AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬೇಡ ಅಂದಿದ್ದಕ್ಕೆ ಮಹಿಳೆಯ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಮದುವೆ ಬೇಡ ಅಂದಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ಬೆಂಕಿ(Fire) ಹಚ್ಚಿ ಸೇಡು ತೀರಿಸಿಕೊಂಡಿರುವ ಘಟನೆ ಪಂಜಾಬ್​​ನ ಜಲಂಧರ್​​ನಲ್ಲಿ ನಡೆದಿದೆ. ಅಗ್ನಿ ಅವಘಡ ಸಂಭವಿಸಿದಾಗ ಸುಖ್ವಿಂದರ್ ಕೌರ್ ಎಂಬ ಮಹಿಳೆ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮದುವೆ ಬೇಡ ಅಂದಿದ್ದಕ್ಕೆ ಮಹಿಳೆಯ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ
ದಾಳಿ Image Credit source: India Today
ನಯನಾ ರಾಜೀವ್
|

Updated on: Aug 03, 2025 | 8:20 AM

Share

ಜಲಂಧರ್, ಆಗಸ್ಟ್​ 03: ಸಮಾಜದಲ್ಲಿ ಎಂತೆಂಥಾ ಜನರಿರ್ತಾರಪ್ಪ, ಮದುವೆ ಬೇಡ ಅಂದಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ಬೆಂಕಿ(Fire) ಹಚ್ಚಿ ಸೇಡು ತೀರಿಸಿಕೊಂಡಿರುವ ಘಟನೆ ಪಂಜಾಬ್​​ನ ಜಲಂಧರ್​​ನಲ್ಲಿ ನಡೆದಿದೆ. ಅಗ್ನಿ ಅವಘಡ ಸಂಭವಿಸಿದಾಗ ಸುಖ್ವಿಂದರ್ ಕೌರ್ ಎಂಬ ಮಹಿಳೆ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಾಮ ಮಂಡಿ ಹಂತ-2 ರ ಏಕ್ತಾ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆ ವ್ಯಕ್ತಿ ತನ್ನ ಮಗಳನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ ಆಕೆ ಮದುವೆಗೆ ಒಪ್ಪದ ಕಾರಣ ಈ ಕೃತ್ಯವೆಸಗಿದ್ದಾನೆ ಎಂದು ಮಹಿಳೆಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಕುಟುಂಬ ಸದಸ್ಯರ ಪ್ರಕಾರ, ಆ ವ್ಯಕ್ತಿ ನಿತ್ಯ ತರಕಾರಿಗಳನ್ನು ಮನೆಗೆ ತಲುಪಿಸುವಂತಹ ಕೆಲಸ ಮಾಡುತ್ತಿದ್ದ, ಮಹಿಳೆ ಬಳಿ ಮದುವೆ ಪ್ರಸ್ತಾಪ ಮಾಡಿದ್ದ, ಆಕೆ ತಿರಸ್ಕರಿಸಿದ್ದಳು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಆ ಸಮಯದಲ್ಲಿ ಕೌರ್ ಆತನಿಗೆ ಕಪಾಳಮೋಕ್ಷ ಮಾಡಿದ್ದಳು. ಅದು ಅವನಿಗೆ ಕೋಪ ತರಿಸಿತ್ತು.

ಮತ್ತಷ್ಟು ಓದಿ: ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ: ಇಡೀ ಮನೆ ಬೆಂಕಿಗಾಹುತಿ

ಸ್ವಲ್ಪ ಸಮಯದ ಬಳಿಕ ಪೆಟ್ರೋಲ್ ಬಾಟಲಿಯನ್ನು ತಂದು, ಗೋಡೆಯನ್ನು ಹತ್ತಿ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ್ದ. ಘಟನೆಯ ಬಗ್ಗೆ ಆಸ್ಪತ್ರೆಯಿಂದ ಕರೆ ಬಂದಿರುವುದನ್ನು ಸಬ್-ಇನ್ಸ್‌ಪೆಕ್ಟರ್ ಅಜ್ಮೀರ್ ಲಾಲ್ ದೃಢಪಡಿಸಿದ್ದಾರೆ. ಈ ವಿಷಯ ರಾಮ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.

ರಾಮ ಮಂಡಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ಮಾಹಿತಿ ನೀಡಿದ್ದು, ಈ ವಿಷಯ ನಮ್ಮ ಗಮನಕ್ಕೆ ಬಂದಿದೆ ಮತ್ತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!