AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ.

Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ
ಡ್ರೋನ್Image Credit source: India TV
ನಯನಾ ರಾಜೀವ್
|

Updated on: May 23, 2023 | 2:14 PM

Share

ಅಮೃತಸರದಲ್ಲಿ ಡ್ರಗ್ಸ್​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿದ್ದು ಮತ್ತೊಮ್ಮೆ ಆ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ.

ಬಿಒಪಿ ರಾಜತಾಲ್ ಪ್ರದೇಶದಲ್ಲಿ ಬಿಎಸ್‌ಎಫ್‌ನ 144 ಕಾರ್ಪ್ಸ್‌ನ ಪಡೆಗಳು ಕಾರ್ಯಾಚರಣೆ ನಡೆಸಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿ ಬರುತ್ತಿತ್ತು, ಇದರಲ್ಲಿ ಬಿಳಿಯ ಪ್ಯಾಕೆಟ್​ಗಳು ಇರುವುದನ್ನು ಗಮನಿಸಿ ದಾಳಿ ಮಾಡಲಾಗಿದೆ. ಕಳ್ಳಸಾಗಣೆ ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಈ ಮೂಲಕ ಸೇನೆ ಪಾಕಿಸ್ತಾನದ ಮತ್ತೊಂದು ಕೃತ್ಯವನ್ನು ವಿಫಲಗೊಳಿಸಿದೆ. ಇದಕ್ಕೂ ಮೊದಲು ಭಾನುವಾರವೂ ಇದೇ ಭಾಗದಿಂದ ಬಂದ ಡ್ರೋನ್​ ಅನ್ನು ಹೊಡೆದುರುಳಿಸಲಾಗಿತ್ತು.

ಮತ್ತಷ್ಟು ಓದಿ: Amritsar: ಅಮೃತಸರದ ಗಡಿ ಬಳಿ ಪಾಕ್​ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಇದಕ್ಕೂ ಮೊದಲು, ಪಂಜಾಬ್‌ನ ಅಮೃತಸರದಿಂದ ಶಂಕಿತ ಮಾದಕವಸ್ತುಗಳನ್ನು ಒಳಗೊಂಡಿರುವ ಬ್ಯಾಗ್‌ನೊಂದಿಗೆ ಮತ್ತೊಂದು ಪಾಕಿಸ್ತಾನಿ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪ್ರಕಾರ, ಕಳೆದ 4 ದಿನಗಳಲ್ಲಿ ಅವರು ಹೊಡೆದುರುಳಿಸಿದ 5 ಡ್ರೋನ್ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ