AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ

ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 24, 2022 | 11:13 AM

Share

ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗಳನ್ನು ಹಾಗೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡಬಾರದು ಎಂದು ಪಂಜಾಬ್​ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಆದೇಶಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರ್ದೇಶನಾಲಯ, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮಗಳು, ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್​ ಬಾಟಲಿಗಳನ್ನು ಇಡುವಂತಿಲ್ಲ ಮತ್ತು ಹೂವಿನ ಬೊಕ್ಕೆಗಳನ್ನು ತರುವಂತಿಲ್ಲ ಎಂದು ಆರೋಗ್ಯ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವರು ಹೇಳಿದ್ದಾಗಿ ತಿಳಿಸಿದೆ.

ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮತ್ತು ಮಾನವರ ಆರೋಗ್ಯ ಹಾಳಾಗುತ್ತಿದೆ.  ಪಂಜಾಬ್​​ನಲ್ಲಿ ವರ್ಷಕ್ಕೆ 50 ಸಾವಿರ ಟನ್​​ಗಳಷ್ಟು ಏಕಬಳಕೆ ಪ್ಲಾಸ್ಟಿಕ್​ಗಳು ಸಿಗುತ್ತಿವೆ. ಅಂದರೆ ಮತ್ತೆ ಸಂಸ್ಕರಿಸಲಾಗದ ಬಾಟಲಿ, ಪ್ಲಾಸ್ಟಿಕ್​ ಬ್ಯಾಗ್​​ಗಳ ಬಳಕೆ ಶೇ.50ರಷ್ಟು ಏರಿದೆ. ಈ ಪ್ಲಾಸ್ಟಿಕ್​​ ನಿಯಂತ್ರಣಕ್ಕಾಗಿ ಹೀಗೆ ಕ್ರಮ ಕೈಗೊಂಡಿದ್ದಾಗಿ  ಪಂಜಾಬ್​ ಆರೋಗ್ಯ ಸಚಿವ ಡಾ. ವಿಜಯ್ ಸಿಂಗ್ಲಾ ತಿಳಿಸಿದ್ದಾರೆ.

ಈಗ ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ಈ ಆದೇಶವನ್ನು ಇಲಾಖೆಯ ನಿರ್ದೇಶಕರಿಂದ ಹಿಡಿದು, ಎಲ್ಲ ಸಿವಿಲ್​ ಸರ್ಜನ್​ಗಳೂ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ