AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ

ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು

ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ  ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 28, 2021 | 4:56 PM

Share

ದೆಹಲಿ: 2022 ರಲ್ಲಿ ಆಮ್ ಆದ್ಮಿ ಪಕ್ಷ (AAP) ಪಂಜಾಬ್​​ನಲ್ಲಿ (Punjab) ಅಧಿಕಾರಕ್ಕೆ ಬಂದರೆ ಪಂಜಾಬ್‌ನ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ ₹ 1,000 ವರ್ಗಾವಣೆ ಮಾಡುವ ಎಎಪಿಯ ಚುನಾವಣಾ ಭರವಸೆಯನ್ನು ಪ್ರಶ್ನಿಸಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  (Arvind Kejriwal) ತಮ್ಮ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡರು. ಹೀಗೆ ಮಾಡಿದರೆ ಸರ್ಕಾರದ ಬೊಕ್ಕಸ ಖಾಲಿಯಾಗುತ್ತದೆ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಅಕಾಲಿದಳ ನನ್ನನ್ನು ಟೀಕಿಸುತ್ತಿವೆ ಎಂದು ಕೇಜ್ರಿವಾಲ್ ಪಂಜಾಬಿ ಭಾಷೆಯಲ್ಲಿ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಈ ವಂಶಾಡಳಿತ ಪಕ್ಷಗಳು ವರ್ಷಗಟ್ಟಲೆ ಆಡಳಿತ ನಡೆಸುತ್ತಿದ್ದು ಈಗಾಗಲೇ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿವೆ ಎಂದು ಹೇಳಿದರು.  ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು.  ಮಹಿಳೆಯರನ್ನು ಸಬಲೀಕರಣಗೊಳಿಸಲು ಇದು ಸರಿಯಾದ ಮಾರ್ಗವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಪ್ರಶ್ನಿಸಿದ್ದಾರೆ.  ನಾನು ಪಂಜಾಬ್‌ನ ಮಹಿಳೆಯರಿಂದ ಸಾವಿರಾರು ಕರೆಗಳನ್ನು ಸ್ವೀಕರಿಸಿದ್ದು ಅವರು ಪ್ರಕಟಣೆಯಿಂದ ಸಂತೋಷವಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

2012ರಲ್ಲಿ ಸ್ಥಾಪನೆಯಾದ ಎಎಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು ಆದರೆ ಪಕ್ಷವು ಉತ್ತಮ ಫಲಿತಾಂಶವನ್ನು ನಿರೀಕ್ಷಿಸುತ್ತಿದೆ ಎಂದು ಪಕ್ಷದ ನಾಯಕರು ಹೇಳಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪಂಜಾಬ್‌ನಲ್ಲಿ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್, 24 ಗಂಟೆಗಳ ವಿದ್ಯುತ್ ಪೂರೈಕೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡುವುದಾಗಿ ಕೇಜ್ರಿವಾಲ್ ಈಗಾಗಲೇ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ  ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳಿಂದ ವಾಗ್ದಾಳಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು