AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Ghanashyam D M | ಡಿ.ಎಂ.ಘನಶ್ಯಾಮ
| Edited By: ಸಾಧು ಶ್ರೀನಾಥ್​|

Updated on:Dec 22, 2020 | 10:34 AM

Share

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!