AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video ಹೀಗೂ ಉಂಟೆ…? ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?

ವೈರಲ್ ವಿಡಿಯೋ: ಬಡವರ ಆಸರೆಗಾಗಿ ಸರ್ಕಾರ ಪಡಿತರ ಅಕ್ಕಿ ನೀಡುತ್ತದೆ. ಆದರೆ ಇಲ್ಲಿ ಬೆಂಜ್ ಕಾರಿನಲ್ಲಿ ಪಡಿತರ ಸಾಮಾನು ಸಾಗಿಸುವುದು ಸಾಮಾನ್ಯವಾಗಿದೆ.

Viral Video ಹೀಗೂ ಉಂಟೆ...? ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?
ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?
TV9 Web
| Edited By: |

Updated on: Sep 06, 2022 | 3:11 PM

Share

Viral Video: ಬಡವರ ಆಸರೆಗಾಗಿ ಸರ್ಕಾರ ಪಡಿತರ ಆಹಾರ ಪದಾರ್ಥಗಳನ್ನು (Ration) ತಿಂಗಳಾ ತಿಂಗಳ ನೀಡುತ್ತದೆ. ಆದರೆ ಇಲ್ಲಿ ಬೆಂಜ್ ಕಾರಿನಲ್ಲಿ (Mercedes Benz Car) ಪಡಿತರ ಸಾಮಗ್ರಿ ಸಾಗಿಸುತ್ತಿರುವುದು ತೀವ್ರ ಟೀಕೆ, ಕೆಂಗಣ್ಣಿಗೆ ಗುರಿಯಾಗುತ್ತಿದೆ. ವಿವರಗಳಿಗೆ ಹೋಗುವುದಾದರೆ… ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉಚಿತ ರೇಷನ್ ತೆಗೆದುಕೊಳ್ಳಲು ವ್ಯಕ್ತಿಯೊಬ್ಬ ಬೆಂಜ್ ಕಾರಿನಲ್ಲಿ ಬಂದಿದ್ದ. ಪಂಜಾಬ್ ಸರ್ಕಾರ ನೀಡಿದ ಉಚಿತ ಪಡಿತರವನ್ನು ಬೆಂಜ್ ಕಾರಿನಲ್ಲಿ ತೆಗೆದುಕೊಂಡು ಹೋಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಉದಾರೀಕರಣದ ಫಲವಾದ ಯೋಜನೆಗಳು ದುರ್ಬಳಕೆ ಆಗುತ್ತಿವೆ ಎಂಬ ಟೀಕೆಗಳು ದೇಶದೆಲ್ಲೆಡೆ ಕೇಳಿ ಬರುತ್ತಿರುತ್ತದೆ. ಆದರೆ… ಪಡಿತರ ಅಂಗಡಿಗೆ ಬಂದವರು ಬೆಂಜ್ ಕಾರಿನಲ್ಲಿ ರೇಶನ್ ತೆಗೆದುಕೊಂಡು ಹೋಗಿದ್ದಾರೆ. ಆದರೆ ಬೆಂಜ್ ಕಾರಿನಲ್ಲಿ ರೇಶನ್ ತೆಗೆದುಕೊಂಡು ಹೋಗಿದ್ದು ಏಕೆ ಎಂಬುದಕ್ಕೆ ಬಳಿಕ ವಿವರಣೆ ನೀಡಿದ್ದಾರೆ. ಆ ವ್ಯಕ್ತಿಯ ಹೆಸರು ಸುಮಿತ್ ಶೈನಿ. ಕಾರು ಅವರದ್ದಲ್ಲವಂತೆ. ವಿದೇಶದಲ್ಲಿರುವ ತನ್ನ ಸಂಬಂಧಿಕರಿಗೆ ಸೇರಿದ್ದು ಎಂದು ಹೇಳಿಕೊಂಡಿದ್ದಾನೆ. ನನ್ನ ಮಕ್ಕಳು ಪಡಿತರ ಅಂಗಡಿಯಲ್ಲಿ ಸರದಿಯಲ್ಲಿ ನಿಂತಿದ್ದರು. ಅದರಂತೆ ಪಡಿತರ ತೆಗೆದುಕೊಂಡಿದ್ದಾರೆ. ಬಳಿಕ ಅದನ್ನು ಮನೆಗೆ ಕೊಂಡೊಯ್ಯಲು ಮನೆಯಲ್ಲಿರುವ ಬೆಂಜ್ ಕಾರು ತೆಗೆದುಕೊಂಡು ಬರುವಂತೆ ಹೇಳಿದ್ದರಿಂದ ತಾನು ಕಾರು ತಂದಿದ್ದಾಗಿ ತಿಳಿಸಿದ್ದಾರೆ. ತಾನು ಬಡವನಾಗಿದ್ದು, ತನ್ನ ಮಕ್ಕಳು ಸರಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಬೇಕಾದರೆ ತನಿಖೆ ನಡೆಸಬಹುದು ಎಂದಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್