AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 22, 2020 | 10:34 AM

Share

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ