AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ

ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 24, 2022 | 11:13 AM

Share

ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗಳನ್ನು ಹಾಗೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡಬಾರದು ಎಂದು ಪಂಜಾಬ್​ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಆದೇಶಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರ್ದೇಶನಾಲಯ, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮಗಳು, ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್​ ಬಾಟಲಿಗಳನ್ನು ಇಡುವಂತಿಲ್ಲ ಮತ್ತು ಹೂವಿನ ಬೊಕ್ಕೆಗಳನ್ನು ತರುವಂತಿಲ್ಲ ಎಂದು ಆರೋಗ್ಯ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವರು ಹೇಳಿದ್ದಾಗಿ ತಿಳಿಸಿದೆ.

ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮತ್ತು ಮಾನವರ ಆರೋಗ್ಯ ಹಾಳಾಗುತ್ತಿದೆ.  ಪಂಜಾಬ್​​ನಲ್ಲಿ ವರ್ಷಕ್ಕೆ 50 ಸಾವಿರ ಟನ್​​ಗಳಷ್ಟು ಏಕಬಳಕೆ ಪ್ಲಾಸ್ಟಿಕ್​ಗಳು ಸಿಗುತ್ತಿವೆ. ಅಂದರೆ ಮತ್ತೆ ಸಂಸ್ಕರಿಸಲಾಗದ ಬಾಟಲಿ, ಪ್ಲಾಸ್ಟಿಕ್​ ಬ್ಯಾಗ್​​ಗಳ ಬಳಕೆ ಶೇ.50ರಷ್ಟು ಏರಿದೆ. ಈ ಪ್ಲಾಸ್ಟಿಕ್​​ ನಿಯಂತ್ರಣಕ್ಕಾಗಿ ಹೀಗೆ ಕ್ರಮ ಕೈಗೊಂಡಿದ್ದಾಗಿ  ಪಂಜಾಬ್​ ಆರೋಗ್ಯ ಸಚಿವ ಡಾ. ವಿಜಯ್ ಸಿಂಗ್ಲಾ ತಿಳಿಸಿದ್ದಾರೆ.

ಈಗ ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ಈ ಆದೇಶವನ್ನು ಇಲಾಖೆಯ ನಿರ್ದೇಶಕರಿಂದ ಹಿಡಿದು, ಎಲ್ಲ ಸಿವಿಲ್​ ಸರ್ಜನ್​ಗಳೂ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!