AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾವೆಲ್ ಏಜೆಂಟ್​​ನಿಂದ ಮೋಸ, ಮಲೇಷ್ಯಾದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದ ಯುವಕ ಆತ್ಮಹತ್ಯೆ

ಯುವಕನ್ನು ವಿದೇಶದಿಂದ ಗಡೀಪಾರು ಮಾಡಲಾಯಿತು. ಇದರಿಂದಾಗಿ ನೊಂದ ಯುವಕ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾನೆ. ಇದೀಗ ಆತನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುವವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಸಂತ್ರಸ್ತರ ಕುಟುಂಬಸ್ಥರು ತಿಳಿಸಿದ್ದಾರೆ.

ಟ್ರಾವೆಲ್ ಏಜೆಂಟ್​​ನಿಂದ ಮೋಸ, ಮಲೇಷ್ಯಾದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದ ಯುವಕ ಆತ್ಮಹತ್ಯೆ
ಮೃತ ಯುವಕ ಲಖ್ವಿಂದರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 12, 2023 | 2:46 PM

Share

ಅಮೃತಸರ ಸೆಪ್ಟೆಂಬರ್ 12: ವಿದೇಶದಿಂದ ಬಂದ ಯುವಕರ ಸಾವಿನ ಸುದ್ದಿಗಳು ಆಗಾಗ ಬರುತ್ತಲೇ ಇರುತ್ತವೆ. ಇದೀಗ ಅಮೃತಸರ (Amritsar) ಸಾಹಿಬ್‌ನ ಸಂಗ್ರೂರ್‌ನ ಖೋಖರ್ ಗ್ರಾಮದ ಬಡ ಕುಟುಂಬದ ಬಾಲಕನೊಬ್ಬ ವಿದೇಶದಿಂದ ವಾಪಸಾಗುವಾಗ ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣವೊಂದು  ವರದಿ ಆಗಿದೆ. ಟ್ರಾವೆಲ್ ಏಜೆಂಟ್ (Travel Agent) ಮೋಸ ಮಾಡಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಯುವಕನ್ನು ವಿದೇಶದಿಂದ ಗಡೀಪಾರು ಮಾಡಲಾಯಿತು. ಇದರಿಂದಾಗಿ ನೊಂದ ಯುವಕ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾನೆ. ಇದೀಗ ಆತನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುವವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಸಂತ್ರಸ್ತರ ಕುಟುಂಬಸ್ಥರು ತಿಳಿಸಿದ್ದಾರೆ.

ಮೃತ ಲಖ್ವಿಂದರ್ ಬಡಕುಟುಂಬದವರು.ಈ ಕುಟುಂಬ ಜನರಿಂದ ಸಾಲ ಪಡೆದು ಹುಡುಗನನ್ನು ಮಲೇಷ್ಯಾಕ್ಕೆ ಕಳುಹಿಸಿದ್ದಾರೆ. ಆದರೆ ಟ್ರಾವೆಲ್ ಏಜೆಂಟ್ ಲಖ್ವಿಂದರ್ ಗೆ ಮೋಸ ಮಾಡಿದ್ದಾನೆ. ಇದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತರ ಅಮ್ಮ ಹೇಳಿದ್ದಾರೆ.

ಇದನ್ನೂ ಓದಿ: ವ್ಯಾಪಾರ ಸಮ್ಮೇಳನಗಳಲ್ಲಿ ಭಾಗವಹಿಸಲು ದುಬೈ ಮತ್ತು ಸ್ಪೇನ್‌ಗೆ 11 ದಿನಗಳ ಪ್ರವಾಸ ಹೊರಟ ಮಮತಾ ಬ್ಯಾನರ್ಜಿ

ಮೃತ ಲಖ್ವಿಂದರ್ ಅವರ ತಂದೆ ಸುಮಾರು 9 ಲಕ್ಷ ರೂಪಾಯಿ ಖರ್ಚು ಮಾಡಿ ಮಲೇಷ್ಯಾಕ್ಕೆ ಕಳುಹಿಸಿದ್ದಾರೆ ಎಂದು ಸ್ನೇಹಿತರು ಹೇಳುತ್ತಾರೆ. ಟ್ರಾವೆಲ್ ಏಜೆಂಟ್ ಅವರಿಗೆ ಕೆಲಸದ ಪರವಾನಗಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ನೀಡಿದ್ದು ಪ್ರವಾಸಿ ವೀಸಾ. ಹೀಗಾಗಿ ಮನನೊಂದ ಲಖ್ವಿಂದರ್ ಈ ಕೃತ್ಯವೆಸಗಿದ್ದಾರೆ ಎಂದು ಸ್ನೇಹಿತರು ಹೇಳಿರುವುದಾಗಿ ಟಿವಿ9 ವಂಜಾಬಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ