ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ
ಚರಣ್​​ಜಿತ್ ಸಿಂಗ್ ಚನ್ನಿ
Follow us
| Updated By: Lakshmi Hegde

Updated on: Jan 06, 2022 | 1:20 PM

ಪ್ರಧಾನಿ ಮೋದಿಯವರ ಭದ್ರತಾ ಲೋಪಕ್ಕೆ(PM security breach) ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ನಿನ್ನೆ ಫಿರೋಜ್​ಪುರಕ್ಕೆ ಭೇಟಿ ನೀಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭದ್ರತೆ ಲೋಪ ಕಾರಣದಿಂದ ದೆಹಲಿಗೆ ವಾಪಸ್ ಆಗಿದ್ದರು. ನಿನ್ನೆ ಪ್ರಧಾನಿ ಮೋದಿ ಭದ್ರತೆ ಲೋಪವಾಗುತ್ತಿದ್ದಂತೆ ದೇಶದೆಲ್ಲೆಡೆಯಿಂದ ಪಂಜಾಬ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಪಂಜಾಬ್ ಮುಖ್ಯಮಂತ್ರಿ ಛನ್ನಿಯವರು, ಇದರಲ್ಲಿ ನಮ್ಮದೇನೂ ತಪ್ಪಿಲ್ಲ. ಪ್ರಧಾನಿ ಮೋದಿ ಕೊನೇ ಕ್ಷಣದಲ್ಲಿ ಮಾರ್ಗಬದಲಾವಣೆ ಮಾಡುವ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ ಕೇಂದ್ರ ಗೃಹ ಇಲಾಖೆ ಪಂಜಾಬ್​ ಸರ್ಕಾರದಿಂದ ವರದಿ ಕೇಳಿದೆ. ಹೀಗಾಗಿ ಕೂಲಂಕಷವಾಗಿ ತನಿಖೆ ನಡೆಸಲು ಪಂಜಾಬ್ ಸರ್ಕಾ, ನಿವೃತ್ತ ನ್ಯಾಯಾಧೀಶ  ಮೆಹ್ತಾಬ್​ ಸಿಂಗ್​ ಗಿಲ್​ ಮತ್ತು ಗೃಹ ಇಲಾಖೆ ಪ್ರಧಾನಕಾರ್ಯದರ್ಶಿ  ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. 

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು. ಸುಮಾರು 20 ನಿಮಿಷ ಕಾದ ಬಳಿಕ ಪ್ರಧಾನಿ ಮೋದಿ ವಾಪಸ್ ಆಗಿದ್ದರು. ಅವರು ನಿಜಕ್ಕೂ ಕೋಪಗೊಂಡಿದ್ದರು. ದೆಹಲಿಗೆ ಹೊರಡುವುದಕ್ಕೂ ಮೊದಲು, ಭಟಿಂಡಾ ಏರ್​ಪೋರ್ಟ್​​ನಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳೊಟ್ಟಿಗೆ ಮಾತನಾಡಿ, ನಾನು ಭಟಿಂಡಾವರೆಗೆ ಜೀವಂತವಾಗಿಯಾದರೂ ಬಂದೆನಲ್ಲ, ನಿಮ್ಮ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾಗಿ ತಿಳಿಸಿ ಎಂದಿದ್ದರು.

ಆದರೆ ಪಂಜಾಬ್​ ಸಿಎಂ ಮಾತ್ರ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ನಾವು ಪ್ರಧಾನಿಯವರು ಭೇಟಿ ಕೊಡಲಿರುವ ಮುನ್ನಾದಿನ ರೈತರ ಬಳಿ ಮಾತನಾಡಿದೆವು. ಅವರೂ ಸಹ ಪ್ರತಿಭಟನೆ ಹಿಂಪಡೆಯಲು ಒಪ್ಪಿಕೊಂಡರು. ಆದರೆ ಮರುದಿನ ಫಿರೋಜ್​ಪುರ ಬಳಿ ಮತ್ತೆ ಪ್ರತಿಭಟನೆ ಶುರು ಮಾಡಿದರು. ಪ್ರಧಾನಿಯವರೂ ಕೂಡ ಭಟಿಂಡಾದಿಂದ ಹೆಲಿಕಾಪ್ಟರ್​ ಮೂಲಕ ಬರುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಗಿತ್ತು. ಅವರ ಮಾರ್ಗ ಬದಲಾವಣೆಯಾಗಿದ್ದು ನಮಗೆ ಗೊತ್ತಾಗಲಿಲ್ಲ ಎಂದೇ ಹೇಳುತ್ತಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ಹೂಡಿಕೆ ಹಿಂಪಡೆಯುವಿಕೆ ವಿರುದ್ಧ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ