AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 22, 2020 | 10:34 AM

Share

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ