Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜಿಕಲ್​ ಸ್ಟ್ರೈಕ್​​ಗೂ ಪುರಾವೆ ಕೇಳುವ ಕಾಂಗ್ರೆಸ್​​ ಕೈಯಲ್ಲಿ ಪಂಜಾಬ್​ ಸುರಕ್ಷಿತವಲ್ಲ: ಪ್ರಧಾನಿ ನರೇಂದ್ರ ಮೋದಿ

ಪಂಜಾಬಿಯತ್​ ಎಂಬುದು ನಮ್ಮ ಪಾಲಿಗೆ ಅತ್ಯಂತ ಮುಖ್ಯ. ಆದರೆ ಪ್ರತಿಪಕ್ಷ ಪಂಜಾಬ್​​ನ್ನು ಸಿಯಾಸತ್​ (ರಾಜಕೀಯ) ಎಂಬ ಮಸೂರದ ಮೂಲಕ ನೋಡುತ್ತಿದೆ. ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಅವರು ಇಲ್ಲಿನ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ತಪ್ಪು ದಿಕ್ಕಿನಲ್ಲಿ ಮುಂದುವರಿಯುವುದನ್ನು ತಡೆಯುತ್ತಿದ್ದರು ಎಂದು ಪಿಎಂ ಮೋದಿ ಹೇಳಿದ್ದಾರೆ.

ಸರ್ಜಿಕಲ್​ ಸ್ಟ್ರೈಕ್​​ಗೂ ಪುರಾವೆ ಕೇಳುವ ಕಾಂಗ್ರೆಸ್​​ ಕೈಯಲ್ಲಿ ಪಂಜಾಬ್​ ಸುರಕ್ಷಿತವಲ್ಲ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Feb 16, 2022 | 4:10 PM

ಪಂಜಾಬ್​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪಠಾಣ್​ಕೋಟ್​ನಲ್ಲಿ ಚುನಾವಣಾ ರ್ಯಾಲಿ (Election Rally)ನಡೆಸಿದರು. ಇಂದು ಗುರು ರವಿದಾಸ್​ ಜೀ ಜಯಂತಿ ನಿಮಿತ್ತ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಪಂಜಾಬ್​ಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಇದೇ ವೇಳೆ ಪ್ರತಿಪಕ್ಷ, ಪಂಜಾಬ್​ನಲ್ಲಿರುವ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅದು ಕರ್ತಾರ್​ಪುರ ಸಾಹೀಬ್​​ನ್ನು ಭಾರತದ ಭೂಪ್ರದೇಶದಲ್ಲಿಯೇ ಉಳಿಸಿಕೊಳ್ಳಲು ವಿಫಲವಾಯಿತು ಎಂದು ಹೇಳಿದರು.

ನಮ್ಮ ಸೇನೆಯ ಕಾರ್ಯದ ಬಗ್ಗೆಯೇ ಪ್ರಶ್ನೆ ಎತ್ತುವ ಕಾಂಗ್ರೆಸ್​ ಕೈಯಲ್ಲಿ ಎಂದಿಗೂ ಪಂಜಾಬ್​ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆಯೋ, ಅಲ್ಲೆಲ್ಲ ಕುಟುಂಬ ರಾಜಕಾರಣ, ರಿಮೋಟ್​ ಕಂಟ್ರೋಲ್​ ಪೊಲಿಟಿಕ್ಸ್​ಗಳೆಲ್ಲ ಇಲ್ಲವಾಗುತ್ತಿವೆ. ಪಾಕಿಸ್ತಾನ ಪಠಾಣ್​ಕೋಟ್​ ಮೇಲೆ ದಾಳಿ ನಡೆಸಿತು. ಆದರೆ ಈ ಕಾಂಗ್ರೆಸ್ ನಮ್ಮ ಸೇನಾ ಸಾಮರ್ಥ್ಯವನ್ನೇ ಪ್ರಶ್ನಿಸಿತು. ಪಾಕ್​ ಉಗ್ರರ ದಾಳಿಯಲ್ಲಿ ಹುತಾತ್ಮರಾದವರಿಗೆ ಈ ಮೂಲಕ ಅವಮಾನ ಮಾಡಿತು. ಪುಲ್ವಾಮಾ ದಾಳಿಗೆ ಪ್ರತಿಯಾಗಿ ನಮ್ಮ ಸೇನೆ ನಡೆಸಿದ ಪ್ರತಿದಾಳಿಯನ್ನೂ ಕಾಂಗ್ರೆಸ್ ಪ್ರಶ್ನಿಸುತ್ತಿದೆ. ಹೀಗಿರುವ ಕಾಂಗ್ರೆಸ್​ ಕೈಯಲ್ಲಿ ಪಂಜಾಬ್​ ಸುರಕ್ಷಿತವಾಗಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪಂಜಾಬಿಯತ್​ ಎಂಬುದು ನಮ್ಮ ಪಾಲಿಗೆ ಅತ್ಯಂತ ಮುಖ್ಯ. ಆದರೆ ಪ್ರತಿಪಕ್ಷ ಪಂಜಾಬ್​​ನ್ನು ಸಿಯಾಸತ್​ (ರಾಜಕೀಯ) ಎಂಬ ಮಸೂರದ ಮೂಲಕ ನೋಡುತ್ತಿದೆ. ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಅವರು ಇಲ್ಲಿನ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ತಪ್ಪು ದಿಕ್ಕಿನಲ್ಲಿ ಮುಂದುವರಿಯುವುದನ್ನು ತಡೆಯುತ್ತಿದ್ದರು. ಆದರೆ ಈಗ ಅವರೂ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ವೇಳೆ ಆಮ್​ ಆದ್ಮಿ ಪಾರ್ಟಿ ವಿರುದ್ಧವೂ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಮತ್ತು ಆಪ್​ ಎರಡೂ ಪಕ್ಷಗಳೂ ಕೂಡ ನೂರಾ ಕುಸ್ತಿಯಾಡುತ್ತಿವೆ. ಅದೇನಿದ್ದಕೂ ನೋಡುಗರ ಕಣ್ಣಿಗೆ ಮಣ್ಣೆರುಚುವ ಫೈಟಿಂಗ್​ ಅಷ್ಟೇ ಎಂದು ಟೀಕಿಸಿದರು. ಪಂಜಾಬಿಗರ ಭದ್ರತೆ, ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಪಂಜಾಬ್​ ಬಾರ್ಡರ್​ ಬೆಲ್ಟ್​​ನ್ನು ನವೀಕರಿಸಲಿದೆ ಎಂದೂ ತಿಳಿಸಿದರು.

ಫೆ.14ರಂದು ಪಂಜಾಬ್​​ನ ಜಲಂಧರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸಿ, ಅಂದೂ ಕೂಡ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ನ ಸ್ಥಿತಿ ಹದಗೆಟ್ಟಿದೆ. ಆ ಪಕ್ಷವೇ ಛಿದ್ರವಾಗುತ್ತಿರುವಾಗ, ಕಾಂಗ್ರೆಸ್​ ನಾಯಕರು ಒಬ್ಬರಿಗೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದಾರೆ. ಆಂತರಿಕ ಕಚ್ಚಾಟವೇ ತುಂಬಿ ಹೋಗಿದೆ. ಹೀಗಿರುವಾ ಕಾಂಗ್ರೆಸ್​ ಪಂಜಾಬ್​ಗೆ ಸ್ಥಿರ ಆಡಳಿತ ನೀಡಬಹುದೇ ಎಂದು ಪ್ರಶ್ನಿಸಿದ್ದರು. ಪಂಜಾಬ್​​ನಲ್ಲಿ ಫೆ.20ರಂದು ಚುನಾವಣೆ ನಡೆಯಲಿದೆ. ಆದರೆ ಕೃಷಿ ಕಾಯ್ದೆಗಳ ವಿಚಾರದಲ್ಲಿ  ಪಂಜಾಬ್​ ರೈತರು ಜಾಸ್ತಿ ಎನ್ನಿಸುವಷ್ಟು ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. ಹೀಗಾಗಿ ಅಲ್ಲಿ ಕಮಲ ಪಕ್ಷಕ್ಕೆ ಗೆಲುವು ತುಸು ಸವಾಲು ಎಂದೇ ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಈಶ್ವರಪ್ಪ ನೀಡಿದ ಕೇಸರಿ ಧ್ವಜದ ಹೇಳಿಕೆ: ಬಿಜೆಪಿ ಕಾಂಗ್ರೆಸ್ ಶಾಸಕರ ವಾಗ್ವಾದ

Published On - 3:25 pm, Wed, 16 February 22

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ