AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ

ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್​ ನೀರಿನ ಬಾಟಲಿ, ಹೂವಿನ ಬೊಕ್ಕೆ ಬಳಸುವಂತಿಲ್ಲ; ಈ ರಾಜ್ಯದ ಆರೋಗ್ಯ ಸಚಿವರಿಂದ ಆದೇಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 24, 2022 | 11:13 AM

Share

ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗಳನ್ನು ಹಾಗೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡಬಾರದು ಎಂದು ಪಂಜಾಬ್​ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಆದೇಶಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರ್ದೇಶನಾಲಯ, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮಗಳು, ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್​ ಬಾಟಲಿಗಳನ್ನು ಇಡುವಂತಿಲ್ಲ ಮತ್ತು ಹೂವಿನ ಬೊಕ್ಕೆಗಳನ್ನು ತರುವಂತಿಲ್ಲ ಎಂದು ಆರೋಗ್ಯ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವರು ಹೇಳಿದ್ದಾಗಿ ತಿಳಿಸಿದೆ.

ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ಲಾಸ್ಟಿಕ್​​ನಿಂದಾಗಿ ಪರಿಸರ ಮತ್ತು ಮಾನವರ ಆರೋಗ್ಯ ಹಾಳಾಗುತ್ತಿದೆ.  ಪಂಜಾಬ್​​ನಲ್ಲಿ ವರ್ಷಕ್ಕೆ 50 ಸಾವಿರ ಟನ್​​ಗಳಷ್ಟು ಏಕಬಳಕೆ ಪ್ಲಾಸ್ಟಿಕ್​ಗಳು ಸಿಗುತ್ತಿವೆ. ಅಂದರೆ ಮತ್ತೆ ಸಂಸ್ಕರಿಸಲಾಗದ ಬಾಟಲಿ, ಪ್ಲಾಸ್ಟಿಕ್​ ಬ್ಯಾಗ್​​ಗಳ ಬಳಕೆ ಶೇ.50ರಷ್ಟು ಏರಿದೆ. ಈ ಪ್ಲಾಸ್ಟಿಕ್​​ ನಿಯಂತ್ರಣಕ್ಕಾಗಿ ಹೀಗೆ ಕ್ರಮ ಕೈಗೊಂಡಿದ್ದಾಗಿ  ಪಂಜಾಬ್​ ಆರೋಗ್ಯ ಸಚಿವ ಡಾ. ವಿಜಯ್ ಸಿಂಗ್ಲಾ ತಿಳಿಸಿದ್ದಾರೆ.

ಈಗ ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ಈ ಆದೇಶವನ್ನು ಇಲಾಖೆಯ ನಿರ್ದೇಶಕರಿಂದ ಹಿಡಿದು, ಎಲ್ಲ ಸಿವಿಲ್​ ಸರ್ಜನ್​ಗಳೂ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ