AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್‌ಗೆ ಬೆದರಿಕೆ ಪತ್ರ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಒಟ್ಟು 35 ಮಂದಿ ಆರೋಪಿಗಳಿದ್ದು ಇದುವರೆಗೆ 23 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಉನ್ನತ ಪೋಲೀಸ್ ಮಾಹಿತಿ ನೀಡಿದ್ದಾರೆ

ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್‌ಗೆ ಬೆದರಿಕೆ ಪತ್ರ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ
ಸಿಧು ಮೂಸೆವಾಲಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 11, 2022 | 10:07 PM

Share

ಸಿಧು ಮೂಸೆವಾಲಾ (Sidhu Moose Wala) ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್‌ಗೆ (Salman Khan) ಕಳುಹಿಸಲಾದ ಬೆದರಿಕೆಗಳ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿರುವ ಪಂಜಾಬ್‌ನ ಉನ್ನತ ಪೊಲೀಸ್, ಆರೋಪಿಗಳಲ್ಲಿ ಒಬ್ಬರು ಬಾಲಿವುಡ್ ನಟನನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಭಾನುವಾರ ಹೇಳಿದ್ದಾರೆ. ಜೂನ್‌ನಲ್ಲಿ, ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಗಾಯಕ,ರಾಜಕಾರಣಿ ಮೂಸೆವಾಲಾ ಹತ್ಯೆಯಾದ ನಂತರ ಸಲ್ಮಾನ್ ಖಾನ್ ಮತ್ತು ಅವರ ಅಪ್ಪ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸೂಚನೆಯ ಮೇರೆಗೆ ಈ ಸಂಚು ನಡೆಸಲಾಯಿತು. “ತನಿಖೆಯ ಸಮಯದಲ್ಲಿ, ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಕಪಿಲ್ ಪಂಡಿತ್, ಸಚಿನ್ ಬಿಷ್ಣೋಯ್ ಮತ್ತು ಸಂತೋಷ್ ಯಾದವ್ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಹೇಳಿದ್ದಾನೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ನಾವು ಅವರನ್ನು ಸಹ ವಿಚಾರಣೆ ಮಾಡುತ್ತೇವೆ ಎಂದಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ನಡೆಸಿದ ಸಂಚಿನಲ್ಲಿ ದರೋಡೆಕೋರರಾದ ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಕೂಡ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹತ್ಯೆಯನ್ನು ನಡೆಸಲು ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಮೂಲಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕಪಿಲ್ ಅವರನ್ನು ಸಂಪರ್ಕಿಸಿದ್ದರು. ಅವರು ಈ ಹಿಂದೆಯೂ ಸಹ, ಸಿಧು ಮೂಸೆವಾಲಾ ಅವರನ್ನು ಕೊಲ್ಲುವ ಉದ್ದೇಶದಿಂದ ಹಲವಾರು ಬಾರಿ ಸಂಚು ನಡೆಸಿದ್ದರು.ವಿಕ್ಕಿ ಮಿದ್ದುಖೇರಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನವರು ಈ ಸಂಚು ಹೂಡಿದ್ದರು ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಒಟ್ಟು 35 ಮಂದಿ ಆರೋಪಿಗಳಿದ್ದು ಇದುವರೆಗೆ 23 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಉನ್ನತ ಪೋಲೀಸ್ ಮಾಹಿತಿ ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ ಕೇಂದ್ರ ಏಜೆನ್ಸಿಗಳ ಸಹಾಯದಿಂದ ಇಂಟರ್‌ಪೋಲ್ ಮೂಲಕ ದರೋಡೆಕೋರ ಗೋಲ್ಡಿ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಹತ್ಯೆಗೈದ ಆರೋಪಿಗಳಲ್ಲಿ ನಾಲ್ವರು ವಿದೇಶದಲ್ಲಿದ್ದರೆ, ಆರು ಮಂದಿಯನ್ನು ಇನ್ನೂ ಬಂಧಿಸಬೇಕಾಗಿದೆ. ಅವರು ಪೊಲೀಸ್ ನಿಗಾದಲ್ಲಿದ್ದಾರೆ.

ವಿದೇಶಕ್ಕೆ ಪರಾರಿಯಾಗಿರುವ ದರೋಡೆಕೋರರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ. ಗ್ಯಾಂಗ್ ಸ್ಟರ್ ಸಚಿನ್ ಥಾಪನ್ ಅವರನ್ನು ಅಜೆರ್ಬೈಜಾನ್‌ನಲ್ಲಿ ಬಂಧಿಸಲಾಗಿದೆ ಮತ್ತು ಶೀಘ್ರದಲ್ಲೇ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಒಟ್ಟು 105 ದಿನಗಳನ್ನು ತೆಗೆದುಕೊಂಡಿತು. ಆರೋಪಿಗಳು ಅಡಗಿರುವ ರಾಜ್ಯಗಳು ಹರ್ಯಾಣ, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳ” ಎಂದು ಒತ್ತಿ ಪಂಜಾಬ್‌ನ ಉನ್ನತ ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.

Published On - 10:04 pm, Sun, 11 September 22

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!