AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 22, 2020 | 10:34 AM

Share

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ