AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮೇಲೆ ಅನುಮಾನ, ಕೈಕಾಲು ಕಟ್ಟಿ ಕಾಲುವೆಗೆ ಎಸೆದ ತಂದೆ, ಎರಡು ತಿಂಗಳ ಬಳಿಕ ಆಗಿದ್ದೇನು?

ವ್ಯಕ್ತಿಯೊಬ್ಬ ಮಗಳ ಚಾರಿತ್ರ್ಯದ ಮೇಲೆ ಅನುಮಾನ ಪಟ್ಟು ಆಕೆಯ ಕೈಕಾಲು ಕಟ್ಟಿ ಕಾಲುವೆಗೆ ಎಸೆದಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ವಿಪರ್ಯಾಸವೆಂದರೆ ಆಕೆಯ ಎರಡು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾಳೆ. ಹಾಗಾದರೆ ಅಂದು ನಡೆದಿದ್ದೇನು, ಆಕೆ ಬದುಕಿದ್ಹೇಗೆ ಈ ಕುರಿತು ಮಾಹಿತಿ ಇಲ್ಲಿದೆ. ಫಿರೋಜ್​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಮಗಳನ್ನು ತಂದೆ(Father)ಯೊಬ್ಬ ಕೈ ಕಾಲು ಕಟ್ಟಿ ಕಾಲುವೆಗೆ ಎಸೆದಿದ್ದ. ಆಕೆ ಶಾಲೆ ಬಿಟ್ಟಿದ್ದಳು, ನಾಲ್ವರು ಹೆಣ್ಣುಮಕ್ಕಳ ಪೈಕಿ ಆಕೆ ಮೊದಲನೆಯವಳಾಗಿದ್ದಳು. ಆಕೆಯನ್ನು ಕಾಲುವೆಗೆ ಎಸೆದು ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದ.

ಮಗಳ ಮೇಲೆ ಅನುಮಾನ, ಕೈಕಾಲು ಕಟ್ಟಿ ಕಾಲುವೆಗೆ ಎಸೆದ ತಂದೆ, ಎರಡು ತಿಂಗಳ ಬಳಿಕ ಆಗಿದ್ದೇನು?
ಬಾಲಕಿImage Credit source: iStock
ನಯನಾ ರಾಜೀವ್
|

Updated on: Dec 08, 2025 | 12:11 PM

Share

ಚಂಡೀಗಢ, ಡಿಸೆಂಬರ್ 08: ವ್ಯಕ್ತಿಯೊಬ್ಬ ಮಗಳ ಚಾರಿತ್ರ್ಯದ ಮೇಲೆ ಅನುಮಾನ ಪಟ್ಟು ಆಕೆಯ ಕೈಕಾಲು ಕಟ್ಟಿ ಕಾಲುವೆಗೆ ಎಸೆದಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ವಿಪರ್ಯಾಸವೆಂದರೆ ಆಕೆಯ ಎರಡು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾಳೆ. ಹಾಗಾದರೆ ಅಂದು ನಡೆದಿದ್ದೇನು, ಆಕೆ ಬದುಕಿದ್ಹೇಗೆ ಈ ಕುರಿತು ಮಾಹಿತಿ ಇಲ್ಲಿದೆ. ಫಿರೋಜ್​ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಮಗಳನ್ನು ತಂದೆ(Father)ಯೊಬ್ಬ ಕೈ ಕಾಲು ಕಟ್ಟಿ ಕಾಲುವೆಗೆ ಎಸೆದಿದ್ದ. ಆಕೆ ಶಾಲೆ ಬಿಟ್ಟಿದ್ದಳು, ನಾಲ್ವರು ಹೆಣ್ಣುಮಕ್ಕಳ ಪೈಕಿ ಆಕೆ ಮೊದಲನೆಯವಳಾಗಿದ್ದಳು. ಆಕೆಯನ್ನು ಕಾಲುವೆಗೆ ಎಸೆದು ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದ.

ಇದೀಗ ಆಕೆ ಮಾಧ್ಯಮದವರ ಮುಂದೆ ಬಂದು ತಾನು ಪಟ್ಟ ಕಷ್ಟವನ್ನು ಎಲ್ಲರಿಗೂ ವಿವರಿಸಿದ್ದು, ಬದುಕಿ ಬಂದಿದ್ಹೇಗೆ ಎನ್ನುವ ಕುರಿತು ಮಾಹಿತಿ ನೀಡಿದ್ದಾಳೆ. ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿತ್ತು ತಂದೆ ಆಕೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದ, ಕೂಡಲೇ ಆಕೆಯನ್ನು ಎಳೆದುಕೊಂಡು ಹೋಗಿ ಕಾಲುವೆಗೆ ನೂಕಿದ್ದ. ಬಾಲಕಿಯ ಸಂಬಂಧಿಯ ದೂರಿನ ಮೇರೆಗೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಅಂದಿನಿಂದ ಆತ ನ್ಯಾಯಾಂಗ ಬಂಧನದಲ್ಲಿದ್ದ.

ಕಾಲುವೆ ಉಕ್ಕಿ ಹರಿಯುತ್ತಿತ್ತು, ಕೈಯಲ್ಲಿರುವ ಹಗ್ಗ ಸಡಿಲಗೊಂಡಿತ್ತು.ಅಸಹಾಯಕಳಾಗಿ ತೇಲುತ್ತಿದ್ದಳು, ಕಬ್ಬಿಣದ ಸರಳೊಂದಕ್ಕೆ ಆಕೆ ಡಿಕ್ಕಿ ಹೊಡೆದಿದ್ದಳು,  ಅದೇ ಆಕೆಗೆ ಜೀವರಕ್ಷಕವಾಯಿತು. ಅದನ್ನು ಹಿಡಿದು ಆಕೆ ದಡ ತಲುಪಿದ್ದಳು. ನಂತರ ಮೂವರು ದಾರಿ ಹೋಕರು ಆಕೆಯನ್ನು ಗುರುತಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು, ಎರಡು ತಿಂಗಳುಗಳ ಕಾಲ ಅಲ್ಲೇ ಆಶ್ರಯ ಪಡೆದಿದ್ದಳು. ತಾನು ಅನಾರೋಗ್ಯದಿಂದ ಬಳಲುತ್ತಿದ್ದೆ ಎಂದು ಆಕೆ ಹೇಳಿದ್ದಾಳೆ.

ಮತ್ತಷ್ಟು ಓದಿ: Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಆಕೆ ತಂದೆಯನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳನ್ನು ಕೇಳಿಕೊಂಡಿದ್ದಾಳೆ. ತನ್ನ ತಂಗಿಯರನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂದು ಕಣ್ಣೀರಿಟ್ಟಿದ್ದಾಳೆ. ನನ್ನ ಮೇಲೆ ಹಲ್ಲೆ ನಡೆಸುವ ಸಮಯದಲ್ಲಿ ಆತ ಮದ್ಯಪಾನ ಮಾಡಿದ್ದ, ಕೋಪದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದ ಎಂದು ಆಕೆ ಹೇಳಿದ್ದಾಳೆ. ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ, ಈ ಸಾಕ್ಷ್ಯವು ಕೊಲೆ ಪ್ರಕರಣವನ್ನು ಕೊಲೆಯತ್ನ ಪ್ರಕರಣಕ್ಕೆ ಇಳಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ