AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video ಹೀಗೂ ಉಂಟೆ…? ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?

ವೈರಲ್ ವಿಡಿಯೋ: ಬಡವರ ಆಸರೆಗಾಗಿ ಸರ್ಕಾರ ಪಡಿತರ ಅಕ್ಕಿ ನೀಡುತ್ತದೆ. ಆದರೆ ಇಲ್ಲಿ ಬೆಂಜ್ ಕಾರಿನಲ್ಲಿ ಪಡಿತರ ಸಾಮಾನು ಸಾಗಿಸುವುದು ಸಾಮಾನ್ಯವಾಗಿದೆ.

Viral Video ಹೀಗೂ ಉಂಟೆ...? ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?
ಬಡವರಿಗೆ ಸಲ್ಲಬೇಕಾದ ಉಚಿತ ಪಡಿತರವನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು, ತೆಗೆದುಕೊಂಡು ಹೋದರು! ಎಲ್ಲಿ?
TV9 Web
| Updated By: ಸಾಧು ಶ್ರೀನಾಥ್​|

Updated on: Sep 06, 2022 | 3:11 PM

Share

Viral Video: ಬಡವರ ಆಸರೆಗಾಗಿ ಸರ್ಕಾರ ಪಡಿತರ ಆಹಾರ ಪದಾರ್ಥಗಳನ್ನು (Ration) ತಿಂಗಳಾ ತಿಂಗಳ ನೀಡುತ್ತದೆ. ಆದರೆ ಇಲ್ಲಿ ಬೆಂಜ್ ಕಾರಿನಲ್ಲಿ (Mercedes Benz Car) ಪಡಿತರ ಸಾಮಗ್ರಿ ಸಾಗಿಸುತ್ತಿರುವುದು ತೀವ್ರ ಟೀಕೆ, ಕೆಂಗಣ್ಣಿಗೆ ಗುರಿಯಾಗುತ್ತಿದೆ. ವಿವರಗಳಿಗೆ ಹೋಗುವುದಾದರೆ… ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉಚಿತ ರೇಷನ್ ತೆಗೆದುಕೊಳ್ಳಲು ವ್ಯಕ್ತಿಯೊಬ್ಬ ಬೆಂಜ್ ಕಾರಿನಲ್ಲಿ ಬಂದಿದ್ದ. ಪಂಜಾಬ್ ಸರ್ಕಾರ ನೀಡಿದ ಉಚಿತ ಪಡಿತರವನ್ನು ಬೆಂಜ್ ಕಾರಿನಲ್ಲಿ ತೆಗೆದುಕೊಂಡು ಹೋಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಉದಾರೀಕರಣದ ಫಲವಾದ ಯೋಜನೆಗಳು ದುರ್ಬಳಕೆ ಆಗುತ್ತಿವೆ ಎಂಬ ಟೀಕೆಗಳು ದೇಶದೆಲ್ಲೆಡೆ ಕೇಳಿ ಬರುತ್ತಿರುತ್ತದೆ. ಆದರೆ… ಪಡಿತರ ಅಂಗಡಿಗೆ ಬಂದವರು ಬೆಂಜ್ ಕಾರಿನಲ್ಲಿ ರೇಶನ್ ತೆಗೆದುಕೊಂಡು ಹೋಗಿದ್ದಾರೆ. ಆದರೆ ಬೆಂಜ್ ಕಾರಿನಲ್ಲಿ ರೇಶನ್ ತೆಗೆದುಕೊಂಡು ಹೋಗಿದ್ದು ಏಕೆ ಎಂಬುದಕ್ಕೆ ಬಳಿಕ ವಿವರಣೆ ನೀಡಿದ್ದಾರೆ. ಆ ವ್ಯಕ್ತಿಯ ಹೆಸರು ಸುಮಿತ್ ಶೈನಿ. ಕಾರು ಅವರದ್ದಲ್ಲವಂತೆ. ವಿದೇಶದಲ್ಲಿರುವ ತನ್ನ ಸಂಬಂಧಿಕರಿಗೆ ಸೇರಿದ್ದು ಎಂದು ಹೇಳಿಕೊಂಡಿದ್ದಾನೆ. ನನ್ನ ಮಕ್ಕಳು ಪಡಿತರ ಅಂಗಡಿಯಲ್ಲಿ ಸರದಿಯಲ್ಲಿ ನಿಂತಿದ್ದರು. ಅದರಂತೆ ಪಡಿತರ ತೆಗೆದುಕೊಂಡಿದ್ದಾರೆ. ಬಳಿಕ ಅದನ್ನು ಮನೆಗೆ ಕೊಂಡೊಯ್ಯಲು ಮನೆಯಲ್ಲಿರುವ ಬೆಂಜ್ ಕಾರು ತೆಗೆದುಕೊಂಡು ಬರುವಂತೆ ಹೇಳಿದ್ದರಿಂದ ತಾನು ಕಾರು ತಂದಿದ್ದಾಗಿ ತಿಳಿಸಿದ್ದಾರೆ. ತಾನು ಬಡವನಾಗಿದ್ದು, ತನ್ನ ಮಕ್ಕಳು ಸರಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಬೇಕಾದರೆ ತನಿಖೆ ನಡೆಸಬಹುದು ಎಂದಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ