AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟಕ್ಕೆ ದಾರ ಕೊಡಿಸಲಿಲ್ಲವೆಂದು 11 ವರ್ಷದ ಬಾಲಕ ಆತ್ಮಹತ್ಯೆ

ಗಾಳಿಪಟವನ್ನು ಹಾರಿಸಲು ದಾರ ಬೇಕೆಂದು ಹಠ ಹಿಡಿದ 11 ವರ್ಷದ ಬಾಲಕ ರೂಂನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಳಿಪಟ ಹಾರಿಸಲು ದಾರ ಕೊಡಿಸಬೇಕೆಂದು ಆ ಬಾಲಕ ಒತ್ತಾಯಿಸುತ್ತಿದ್ದ. ಅವನ ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಆತನನ್ನು ಓದಲು ರೂಂಗೆ ಕಳುಹಿಸಿದರು. ಸ್ವಲ್ಪ ಹೊತ್ತು ಬಿಟ್ಟು ಹೋದಾಗ ರೂಂ ಲಾಕ್ ಆಗಿತ್ತು. ಅನುಮಾನದಿಂದ ಬಾಗಿಲು ಒಡೆದಾಗ ಆ ಬಾಲಕ ನೇಣು ಹಾಕಿಕೊಂಡಿದ್ದ.

ಗಾಳಿಪಟಕ್ಕೆ ದಾರ ಕೊಡಿಸಲಿಲ್ಲವೆಂದು 11 ವರ್ಷದ ಬಾಲಕ ಆತ್ಮಹತ್ಯೆ
Kite
ಸುಷ್ಮಾ ಚಕ್ರೆ
|

Updated on: Jan 29, 2026 | 8:37 PM

Share

ನವದೆಹಲಿ, ಜನವರಿ 29: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ. ಅದಕ್ಕೆ ಅವರು ಒಪ್ಪಿರಲಿಲ್ಲ. ಹೋಗಿ ಓದಿಕೋ ಎಂದು ಅವರು ಗದರಿ ರೂಂಗೆ ಕಳುಹಿಸಿದ್ದರು. ಸ್ವಲ್ಪ ಹೊತ್ತಾದ ಮೇಲೆ ರೂಂ ಬಳಿ ಹೋಗಿ ನೋಡಿದಾಗ ಆ ರೂಂ ಒಳಗಿಂದ ಲಾಕ್ ಆಗಿತ್ತು. ಆ ಬಾಲಕನನ್ನು ಕರೆದರೂ ಪ್ರತಿಕ್ರಿಯೆ ಬರಲಿಲ್ಲ.

ಅನುಮಾನದಿಂದ ಕುಟುಂಬದ ಸದಸ್ಯರು ಬಾಗಿಲು ಒಡೆದು ಒಳಗೆ ಹೋದಾಗ, ಮಗು ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕರ್ಟನ್ ರಾಡ್‌ಗೆ ನೇಣು ಬಿಗಿದುಕೊಂಡು ಆ ಬಾಲಕ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ

ಕಪುರ್ತಲಾ ಜಿಲ್ಲೆಯ ಫಾಗ್ವಾರಾದ ಪನ್ಶ್ತಾ ಗ್ರಾಮದಲ್ಲಿ ಈ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ, ಮಗುವಿನ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

(ಸೂಚನೆ: ಆತ್ಮಹತ್ಯೆಯನ್ನು ಟಿವಿ9 ಪ್ರಚೋದಿಸುವುದಿಲ್ಲ. ಇದನ್ನು ಕೇವಲ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದರೆ ಆಪ್ತರೊಂದಿಗೆ ಮಾತನಾಡಿ ಅಥವಾ ಮನಶಾಸ್ತ್ರಜ್ಞರ ಸಹಾಯ ಪಡೆಯಿರಿ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ