೋಪಗೊಂಡಿದ್ದರು. ದೆಹಲಿಗೆ ಹೊರಡುವುದಕ್ಕೂ ಮೊದಲು, ಭಟಿಂಡಾ ಏರ್​ಪೋರ್ಟ್​​ನಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳೊಟ್ಟಿಗೆ ಮಾತನಾಡಿ, ನಾನು ಭಟಿಂಡಾವರೆಗೆ ಜೀವಂತವಾಗಿಯಾದರೂ ಬಂದೆನಲ್ಲ, ನಿಮ್ಮ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾಗಿ ತಿಳಿಸಿ ಎಂದಿದ್ದರು.

ಆದರೆ ಪಂಜಾಬ್​ ಸಿಎಂ ಮಾತ್ರ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ನಾವು ಪ್ರಧಾನಿಯವರು ಭೇಟಿ ಕೊಡಲಿರುವ ಮುನ್ನಾದಿನ ರೈತರ ಬಳಿ ಮಾತನಾಡಿದೆವು. ಅವರೂ ಸಹ ಪ್ರತಿಭಟನೆ ಹಿಂಪಡೆಯಲು ಒಪ್ಪಿಕೊಂಡರು. ಆದರೆ ಮರುದಿನ ಫಿರೋಜ್​ಪುರ ಬಳಿ ಮತ್ತೆ ಪ್ರತಿಭಟನೆ ಶುರು ಮಾಡಿದರು. ಪ್ರಧಾನಿಯವರೂ ಕೂಡ ಭಟಿಂಡಾದಿಂದ ಹೆಲಿಕಾಪ್ಟರ್​ ಮೂಲಕ ಬರುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಗಿತ್ತು. ಅವರ ಮಾರ್ಗ ಬದಲಾವಣೆಯಾಗಿದ್ದು ನಮಗೆ ಗೊತ್ತಾಗಲಿಲ್ಲ ಎಂದೇ ಹೇಳುತ್ತಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ಹೂಡಿಕೆ ಹಿಂಪಡೆಯುವಿಕೆ ವಿರುದ್ಧ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್