AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ
ಡ್ರೋನ್Image Credit source: India TV
ನಯನಾ ರಾಜೀವ್
|

Updated on: May 23, 2023 | 2:14 PM

Share

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿದ್ದು ಮತ್ತೊಮ್ಮೆ ಆ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ.

ಬಿಒಪಿ ರಾಜತಾಲ್ ಪ್ರದೇಶದಲ್ಲಿ ಬಿಎಸ್‌ಎಫ್‌ನ 144 ಕಾರ್ಪ್ಸ್‌ನ ಪಡೆಗಳು ಕಾರ್ಯಾಚರಣೆ ನಡೆಸಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿ ಬರುತ್ತಿತ್ತು, ಇದರಲ್ಲಿ ಬಿಳಿಯ ಪ್ಯಾಕೆಟ್​ಗಳು ಇರುವುದನ್ನು ಗಮನಿಸಿ ದಾಳಿ ಮಾಡಲಾಗಿದೆ. ಕಳ್ಳಸಾಗಣೆ ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಈ ಮೂಲಕ ಸೇನೆ ಪಾಕಿಸ್ತಾನದ ಮತ್ತೊಂದು ಕೃತ್ಯವನ್ನು ವಿಫಲಗೊಳಿಸಿದೆ. ಇದಕ್ಕೂ ಮೊದಲು ಭಾನುವಾರವೂ ಇದೇ ಭಾಗದಿಂದ ಬಂದ ಡ್ರೋನ್​ ಅನ್ನು ಹೊಡೆದುರುಳಿಸಲಾಗಿತ್ತು.

ಮತ್ತಷ್ಟು ಓದಿ: Amritsar: ಅಮೃತಸರದ ಗಡಿ ಬಳಿ ಪಾಕ್​ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಇದಕ್ಕೂ ಮೊದಲು, ಪಂಜಾಬ್‌ನ ಅಮೃತಸರದಿಂದ ಶಂಕಿತ ಮಾದಕವಸ್ತುಗಳನ್ನು ಒಳಗೊಂಡಿರುವ ಬ್ಯಾಗ್‌ನೊಂದಿಗೆ ಮತ್ತೊಂದು ಪಾಕಿಸ್ತಾನಿ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪ್ರಕಾರ, ಕಳೆದ 4 ದಿನಗಳಲ್ಲಿ ಅವರು ಹೊಡೆದುರುಳಿಸಿದ 5 ಡ್ರೋನ್ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ