AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Ghanashyam D M | ಡಿ.ಎಂ.ಘನಶ್ಯಾಮ
| Edited By: ಸಾಧು ಶ್ರೀನಾಥ್​|

Updated on:Dec 22, 2020 | 10:34 AM

Share

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ