AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ

ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 24, 2022 | 11:13 AM

Share

ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗಳನ್ನು ಹಾಗೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡಬಾರದು ಎಂದು ಪಂಜಾಬ್​ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಆದೇಶಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರ್ದೇಶನಾಲಯ, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮಗಳು, ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್​ ಬಾಟಲಿಗಳನ್ನು ಇಡುವಂತಿಲ್ಲ ಮತ್ತು ಹೂವಿನ ಬೊಕ್ಕೆಗಳನ್ನು ತರುವಂತಿಲ್ಲ ಎಂದು ಆರೋಗ್ಯ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವರು ಹೇಳಿದ್ದಾಗಿ ತಿಳಿಸಿದೆ.

ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮತ್ತು ಮಾನವರ ಆರೋಗ್ಯ ಹಾಳಾಗುತ್ತಿದೆ.  ಪಂಜಾಬ್​​ನಲ್ಲಿ ವರ್ಷಕ್ಕೆ 50 ಸಾವಿರ ಟನ್​​ಗಳಷ್ಟು ಏಕಬಳಕೆ ಪ್ಲಾಸ್ಟಿಕ್​ಗಳು ಸಿಗುತ್ತಿವೆ. ಅಂದರೆ ಮತ್ತೆ ಸಂಸ್ಕರಿಸಲಾಗದ ಬಾಟಲಿ, ಪ್ಲಾಸ್ಟಿಕ್​ ಬ್ಯಾಗ್​​ಗಳ ಬಳಕೆ ಶೇ.50ರಷ್ಟು ಏರಿದೆ. ಈ ಪ್ಲಾಸ್ಟಿಕ್​​ ನಿಯಂತ್ರಣಕ್ಕಾಗಿ ಹೀಗೆ ಕ್ರಮ ಕೈಗೊಂಡಿದ್ದಾಗಿ  ಪಂಜಾಬ್​ ಆರೋಗ್ಯ ಸಚಿವ ಡಾ. ವಿಜಯ್ ಸಿಂಗ್ಲಾ ತಿಳಿಸಿದ್ದಾರೆ.

ಈಗ ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ಈ ಆದೇಶವನ್ನು ಇಲಾಖೆಯ ನಿರ್ದೇಶಕರಿಂದ ಹಿಡಿದು, ಎಲ್ಲ ಸಿವಿಲ್​ ಸರ್ಜನ್​ಗಳೂ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ