AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

Punjab CM | ಪಂಜಾಬ್​ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಂ ಆಯ್ಕೆ ಕುರಿತು ನಿರ್ಧಾರವಾಗಲಿದೆ.

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ
ನವಜೋತ್ ಸಿಂಗ್ ಸಿಧು, ಸುನಿಲ್ ಜಖಾರ್
TV9 Web
| Edited By: |

Updated on:Sep 19, 2021 | 10:04 AM

Share

ಪಂಜಾಬ್: ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್​ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಇಂದು ನಿರ್ಧಾರವಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಭೆ ನಡೆಯಲಿದೆ. ಪಂಜಾಬ್​ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಂ ಆಯ್ಕೆ ಕುರಿತು ನಿರ್ಧಾರವಾಗಲಿದೆ.

ನಿನ್ನೆ ಸಂಜೆ ನಡೆದ ಸಿಎಲ್​ಪಿ ಸಭೆಯಲ್ಲಿ ಪಂಜಾಬ್ ಕಾಂಗ್ರೆಸ್ ಶಾಸಕರು ನೂತನ ಮುಖ್ಯಮಂತ್ರಿ ಆಯ್ಕೆಯ ಸಂಪೂರ್ಣ ಅಧಿಕಾರವನ್ನು ಸೋನಿಯಾ ಗಾಂಧಿ ಅವರೇ ವಹಿಸಿಕೊಳ್ಳಬೇಕು. ಅವರ ಆಯ್ಕೆಯೇ ಅಂತಿಮ ಎಂದು ನಿರ್ಣಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಮುಖ್ಯ ಸಭೆ ನಡೆಯಲಿದೆ. ನಿನ್ನೆ ಸಂಜೆಯ ಸಿಎಲ್​ಪಿ ಸಭೆಯ ಬಳಿಕ ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಪಂಜಾಬ್ ಮುಖ್ಯಮಂತ್ರಿ ರೇಸ್​ನಲ್ಲಿರುವವರ ಪೈಕಿ ಪಂಜಾಬ್​ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಖಾರ್ ಹೆಸರು ಮೊದಲಿದೆ. ಜಖಾರ್ ಪಂಜಾಬ್ ಮುಖ್ಯಮಂತ್ರಿಯಾದರೆ ಪಂಜಾಬ್​ನಲ್ಲಿ ಹಿಂದು ಮುಖ್ಯಮಂತ್ರಿ ಮತ್ತು ಜಾಟ್ ಸಿಖ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದಂತಾಗುತ್ತದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರ ಪಕ್ಷದ ನಾಯಕರದ್ದು.

ಸುನಿಲ್ ಜಖಾರ್ ಅವರನ್ನು ಬಿಟ್ಟರೆ ಪಂಜಾಬ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧು, ಪ್ರತಾಪ್ ಬಾಜ್ವಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ, ಪಂಜಾಬ್ ಸಚಿವರಾಗಿದ್ದ ಸುಖ್ಜಿಂದರ್ ರಾಂಧವ, ಸುಖ್ಬಿಂದರ್ ಸಿಂಗ್ ಸರ್ಕಾರಿ ಬ್ರಹ್ಮ ಮೊಹಿಂದ್ರ, ವಿಜಯ್ ಇಂದರ್ ಸಿಂಗ್ಲಾ, ಕುಲ್ಜಿತ್ ಸಿಂಗ್ ನಾಗ್ರಾ ಹಾಗೂ ತೃಪ್ತ್ ರಾಜೀಂದರ್ ಬಾಜ್ವಾ ಅವರ ಹೆಸರು ಕೂಡ ಮುಖ್ಯಮಂತ್ರಿ ಪಟ್ಟಿಯಲ್ಲಿದೆ.

ಪಂಜಾಬ್​ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ಕೂಡ ಕರ್ನಾಟಕ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿತ್ತು. ಈಗಾಗಲೇ ಪಂಜಾಬ್​ನಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಅಕಾಲಿ ದಳದ ಸುಖಬೀರ್​ ಸಿಂಗ್​ ಬಾದಲ್​ ತಂಡ ಬಹಳ ಪ್ರಯತ್ನ ಪಡುತ್ತಿದೆ. ಆಮ್​ ಆದ್ಮಿ ಪಕ್ಷ ಈಗಲೇ ತನ್ನ ಪ್ರಚಾರ ಕಾರ್ಯ ಶುರು ಮಾಡಿದೆ. ಈ ಬಾರಿ ಹೇಗಾದರೂ ಮಾಡಿ ಪಂಜಾಬಿನಲ್ಲಿ ಅಧಿಕಾರಕ್ಕೆ ಬರಲೇಬೇಕೆಂಬುದು ಆ ಪಕ್ಷದ ನಾಯಕರ ತಂತ್ರ. ಬಿಜೆಪಿ ಈಗ ಕ್ಯಾಪ್ಟನ್ ಅಮರೀಂದರ್​ ಸಿಂಗ್​ ಅವರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುವುದು ಖಚಿತ ಎನ್ನಲಾಗಿದೆ.

ಇದನ್ನೂ ಓದಿ: Punjab CM: ಅಮರೀಂದರ್ ಸಿಂಗ್ ರಾಜೀನಾಮೆ ಹಿನ್ನೆಲೆ; ಪಂಜಾಬ್ ನೂತನ ಸಿಎಂ ರೇಸ್​ನಲ್ಲಿದ್ದಾರೆ ಈ ಕಾಂಗ್ರೆಸ್ ನಾಯಕರು

Punjab Congress Crisis: ಪಂಜಾಬ್ ಹೊಸ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಸೋನಿಯಾ ಗಾಂಧಿ ಹೆಗಲಿಗೆ

(Sonia Gandhi To Pick New Punjab Chief Minister Name To Be Announced at CLP Meet Today)

Published On - 10:03 am, Sun, 19 September 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್