ವಿಡಿಯೋ ಕಾಲ್​ನಲ್ಲಿ ಯುವತಿಗೆ ಖಾಸಗಿ ಅಂಗ ತೋರಿಸಿದ ಆಪ್ ಸಚಿವ; ಬಿಜೆಪಿ ಆರೋಪ

ಪಂಜಾಬ್ ಆಮ್ ಆದ್ಮಿ ಪಕ್ಷದ ಸಚಿವ ಬಾಲ್ಕರ್ ಸಿಂಗ್ ಅವರ ಆಕ್ಷೇಪಾರ್ಹ ವಿಡಿಯೋವನ್ನು ಬಿಜೆಪಿ ಹಂಚಿಕೊಂಡ ನಂತರ ಸೋಮವಾರ ವಿವಾದ ಭುಗಿಲೆದ್ದಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಬಾಲ್ಕರ್ ಸಿಂಗ್ 21 ವರ್ಷದ ಮಹಿಳೆಯೊಬ್ಬರಿಗೆ ಉದ್ಯೋಗದ ಬದಲಿಗೆ ಕ್ಯಾಮೆರಾದಲ್ಲಿ ಲೈಂಗಿಕ ಅನುಕೂಲಗಳನ್ನು ಮಾಡಲು ಒತ್ತಾಯಿಸಿದ್ದಾರೆ ಮತ್ತು ಯುವತಿಗೆ ತನ್ನ ಖಾಸಗಿ ಭಾಗಗಳನ್ನು ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿಡಿಯೋ ಕಾಲ್​ನಲ್ಲಿ ಯುವತಿಗೆ ಖಾಸಗಿ ಅಂಗ ತೋರಿಸಿದ ಆಪ್ ಸಚಿವ; ಬಿಜೆಪಿ ಆರೋಪ
ಪಂಜಾಬ್ ಸಚಿವ ಬಾಲ್ಕರ್ ಸಿಂಗ್

Updated on: May 27, 2024 | 10:18 PM

ನವದೆಹಲಿ: ಆಮ್ ಆದ್ಮಿ ಪಕ್ಷದ (Aam Aadmi Party) ನಾಯಕ ಹಾಗೂ ಪಂಜಾಬ್ ಸಚಿವ ಬಾಲ್ಕರ್ ಸಿಂಗ್ (Balkar Singh) 21 ವರ್ಷದ ಯುವತಿಯೊಬ್ಬಳಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಈ ಆರೋಪಗಳನ್ನು ಬೆಳಕಿಗೆ ತಂದಿದ್ದು, ಬಾಲ್ಕರ್ ಸಿಂಗ್ ಅವರು ಅನುಚಿತ ಲೈಂಗಿಕ ನಡವಳಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಡಿಯೋ ಕರೆಯಲ್ಲಿ ಬಾಲ್ಕರ್ ಸಿಂಗ್ ಅವರು ಆ ಮಹಿಳೆಯ ಬಳಿ ಬಟ್ಟೆ ಬಿಚ್ಚಲು ಒತ್ತಾಯಿಸಿದ್ದಾರೆ. ಅಲ್ಲದೆ, ಆಕೆಗೆ ತಮ್ಮ ಖಾಸಗಿ ಅಂಗಗಳನ್ನು ತೋರಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಗಮನಿಸಿದ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಆರೋಪಗಳನ್ನು ತನಿಖೆ ಮಾಡಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಪಂಜಾಬ್ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ವಿದೇಶಗಳಿಂದ 7 ಕೋಟಿ ದೇಣಿಗೆ; ಗೃಹ ಸಚಿವಾಲಯಕ್ಕೆ ಪತ್ರ ಬರೆದ ಇಡಿ

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸೋಮವಾರ ಪಂಜಾಬ್ ಸಚಿವ ಬಾಲ್ಕರ್ ಸಿಂಗ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ತ್ವರಿತ ತನಿಖೆಗೆ ಕರೆ ನೀಡಿದೆ ಮತ್ತು 3 ದಿನಗಳಲ್ಲಿ ರಾಜ್ಯ ಪೊಲೀಸರಿಂದ ವರದಿ ಕೇಳಿದೆ. ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ, ಆಪ್ ಶಾಸಕ ಬಾಲ್ಕರ್ ಸಿಂಗ್ ಅವರು ಅನುಚಿತ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಪಂಜಾಬ್ ಡಿಜಿಪಿ ಗೌರವ್ ಯಾದವ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಉದ್ಯೋಗವನ್ನು ಹುಡುಕುತ್ತಿರುವ ಮಹಿಳೆಯೊಂದಿಗೆ ವಿಡಿಯೋ ಕಾಲ್​ನಲ್ಲಿ ಬಾಲ್ಕರ್ ಸಿಂಗ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ಬಗ್ಗಾ ಆರೋಪಿಸಿದ್ದಾರೆ.

ಆದರೆ, ಸಚಿವ ಬಾಲ್ಕರ್ ಸಿಂಗ್ ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಉದ್ದೇಶಿತ ಅಶ್ಲೀಲ ವೀಡಿಯೊದ ಬಗ್ಗೆ ನನಗೆ ತಿಳಿದಿಲ್ಲ, ಇದರಲ್ಲಿ ನನ್ನ ತಪ್ಪಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ

ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಪ್ರಶ್ನಿಸಿದ್ದು, “ಎಲ್ಲಾ ಪುರಾವೆಗಳಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ?” ಎಂದು ಕೇಳಿದ್ದಾರೆ. “ಪಂಜಾಬ್ ಗುರುಗಳ ನಾಡು, ಈ ನೆಲದಲ್ಲಿ ಅನೈತಿಕ ಕೆಲಸ ಮಾಡುವ ಸಾರ್ವಜನಿಕ ಪ್ರತಿನಿಧಿಗಳು ಇರಬಹುದೇ?” ಎಂದು ಎಕ್ಸ್​ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಕೂಡ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us