AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ

ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 24, 2022 | 11:13 AM

Share

ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗಳನ್ನು ಹಾಗೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡಬಾರದು ಎಂದು ಪಂಜಾಬ್​ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಆದೇಶಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರ್ದೇಶನಾಲಯ, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮಗಳು, ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್​ ಬಾಟಲಿಗಳನ್ನು ಇಡುವಂತಿಲ್ಲ ಮತ್ತು ಹೂವಿನ ಬೊಕ್ಕೆಗಳನ್ನು ತರುವಂತಿಲ್ಲ ಎಂದು ಆರೋಗ್ಯ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವರು ಹೇಳಿದ್ದಾಗಿ ತಿಳಿಸಿದೆ.

ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮತ್ತು ಮಾನವರ ಆರೋಗ್ಯ ಹಾಳಾಗುತ್ತಿದೆ.  ಪಂಜಾಬ್​​ನಲ್ಲಿ ವರ್ಷಕ್ಕೆ 50 ಸಾವಿರ ಟನ್​​ಗಳಷ್ಟು ಏಕಬಳಕೆ ಪ್ಲಾಸ್ಟಿಕ್​ಗಳು ಸಿಗುತ್ತಿವೆ. ಅಂದರೆ ಮತ್ತೆ ಸಂಸ್ಕರಿಸಲಾಗದ ಬಾಟಲಿ, ಪ್ಲಾಸ್ಟಿಕ್​ ಬ್ಯಾಗ್​​ಗಳ ಬಳಕೆ ಶೇ.50ರಷ್ಟು ಏರಿದೆ. ಈ ಪ್ಲಾಸ್ಟಿಕ್​​ ನಿಯಂತ್ರಣಕ್ಕಾಗಿ ಹೀಗೆ ಕ್ರಮ ಕೈಗೊಂಡಿದ್ದಾಗಿ  ಪಂಜಾಬ್​ ಆರೋಗ್ಯ ಸಚಿವ ಡಾ. ವಿಜಯ್ ಸಿಂಗ್ಲಾ ತಿಳಿಸಿದ್ದಾರೆ.

ಈಗ ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ಈ ಆದೇಶವನ್ನು ಇಲಾಖೆಯ ನಿರ್ದೇಶಕರಿಂದ ಹಿಡಿದು, ಎಲ್ಲ ಸಿವಿಲ್​ ಸರ್ಜನ್​ಗಳೂ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು