AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕಾನೂನು ಉಲ್ಲಂಘನೆ; ಪಂಜಾಬ್ ಅಸೆಂಬ್ಲಿಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ಪ್ರಶ್ನಿಸಿದ ಗವರ್ನರ್

ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ, 2023 ರ ಜೊತೆಗೆ, ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿ ರಾಜ್ಯಪಾಲರನ್ನು ತೆಗೆದುಹಾಕಲು ಪಂಜಾಬ್ ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ 2023 ಅನ್ನು ಅಸೆಂಬ್ಲಿ ಅಂಗೀಕರಿಸಿತು

ಇದು ಕಾನೂನು ಉಲ್ಲಂಘನೆ; ಪಂಜಾಬ್ ಅಸೆಂಬ್ಲಿಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ಪ್ರಶ್ನಿಸಿದ ಗವರ್ನರ್
ಭಗವಂತ್ ಮಾನ್ -ಬನ್ವಾರಿ ಲಾಲ್ ಪುರೋಹಿತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 19, 2023 | 2:07 PM

Share

ಅಮೃತ್​​ಸರ ಜುಲೈ 19: ಎಎಪಿ (AAP) ನೇತೃತ್ವದ ಪಂಜಾಬ್ ಸರ್ಕಾರ (Punjab) ವಿಧಾನಸಭೆಯಲ್ಲಿ ಕಳೆದ ತಿಂಗಳು ವಿಶೇಷ ಎರಡು ದಿನಗಳ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಸಹಿ ಹಾಕಲು ಗವರ್ನರ್ ಬನ್ವಾರಿ ಲಾಲ್ ಪುರೋಹಿತ್ (Banwari Lal Purohit) ನಿರಾಕರಿಸಿದ್ದಾರೆ. ಅಧಿವೇಶನದ ಕರೆ ಕಾನೂನು ಮತ್ತು ಕಾರ್ಯವಿಧಾನದ ಉಲ್ಲಂಘನೆಯಾಗಿದೆ ಎಂದು ಅವರು ಗವರ್ನರ್ ಹೇಳಿದ್ದಾರೆ.“ಈ ನಾಲ್ಕು ಮಸೂದೆಗಳನ್ನು ಅಂಗೀಕರಿಸಿದಾಗ ಜೂನ್ 19 ಮತ್ತು 20, 2023 ರಂದು ನೀವು ವಿಧಾನ ಸಭೆಯ ಅಧಿವೇಶನವನ್ನು ಕರೆಯುವುದು ಕಾನೂನು ಮತ್ತು ಕಾರ್ಯವಿಧಾನದ ಉಲ್ಲಂಘನೆಯಾಗಿದೆ. ಅದಕ್ಕಾಗಿ ನಾನು ಕಾನೂನು ಸಲಹೆ ಪಡೆಯುತ್ತೇನೆ. ಆ ಮಸೂದೆಗಳ ನ್ಯಾಯಸಮ್ಮತತೆಯ ಮತ್ತು ಕಾನೂನುಬದ್ಧತೆ ಬಗ್ಗೆ ಅನುಮಾನವಿದೆ ಎಂದು ರಾಜ್ಯಪಾಲರು ಸೋಮವಾರ ಸಿಎಂ ಭಗವಂತ್ ಮಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಬನ್ವಾರಿ ಲಾಲ್ ಪುರೋಹಿತ್ ಅವರು ಪತ್ರದಲ್ಲಿ “ಭಾರತದ ಅಟಾರ್ನಿ ಜನರಲ್‌ನಿಂದ ಕಾನೂನು ಅಭಿಪ್ರಾಯವನ್ನು ಪಡೆಯಬೇಕೇ ಅಥವಾ ಸಂವಿಧಾನದ ಪ್ರಕಾರ ಈ ಮಸೂದೆಗಳನ್ನು ಭಾರತದ ರಾಷ್ಟ್ರಪತಿಗಳ ಪರಿಗಣನೆ ಮತ್ತು ಒಪ್ಪಿಗೆಗಾಗಿ ಕಾಯ್ದಿರಿಸಬೇಕೆ ಎಂಬುದನ್ನು ಪರಿಗಣಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಗೋಲ್ಡನ್ ಟೆಂಪಲ್‌ನಿಂದ ಗುರುಬಾನಿ ಉಚಿತ ಪ್ರಸಾರವನ್ನು ಖಚಿತಪಡಿಸಿಕೊಳ್ಳಲು ಸಿಖ್ ಗುರುದ್ವಾರಗಳ ಕಾಯಿದೆ, 1925 ಅನ್ನು ತಿದ್ದುಪಡಿ ಮಾಡಲಾದ ಸಿಖ್ ಗುರುದ್ವಾರಸ್ (ತಿದ್ದುಪಡಿ) ಮಸೂದೆ, 2023 ಅನ್ನು ಪರೋಕ್ಷವಾಗಿ ಉಲ್ಲೇಖಿಸಿದ ರಾಜ್ಯಪಾಲರು, “ನಿರ್ದಿಷ್ಟ ರಾಜಕೀಯ ಕುಟುಂಬದ ಕೆಲವು ಕ್ರಮಗಳ ಬಗ್ಗೆ ಸರ್ಕಾರವು ಕಾಳಜಿ ವಹಿಸಿದೆ. ಅದು ಮಸೂದೆಯನ್ನು ಅಂಗೀಕರಿಸಲು ಪ್ರೇರೇಪಿಸಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಸೂದೆಯ ಅಂಗೀಕಾರವನ್ನು ಸಮರ್ಥಿಸಿಕೊಂಡಿದ್ದು, “ಪವಿತ್ರವಾದ ಗುರ್ಬಾನಿ (ಪವಿತ್ರ ಸ್ತೋತ್ರ) ಪ್ರಸಾರ ಮಾಡುವ ಹಕ್ಕುಗಳ ಮೇಲೆ ನಿರ್ದಿಷ್ಟ ಕುಟುಂಬದ (ಬಾದಲ್) ಅನಗತ್ಯ ನಿಯಂತ್ರಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

“ನಿಮ್ಮ ಖಾಸಗಿ ಗ್ರಹಿಕೆಯ ವಿಷಯದಲ್ಲಿ ನಾನು ನಿಮ್ಮೊಂದಿಗೆ ಜಗಳವಾಡಲು ಬಯಸುವುದಿಲ್ಲ, ಆದರೆ ರಾಜ್ಯಪಾಲನಾಗಿ ಕಾನೂನಿಗೆ ಅನುಸಾರವಾಗಿ ಮಸೂದೆಗಳನ್ನು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ನನಗೆ ಭಾರತ ಸಂವಿಧಾನ ಹೇಳುತ್ತದೆ ಎಂದು ಬನ್ವಾರಿ ಲಾಲ್ ಪುರೋಹಿತ್ ಪತ್ರದಲ್ಲಿ ಬರೆದಿದ್ದಾರೆ.

ವಿಧೇಯಕಗಳನ್ನು ತೆರವುಗೊಳಿಸುವಲ್ಲಿನ ವಿಳಂಬದ ಬಗ್ಗೆ ಆಡಳಿತಾರೂಢ ಎಎಪಿ ನಾಯಕರು ಮಾಡಿರುವ ಆರೋಪಗಳನ್ನೂ ರಾಜ್ಯಪಾಲರು ಪ್ರಸ್ತಾಪಿಸಿದ್ದಾರೆ. ಮಸೂದೆಗೆ ತಕ್ಷಣವೇ ಸಹಿ ಮಾಡುವಲ್ಲಿ ನನ್ನ ಕಡೆಯಿಂದ ಯಾವುದೇ ವಿಳಂಬ ಬಗ್ಗೆ ನೀವು ಗ್ರಹಿಸಿರುವುದಾಗಿ ಸೂಚಿಸಿದ್ದೀರಿ. ನಾನು ತೆಗೆದುಕೊಂಡ ಸಮಯವನ್ನು ‘ಪಂಜಾಬ್‌ನ ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಹತ್ತಿಕ್ಕುವಂಥದ್ದು’ ಎಂದು ವಿವರಿಸುವುದು ಸೂಕ್ತ ಎಂದು ನೀವು ಭಾವಿಸಿದ್ದೀರಿ” ಎಂದು ಅವರು ಬರೆದಿದ್ದಾರೆ.

ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ, 2023 ರ ಜೊತೆಗೆ, ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿ ರಾಜ್ಯಪಾಲರನ್ನು ತೆಗೆದುಹಾಕಲು ಪಂಜಾಬ್ ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ 2023 ಅನ್ನು ಅಸೆಂಬ್ಲಿ ಅಂಗೀಕರಿಸಿತು. ಅದೇ ವೇಳೆ ಪೊಲೀಸ್ ಮಹಾನಿರ್ದೇಶಕರ (ಪೊಲೀಸ್ ಫೋರ್ಸ್ ಮುಖ್ಯಸ್ಥ) ಆಯ್ಕೆ ಮತ್ತು ನೇಮಕಾತಿಗಾಗಿ ಸ್ವತಂತ್ರ ಕಾರ್ಯವಿಧಾನವನ್ನು ತರಲು ಪಂಜಾಬ್ ಪೊಲೀಸ್ (ತಿದ್ದುಪಡಿ) ಮಸೂದೆ, 2023 ಅನ್ನು ಕೂಡಾ ವಿಧಾನಸಭೆ ಅಂಗೀಕರಿಸಿತು.

ಮುಖ್ಯಮಂತ್ರಿಯಾಗಿ ಪಂಜಾಬ್‌ನ ಜನರು ಅಂತಿಮವಾಗಿ ತಮ್ಮ ಮೇಲೆ ಪರಿಣಾಮ ಬೀರುವ ಕಾನೂನುಗಳನ್ನು ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ ನಂತರ ಅಂಗೀಕರಿಸುವುದನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ಸಮಾನ ಕಾಳಜಿಯನ್ನು ಹೊಂದಿದ್ದಾರೆ ಎಂದು ನೀವು ಪ್ರಶಂಸಿಸುತ್ತೀರಿ. ವಿಧಾನ ಸಭಾ ಅಧಿವೇಶನದ ಕಾನೂನುಬದ್ಧತೆಯನ್ನು ಮೊದಲು ಪರಿಶೀಲಿಸಿದ ನಂತರ ನಾನು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇನೆ ಎಂದು ನೀವು ಖಚಿತವಾಗಿ ಹೇಳಬಹುದು ಎಂದಿದ್ದಾರೆ ರಾಜ್ಯಪಾಲರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶನಿವಾರ ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ, 2023 ಗೆ ಸಹಿ ಹಾಕದ ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯಪಾಲರು ರಾಜ್ಯದ ಜನರ ಪ್ರಜಾಪ್ರಭುತ್ವದ ಇಚ್ಛೆಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!