AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ

ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು

ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ  ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Nov 28, 2021 | 4:56 PM

Share

ದೆಹಲಿ: 2022 ರಲ್ಲಿ ಆಮ್ ಆದ್ಮಿ ಪಕ್ಷ (AAP) ಪಂಜಾಬ್​​ನಲ್ಲಿ (Punjab) ಅಧಿಕಾರಕ್ಕೆ ಬಂದರೆ ಪಂಜಾಬ್‌ನ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ ₹ 1,000 ವರ್ಗಾವಣೆ ಮಾಡುವ ಎಎಪಿಯ ಚುನಾವಣಾ ಭರವಸೆಯನ್ನು ಪ್ರಶ್ನಿಸಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  (Arvind Kejriwal) ತಮ್ಮ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡರು. ಹೀಗೆ ಮಾಡಿದರೆ ಸರ್ಕಾರದ ಬೊಕ್ಕಸ ಖಾಲಿಯಾಗುತ್ತದೆ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಅಕಾಲಿದಳ ನನ್ನನ್ನು ಟೀಕಿಸುತ್ತಿವೆ ಎಂದು ಕೇಜ್ರಿವಾಲ್ ಪಂಜಾಬಿ ಭಾಷೆಯಲ್ಲಿ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಈ ವಂಶಾಡಳಿತ ಪಕ್ಷಗಳು ವರ್ಷಗಟ್ಟಲೆ ಆಡಳಿತ ನಡೆಸುತ್ತಿದ್ದು ಈಗಾಗಲೇ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿವೆ ಎಂದು ಹೇಳಿದರು.  ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು.  ಮಹಿಳೆಯರನ್ನು ಸಬಲೀಕರಣಗೊಳಿಸಲು ಇದು ಸರಿಯಾದ ಮಾರ್ಗವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಪ್ರಶ್ನಿಸಿದ್ದಾರೆ.  ನಾನು ಪಂಜಾಬ್‌ನ ಮಹಿಳೆಯರಿಂದ ಸಾವಿರಾರು ಕರೆಗಳನ್ನು ಸ್ವೀಕರಿಸಿದ್ದು ಅವರು ಪ್ರಕಟಣೆಯಿಂದ ಸಂತೋಷವಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

2012ರಲ್ಲಿ ಸ್ಥಾಪನೆಯಾದ ಎಎಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು ಆದರೆ ಪಕ್ಷವು ಉತ್ತಮ ಫಲಿತಾಂಶವನ್ನು ನಿರೀಕ್ಷಿಸುತ್ತಿದೆ ಎಂದು ಪಕ್ಷದ ನಾಯಕರು ಹೇಳಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪಂಜಾಬ್‌ನಲ್ಲಿ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್, 24 ಗಂಟೆಗಳ ವಿದ್ಯುತ್ ಪೂರೈಕೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡುವುದಾಗಿ ಕೇಜ್ರಿವಾಲ್ ಈಗಾಗಲೇ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ  ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳಿಂದ ವಾಗ್ದಾಳಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು