AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಜೈಲಿನಲ್ಲಿರುವ ಕೈದಿಯ ಬೆನ್ನಮೇಲೆ ಭಯೋತ್ಪಾದಕ ಎಂದು ಬರೆದು ಚಿತ್ರಹಿಂಸೆ; ತನಿಖೆಗೆ ಆದೇಶ

ಬರ್ನಾಲಾ ಜೈಲಿನ ಕೈದಿ ಕರಮ್‌ಜಿತ್ ಸಿಂಗ್ ಅವರನ್ನು ಜೈಲು ಸೂಪರಿಂಟೆಂಡೆಂಟ್ ಅಮಾನುಷವಾಗಿ ಥಳಿಸಿದ್ದಾರೆ. "ಅತ್ವಾದಿ" ಎಂದರೆ ಭಯೋತ್ಪಾದಕ ಎಂಬ ಪದವನ್ನು ಅವನ ಬೆನ್ನಿನ ಮೇಲೆ ಕೆತ್ತಲಾಗಿದೆ.

ಪಂಜಾಬ್ ಜೈಲಿನಲ್ಲಿರುವ ಕೈದಿಯ ಬೆನ್ನಮೇಲೆ ಭಯೋತ್ಪಾದಕ ಎಂದು ಬರೆದು ಚಿತ್ರಹಿಂಸೆ; ತನಿಖೆಗೆ ಆದೇಶ
ಕೈದಿ ಕರಮ್ ಜಿತ್ ಬೆನ್ನಲ್ಲಿ ಅತ್ವಾದಿ ಎಂದು ಬರೆದಿರುವುದು (ಟ್ವಿಟರ್ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 04, 2021 | 6:29 PM

Share

ಚಂಡೀಗಢ: ಪಂಜಾಬ್‌ನ ಬರ್ನಾಲಾದ ಜೈಲಿನಲ್ಲಿ 28 ವರ್ಷದ ಕೈದಿಯೊಬ್ಬನಿಗೆ ಕಬ್ಬಿಣದ ರಾಡ್‌ನಿಂದ ಅತ್ವಾದಿ (ಭಯೋತ್ಪಾದಕ) ಎಂದು ಬರೆದು ಚಿತ್ರಹಿಂಸೆ ನೀಡಿದ ಆರೋಪದ ಕುರಿತು ಪಂಜಾಬ್ ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ತನಿಖೆಗೆ ಆದೇಶಿಸಿದ್ದಾರೆ. ” ಬರ್ನಾಲಾ ಜೈಲಿನ ಕೈದಿ ಕರಮ್‌ಜಿತ್ ಸಿಂಗ್ ಅವರನ್ನು ಜೈಲು ಸೂಪರಿಂಟೆಂಡೆಂಟ್ ಅಮಾನುಷವಾಗಿ ಥಳಿಸಿದ್ದಾರೆ. “ಅತ್ವಾದಿ” ಎಂದರೆ ಭಯೋತ್ಪಾದಕ ಎಂಬ ಪದವನ್ನು ಅವನ ಬೆನ್ನಿನ ಮೇಲೆ ಕೆತ್ತಲಾಗಿದೆ. ಇದು ಅಘಾತಕಾರಿ ಮತ್ತು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಅಕಾಲಿದಳ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಬುಧವಾರ ಟ್ವೀಟ್ ಮಾಡಿದ್ದಾರೆ.

ಸಿಖ್ಖರನ್ನು ಭಯೋತ್ಪಾದಕರೆಂದು ಬಣ್ಣಿಸಲು ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ದುರುದ್ದೇಶಪೂರಿತ ಉದ್ದೇಶ  ಇದು ಎಂದು ಸಿರ್ಸಾ ಬಣ್ಣಿಸಿದ್ದಾರೆ. “ಪಂಜಾಬ್ ಪೊಲೀಸರು ವಿಚಾರಣಾಧೀನ ಸಿಖ್ ಕೈದಿಯನ್ನು ಥಳಿಸಿದ್ದಾರೆ ಮತ್ತು ಆತನ ಬೆನ್ನಿನ ಮೇಲೆ ‘ಅತ್ವಾದಿ’ ಎಂಬ ಪದವನ್ನು ಕೆತ್ತಲಾಗಿದೆ. ನಾವು ಜೈಲು ಅಧೀಕ್ಷಕರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೈದಿಯಾಗಿರುವ ಕರಮ್‌ಜಿತ್ ಸಿಂಗ್ ಅವರು ಎನ್‌ಡಿಪಿಎಸ್ ಕಾಯ್ದೆಯಡಿ ಬರುವ ಪ್ರಕರಣಗಳು ಸೇರಿದಂತೆ ಸುಮಾರು 11 ಪ್ರಕರಣಗಳಲ್ಲಿ ವಿಚಾರಣೆಯಲ್ಲಿದ್ದಾರೆ. ಎನ್‌ಡಿಪಿಎಸ್ ಪ್ರಕರಣದ ವಿಚಾರಣೆ ನಡೆಯುತ್ತಿರುವ ಮಾನ್ಸಾ ಜಿಲ್ಲೆಯ ನ್ಯಾಯಾಲಯದಲ್ಲಿ ಸಿಂಗ್ ಈ ಆರೋಪ ಮಾಡಿದ್ದಾರೆ. ಈ ಚಿತ್ರಹಿಂಸೆಯ ಆರೋಪ ಹೊತ್ತಿರುವ ಜೈಲು ಸೂಪರಿಂಟೆಂಡೆಂಟ್ ಆರೋಪವನ್ನು ನಿರಾಕರಿಸಿದ್ದಾರೆ. ಕರಮ್‌ಜಿತ್ ಪುನರಾವರ್ತಿತ ಅಪರಾಧಿಯಾಗಿದ್ದು, ಕೆಲವು ದಿನಗಳ ಹಿಂದೆ ಸೆಲ್ ಫೋನ್‌ನೊಂದಿಗೆ ಪತ್ತೆಯಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಸಂಪತ್ತಿನ ಶೇ.85ರಷ್ಟನ್ನು ಶ್ರೀ ಶಿರಡಿ ಸಾಯಿಬಾಬಾಗೆ ಸಮರ್ಪಿಸಿದ ಕೆ.ವಿ.ರಮಣಿ; ಶಿಕ್ಷಣವೆಂದರೆ ಸೇವೆ ಎನ್ನುವ ಉದ್ಯಮಿ ಇವರು

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್