AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಬಿಜೆಪಿಯೊಂದಿಗೆ ಮೈತ್ರಿಯಿಲ್ಲ: ಸ್ಪಷ್ಟ ನಿರ್ಧಾರ ಪ್ರಕಟಿಸಿದ ಅಕಾಲಿ ದಳ ಮುಖ್ಯಸ್ಥ

ಕೃಷಿಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ ಕಳೆದ ವರ್ಷ ಅಕಾಲಿ ದಳವು ಎನ್​ಡಿಎ ಸರ್ಕಾರದಲ್ಲಿದ್ದ ತನ್ನ ಪಕ್ಷದ ಏಕೈಕ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ಅವರಿಂದ ರಾಜೀನಾಮೆ ಕೊಡಿಸಿತ್ತು.

ಪಂಜಾಬ್​ನಲ್ಲಿ ಬಿಜೆಪಿಯೊಂದಿಗೆ ಮೈತ್ರಿಯಿಲ್ಲ: ಸ್ಪಷ್ಟ ನಿರ್ಧಾರ ಪ್ರಕಟಿಸಿದ ಅಕಾಲಿ ದಳ ಮುಖ್ಯಸ್ಥ
ಅಕಾಲಿದಳದ ನಾಯಕ ಸುಖ್​ಬಿರ್ ಸಿಂಗ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವೆ ಹರ್​ಸಿಮ್ರತ್ ಕೌರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 19, 2021 | 7:44 PM

Share

ಚಂಡೀಗಡ: ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷಗಳು ‘ನಾವು ಈ ಮೊದಲೇ ಹೇಳಿರಲಿಲ್ಲವೇ’ ಎನ್ನುವ ಧಾಟಿಯಲ್ಲಿ ಪ್ರತಿಕ್ರಿಯಿಸಿವೆ. ಬಿಜೆಪಿಯ ಒಂದು ಕಾಲದ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳ ಸಹ ಇದಕ್ಕೆ ಹೊರತಾಗಿಲ್ಲ. ಕೃಷಿಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ ಕಳೆದ ವರ್ಷ ಅಕಾಲಿ ದಳವು ಎನ್​ಡಿಎ ಸರ್ಕಾರದಲ್ಲಿದ್ದ ತನ್ನ ಪಕ್ಷದ ಏಕೈಕ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ಅವರಿಂದ ರಾಜೀನಾಮೆ ಕೊಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನ.19) ಕೃಷಿಕಾಯ್ದೆಗಳನ್ನು ಹಿಂಪಡೆಯುವ ಕುರಿತು ನಿರ್ಧಾರ ಪ್ರಕಟಿಸಿದ್ದರು. ಈ ಬೆಳವಣಿಗೆ ನಂತರ ಪಂಜಾಬ್​​ನಲ್ಲಿ ಅಕಾಲಿದಳದ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಹೊಸಿಲಲ್ಲಿರುವ ಪಂಜಾಬ್​ನಲ್ಲಿ ಅಧಿಕಾರಕ್ಕೆ ಮರಳುವ ಕನಸು ಕಾಣುತ್ತಿರುವ ಅಕಾಲಿದಳವು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಕಾಲಿದಳದ ನಾಯಕ ಸುಖ್​ಬಿರ್ ಸಿಂಗ್ ಬಾದಲ್, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕರಾಳ ಕಾಯ್ದೆಯ ಅಪಾಯಗಳ ಬಗ್ಗೆ ಮೊದಲೇ ಹೇಳಿದ್ದೆ’ ಎಂದು ನೆನಪಿಸಿಕೊಂಡರು.

‘ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ 700 ಮಂದಿ ಜೀವ ಕಳೆದುಕೊಂಡಿದ್ದಾರೆ. ದೇಶವು ಈ ಹುತಾತ್ಮರ ತ್ಯಾಗವನ್ನು ಗಮನಿಸಿದೆ. ಈ ಕಾಯ್ದೆಗಳನ್ನು ರೈತರು ಒಪ್ಪಿಕೊಳ್ಳುವುದಿಲ್ಲ ಎಂದು ನಾನು ಬಹಳ ಹಿಂದೆಯೇ ಪ್ರಧಾನಿಗೆ ಕಿವಿಮಾತು ಹೇಳಿದ್ದೆ. ನಮ್ಮ ಮಾತು ನಿಜವಾಯಿತು’ ಎಂದು ಅವರು ಹೇಳಿದರು. ಎನ್​ಡಿಎ ಮೈತ್ರಿಕೂಟದ ಹಳೆಯ ಮಿತ್ರಪಕ್ಷವಾಗಿರುವ ಶಿರೋಮಣಿ ಅಕಾಲಿ ದಳವು ಕಳೆದ ವರ್ಷ ಮೈತ್ರಿಕೂಟದಿಂದ ಹಿಂದೆ ಸರಿಯುವಂತೆ ಮಾಡಿದ ಕಾರಣಗಳನ್ನು ಅವರು ವಿವರಿಸಿದರು.

ಮೋದಿ ಅವರ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ್ದ ಅಕಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್, ಪಂಜಾಬ್​ನ, ದೇಶದ ಮತ್ತು ವಿಶ್ವದ ರೈತರನ್ನು ನಾನು ಅಭಿನಂದಿಸುತ್ತೇನೆ. ಈ ಮಹತ್ವದ ಹೋರಾಟದಲ್ಲಿ ಹುತಾತ್ಮರಾದ 700 ರೈತರ ಕುಟುಂಬಗಳ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಅವರ ಆತ್ಮಾಹುತಿ ಮತ್ತು ಲಖಿಂಪುರ್​ ಖೇರಿಯಂಥ ದುರ್ಘಟನೆಗಳು ಈ ಸರ್ಕಾರದ ಮುಖದ ಮೇಲೆ ಕಪ್ಪುಚುಕ್ಕೆಗಳಾಗಿ ಉಳಿಯುತ್ತವೆ ಎಂದರು. ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರೂ ಸೇರಿದಂತೆ 8 ಮಂದಿ ಕಳೆದ ತಿಂಗಳು ಕೇಂದ್ರ ಸಚಿವ ಅಜಯ್​ಮಿಶ್ರಾ ಅವರ ಮಗನ ಕಾರಿಗೆ ಸಿಲುಕಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು.

‘ರೈತರಿಗೆ ನ್ಯಾಯ ಸಿಗಲೆಂದು ಈ ಧೈರ್ಯಶಾಲಿ ಮಣ್ಣಿನ ಮಕ್ಕಳು ಹುತಾತ್ಮರಾಗಬೇಕಾಯಿತು. ನನ್ನ ಇಡೀ ಬದುಕನ್ನು ನಾನು ಇವರ ಕಲ್ಯಾಣಕ್ಕೆಂದು ಮುಡಿಪಾಗಿಟ್ಟಿದ್ದೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂಥ ಅಸ್ಪಷ್ಟ ಮತ್ತು ಕ್ರೂರ ಕಾನೂನುಗಳನ್ನು ಪಾಲುದಾರರೊಂದಿಗೆ ಸಮಾಲೋಚನೆಯನ್ನೇ ನಡೆಸದೆ ರೂಪಿಸಲಾಗಿದೆ’ ಎಂದು ಪಂಜಾಬ್​ನ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪ್ರಕಾಶ್​ ಸಿಂಗ್ ಬಾದಲ್ ವಿಶ್ಲೇಷಿಸಿದರು. ದೆಹಲಿಯ ಗಡಿಯಲ್ಲಿ ಶಿಬಿರ ಸ್ಥಾಪಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಮಾತುಕತೆ ನಡೆಸುವಂತೆ ಕಳೆದ ಒಂದು ವರ್ಷದಿಂದ ಅಕಾಲಿ ದಳವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಇತ್ತು. ಹಿರಿಯ ನಾಯಕರಾದ ಸುಖ್​ಬಿರ್ ಸಿಂಗ್ ಬಾದಲ್ ಮತ್ತು ಅವರ ಪತ್ನಿ ಹರ್​ಸಿಮ್ರತ್ ಕೌರ್​ ಹಲವು ಬಾರಿ ಜಾಥಾ ನಡೆಸಿ ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.

ಕೃಷಿಕಾಯ್ದೆ ಹಿಂಪಡೆದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವೆ ಹರ್​ಸಿಮ್ರತ್ ಕೌರ್ ಸಹ ಕೃಷಿ ಕಾಯ್ದೆಗಳ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿ ವಿಡಿಯೊ ಒಂದನ್ನು ಟ್ವೀಟ್ ಮಾಡಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ರೈತರ ಕಾನೂನು ಬದ್ಧ ಹಕ್ಕಾಗಿ ಪರಿಗಣಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು? ಇದನ್ನೂ ಓದಿ: Farm Laws Timeline ಕೃಷಿ ಕಾನೂನು ಅಂಗೀಕಾರದಿಂದ ರದ್ದತಿ ನಿರ್ಧಾರವರೆಗೆ ಏನೆಲ್ಲಾ ನಡೆಯಿತು?

Published On - 7:39 pm, Fri, 19 November 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ