AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಬಿಜೆಪಿಯೊಂದಿಗೆ ಮೈತ್ರಿಯಿಲ್ಲ: ಸ್ಪಷ್ಟ ನಿರ್ಧಾರ ಪ್ರಕಟಿಸಿದ ಅಕಾಲಿ ದಳ ಮುಖ್ಯಸ್ಥ

ಕೃಷಿಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ ಕಳೆದ ವರ್ಷ ಅಕಾಲಿ ದಳವು ಎನ್​ಡಿಎ ಸರ್ಕಾರದಲ್ಲಿದ್ದ ತನ್ನ ಪಕ್ಷದ ಏಕೈಕ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ಅವರಿಂದ ರಾಜೀನಾಮೆ ಕೊಡಿಸಿತ್ತು.

ಪಂಜಾಬ್​ನಲ್ಲಿ ಬಿಜೆಪಿಯೊಂದಿಗೆ ಮೈತ್ರಿಯಿಲ್ಲ: ಸ್ಪಷ್ಟ ನಿರ್ಧಾರ ಪ್ರಕಟಿಸಿದ ಅಕಾಲಿ ದಳ ಮುಖ್ಯಸ್ಥ
ಅಕಾಲಿದಳದ ನಾಯಕ ಸುಖ್​ಬಿರ್ ಸಿಂಗ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವೆ ಹರ್​ಸಿಮ್ರತ್ ಕೌರ್
TV9 Web
| Edited By: |

Updated on:Nov 19, 2021 | 7:44 PM

Share

ಚಂಡೀಗಡ: ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷಗಳು ‘ನಾವು ಈ ಮೊದಲೇ ಹೇಳಿರಲಿಲ್ಲವೇ’ ಎನ್ನುವ ಧಾಟಿಯಲ್ಲಿ ಪ್ರತಿಕ್ರಿಯಿಸಿವೆ. ಬಿಜೆಪಿಯ ಒಂದು ಕಾಲದ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳ ಸಹ ಇದಕ್ಕೆ ಹೊರತಾಗಿಲ್ಲ. ಕೃಷಿಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ ಕಳೆದ ವರ್ಷ ಅಕಾಲಿ ದಳವು ಎನ್​ಡಿಎ ಸರ್ಕಾರದಲ್ಲಿದ್ದ ತನ್ನ ಪಕ್ಷದ ಏಕೈಕ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ಅವರಿಂದ ರಾಜೀನಾಮೆ ಕೊಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನ.19) ಕೃಷಿಕಾಯ್ದೆಗಳನ್ನು ಹಿಂಪಡೆಯುವ ಕುರಿತು ನಿರ್ಧಾರ ಪ್ರಕಟಿಸಿದ್ದರು. ಈ ಬೆಳವಣಿಗೆ ನಂತರ ಪಂಜಾಬ್​​ನಲ್ಲಿ ಅಕಾಲಿದಳದ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಹೊಸಿಲಲ್ಲಿರುವ ಪಂಜಾಬ್​ನಲ್ಲಿ ಅಧಿಕಾರಕ್ಕೆ ಮರಳುವ ಕನಸು ಕಾಣುತ್ತಿರುವ ಅಕಾಲಿದಳವು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಕಾಲಿದಳದ ನಾಯಕ ಸುಖ್​ಬಿರ್ ಸಿಂಗ್ ಬಾದಲ್, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕರಾಳ ಕಾಯ್ದೆಯ ಅಪಾಯಗಳ ಬಗ್ಗೆ ಮೊದಲೇ ಹೇಳಿದ್ದೆ’ ಎಂದು ನೆನಪಿಸಿಕೊಂಡರು.

‘ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ 700 ಮಂದಿ ಜೀವ ಕಳೆದುಕೊಂಡಿದ್ದಾರೆ. ದೇಶವು ಈ ಹುತಾತ್ಮರ ತ್ಯಾಗವನ್ನು ಗಮನಿಸಿದೆ. ಈ ಕಾಯ್ದೆಗಳನ್ನು ರೈತರು ಒಪ್ಪಿಕೊಳ್ಳುವುದಿಲ್ಲ ಎಂದು ನಾನು ಬಹಳ ಹಿಂದೆಯೇ ಪ್ರಧಾನಿಗೆ ಕಿವಿಮಾತು ಹೇಳಿದ್ದೆ. ನಮ್ಮ ಮಾತು ನಿಜವಾಯಿತು’ ಎಂದು ಅವರು ಹೇಳಿದರು. ಎನ್​ಡಿಎ ಮೈತ್ರಿಕೂಟದ ಹಳೆಯ ಮಿತ್ರಪಕ್ಷವಾಗಿರುವ ಶಿರೋಮಣಿ ಅಕಾಲಿ ದಳವು ಕಳೆದ ವರ್ಷ ಮೈತ್ರಿಕೂಟದಿಂದ ಹಿಂದೆ ಸರಿಯುವಂತೆ ಮಾಡಿದ ಕಾರಣಗಳನ್ನು ಅವರು ವಿವರಿಸಿದರು.

ಮೋದಿ ಅವರ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ್ದ ಅಕಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್, ಪಂಜಾಬ್​ನ, ದೇಶದ ಮತ್ತು ವಿಶ್ವದ ರೈತರನ್ನು ನಾನು ಅಭಿನಂದಿಸುತ್ತೇನೆ. ಈ ಮಹತ್ವದ ಹೋರಾಟದಲ್ಲಿ ಹುತಾತ್ಮರಾದ 700 ರೈತರ ಕುಟುಂಬಗಳ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಅವರ ಆತ್ಮಾಹುತಿ ಮತ್ತು ಲಖಿಂಪುರ್​ ಖೇರಿಯಂಥ ದುರ್ಘಟನೆಗಳು ಈ ಸರ್ಕಾರದ ಮುಖದ ಮೇಲೆ ಕಪ್ಪುಚುಕ್ಕೆಗಳಾಗಿ ಉಳಿಯುತ್ತವೆ ಎಂದರು. ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರೂ ಸೇರಿದಂತೆ 8 ಮಂದಿ ಕಳೆದ ತಿಂಗಳು ಕೇಂದ್ರ ಸಚಿವ ಅಜಯ್​ಮಿಶ್ರಾ ಅವರ ಮಗನ ಕಾರಿಗೆ ಸಿಲುಕಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು.

‘ರೈತರಿಗೆ ನ್ಯಾಯ ಸಿಗಲೆಂದು ಈ ಧೈರ್ಯಶಾಲಿ ಮಣ್ಣಿನ ಮಕ್ಕಳು ಹುತಾತ್ಮರಾಗಬೇಕಾಯಿತು. ನನ್ನ ಇಡೀ ಬದುಕನ್ನು ನಾನು ಇವರ ಕಲ್ಯಾಣಕ್ಕೆಂದು ಮುಡಿಪಾಗಿಟ್ಟಿದ್ದೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂಥ ಅಸ್ಪಷ್ಟ ಮತ್ತು ಕ್ರೂರ ಕಾನೂನುಗಳನ್ನು ಪಾಲುದಾರರೊಂದಿಗೆ ಸಮಾಲೋಚನೆಯನ್ನೇ ನಡೆಸದೆ ರೂಪಿಸಲಾಗಿದೆ’ ಎಂದು ಪಂಜಾಬ್​ನ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪ್ರಕಾಶ್​ ಸಿಂಗ್ ಬಾದಲ್ ವಿಶ್ಲೇಷಿಸಿದರು. ದೆಹಲಿಯ ಗಡಿಯಲ್ಲಿ ಶಿಬಿರ ಸ್ಥಾಪಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಮಾತುಕತೆ ನಡೆಸುವಂತೆ ಕಳೆದ ಒಂದು ವರ್ಷದಿಂದ ಅಕಾಲಿ ದಳವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಇತ್ತು. ಹಿರಿಯ ನಾಯಕರಾದ ಸುಖ್​ಬಿರ್ ಸಿಂಗ್ ಬಾದಲ್ ಮತ್ತು ಅವರ ಪತ್ನಿ ಹರ್​ಸಿಮ್ರತ್ ಕೌರ್​ ಹಲವು ಬಾರಿ ಜಾಥಾ ನಡೆಸಿ ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.

ಕೃಷಿಕಾಯ್ದೆ ಹಿಂಪಡೆದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವೆ ಹರ್​ಸಿಮ್ರತ್ ಕೌರ್ ಸಹ ಕೃಷಿ ಕಾಯ್ದೆಗಳ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿ ವಿಡಿಯೊ ಒಂದನ್ನು ಟ್ವೀಟ್ ಮಾಡಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ರೈತರ ಕಾನೂನು ಬದ್ಧ ಹಕ್ಕಾಗಿ ಪರಿಗಣಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು? ಇದನ್ನೂ ಓದಿ: Farm Laws Timeline ಕೃಷಿ ಕಾನೂನು ಅಂಗೀಕಾರದಿಂದ ರದ್ದತಿ ನಿರ್ಧಾರವರೆಗೆ ಏನೆಲ್ಲಾ ನಡೆಯಿತು?

Published On - 7:39 pm, Fri, 19 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ