AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ
ಡ್ರೋನ್Image Credit source: India TV
ನಯನಾ ರಾಜೀವ್
|

Updated on: May 23, 2023 | 2:14 PM

Share

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿದ್ದು ಮತ್ತೊಮ್ಮೆ ಆ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ.

ಬಿಒಪಿ ರಾಜತಾಲ್ ಪ್ರದೇಶದಲ್ಲಿ ಬಿಎಸ್‌ಎಫ್‌ನ 144 ಕಾರ್ಪ್ಸ್‌ನ ಪಡೆಗಳು ಕಾರ್ಯಾಚರಣೆ ನಡೆಸಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿ ಬರುತ್ತಿತ್ತು, ಇದರಲ್ಲಿ ಬಿಳಿಯ ಪ್ಯಾಕೆಟ್​ಗಳು ಇರುವುದನ್ನು ಗಮನಿಸಿ ದಾಳಿ ಮಾಡಲಾಗಿದೆ. ಕಳ್ಳಸಾಗಣೆ ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಈ ಮೂಲಕ ಸೇನೆ ಪಾಕಿಸ್ತಾನದ ಮತ್ತೊಂದು ಕೃತ್ಯವನ್ನು ವಿಫಲಗೊಳಿಸಿದೆ. ಇದಕ್ಕೂ ಮೊದಲು ಭಾನುವಾರವೂ ಇದೇ ಭಾಗದಿಂದ ಬಂದ ಡ್ರೋನ್​ ಅನ್ನು ಹೊಡೆದುರುಳಿಸಲಾಗಿತ್ತು.

ಮತ್ತಷ್ಟು ಓದಿ: Amritsar: ಅಮೃತಸರದ ಗಡಿ ಬಳಿ ಪಾಕ್​ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಇದಕ್ಕೂ ಮೊದಲು, ಪಂಜಾಬ್‌ನ ಅಮೃತಸರದಿಂದ ಶಂಕಿತ ಮಾದಕವಸ್ತುಗಳನ್ನು ಒಳಗೊಂಡಿರುವ ಬ್ಯಾಗ್‌ನೊಂದಿಗೆ ಮತ್ತೊಂದು ಪಾಕಿಸ್ತಾನಿ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪ್ರಕಾರ, ಕಳೆದ 4 ದಿನಗಳಲ್ಲಿ ಅವರು ಹೊಡೆದುರುಳಿಸಿದ 5 ಡ್ರೋನ್ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ