AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ

ಪಂಜಾಬ್‌ನ ತರಣ್‌ ತಾರಣ್ ಜಿಲ್ಲೆಯಲ್ಲಿ ನಡೆದ ಘೋರ ಕೃತ್ಯದಲ್ಲಿ, ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕರೆತರಲು ಬಂದ ಪತಿಯನ್ನು ಆಕೆಯ ಸಹೋದರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ದುರಂತ ಘಟನೆಯಲ್ಲಿ ಪತಿ ಲವ್‌ಪ್ರೀತ್ ಸಿಂಗ್ ಹಾಗೂ ರಕ್ಷಣೆಗೆ ಬಂದ ಮಹಿಳೆ ಗುರ್ಜಿತ್ ಕೌರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿ ಸಹೋದರ ಸಜನ್ ಸಿಂಗ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ
ಬೆಂಕಿ
ನಯನಾ ರಾಜೀವ್
|

Updated on:Jul 05, 2026 | 2:19 PM

Share

ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ.

ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್ ಕೆಲ ದಿನಗಳಿಂದ ಮುನಿಸಿಕೊಂಡು ತಾಯಿ ಮನೆಗೆ ಹೋಗಿ ಉಳಿದುಕೊಂಡಿದ್ದರು. ಜೂನ್ 13 ರಂದು ಲವ್‌ಪ್ರೀತ್ ಸಿಂಗ್ ಪತ್ನಿಯ ಮನವೊಲಿಸಿ ಮನೆಗೆ ಕರೆದೊಯ್ಯಲು ಅತ್ತೆಯ ಮನೆಗೆ ಹೋಗಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಸಂದೀಪ್ ಕೌರ್ ಸಹೋದರ ಸಜನ್ ಸಿಂಗ್, ಬಾವ ಲವ್‌ಪ್ರೀತ್ ಸಿಂಗ್ ಮೇಲೆ ದಹನಕಾರಿ ವಸ್ತುವನ್ನು ಸುರಿದು ದಿಢೀರನೆ ಬೆಂಕಿ ಹಚ್ಚಿದ್ದಾನೆ.

ರಕ್ಷಿಸಲು ಹೋದ ಮಹಿಳೆಯೂ ಸಾವು ಲವ್‌ಪ್ರೀತ್ ಸಿಂಗ್ ಒದ್ದಾಡುತ್ತಾ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿದ್ದನ್ನು ನೋಡಿ, ಸಜನ್ ಸಿಂಗ್ ಅವರ ಅತ್ತಿಗೆ ಗುರ್ಜಿತ್ ಕೌರ್ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ದುರದೃಷ್ಟವಶಾತ್ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಅವರಿಗೂ ಭೀಕರವಾಗಿ ಸುಟ್ಟ ಗಾಯಗಳಾಗಿದ್ದವು. ತೀವ್ರವಾಗಿ ಗಾಯಗೊಂಡಿದ್ದ ಲವ್‌ಪ್ರೀತ್ ಮತ್ತು ಗುರ್ಜಿತ್ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ಸಜನ್ ಸಿಂಗ್‌ಗೂ ಸುಟ್ಟ ಗಾಯಗಳಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮತ್ತಷ್ಟು ಓದಿ: ಲಕ್ನೋ ಕೋಚಿಂಗ್ ಸೆಂಟರ್​​ನಲ್ಲಿ ಭೀಕರ ಬೆಂಕಿ ದುರಂತ; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ ಈ ಘಟನೆಯ ಮೈ ಜುಂ ಎನಿಸುವ ಸಿಸಿಟಿವಿ (CCTV) ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬನಿಗೆ ದಿಢೀರನೆ ಬೆಂಕಿ ಹಚ್ಚುವುದು, ಆತ ಪ್ರಾಣಭಯದಿಂದ ಬೆಂಕಿ ನಂದಿಸಲು ಓಡುವುದು ಮತ್ತು ಆತನನ್ನು ರಕ್ಷಿಸಲು ಹೋದ ಮಹಿಳೆಯ ಮೈಗೂ ಬೆಂಕಿ ಹೊತ್ತಿಕೊಂಡು ಇಬ್ಬರೂ ಕಿರುಚಾಡುತ್ತಾ ಓಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಆರೋಪಿ ಸಜನ್ ಸಿಂಗ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:19 pm, Sun, 5 July 26

Follow Us
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ